ಅಕ್ಟೋಬರ್ 28ಕ್ಕೆ ವಿಶ್ವದಾದ್ಯಂತ ತೆರೆಮೇಲೆ ಕಾಣಿಸಿಕೊಳ್ಳಲಿರುವ ಗಂಧದ ಗುಡಿ ಸಿನಿಮಾ ಸರ್ಕಾರಿ ಶಾಲಾ ಮಕ್ಕಳು ಸಿನಿಮಾ ವೀಕ್ಷಿಸಲು ಗೋವಿಂದರಾಜನಗರದ ಮಾಜಿ ಎಂಎಲ್ಎ ಪ್ರಿಯಾ ಕೃಷ್ಣ ಅವರು ಉಚಿತವಾಗಿ ಸುಮಾರು 100 ಟಿಕೆಟ್ಗಳನ್ನು ನೀಡಿದ್ದಾರೆ.
ಮಕ್ಕಳಿಗೆ ಅನುಕೂಲವಾಗಲೆಂದು ಸುಮಾರು 100 ಟಿಕೆಟ್ಗಳನ್ನು ಉಚಿತವಾಗಿ ನೀಡಲಾಗಿದೆ. ಯುಗ ಎಂಬ ಎಂಜಿಓ ಮೂಲಕ ಈ ವ್ಯವಸ್ಥೆಯನ್ನು ಮಾಡಿದ್ದಾರೆ. ಅಕ್ಟೋಬರ್ 28 ಬೆಳಗ್ಗೆಯ 10.30ರ ಪ್ರದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. ಮಾಗಡಿ ರಸ್ತೆಯಲ್ಲಿರುವ ಕಾಮಾಕ್ಷಿಪಾಳ್ಯದ ವಿಕ್ಟರಿ ಸಿನಿಮಾದಲ್ಲಿ 100 ಸರ್ಕಾರಿ ಶಾಲೆಯ ಮಕ್ಕಳು ಗಂಧದ ಗುಡಿ ಸಿನಿಮಾವನ್ನು ವೀಕ್ಷಣೆ ಮಾಡಲಿದ್ದಾರೆ.
ಅಪ್ಪು ಕೊನೆಯ ಸಿನಿಮಾ ‘ಗಂಧದ ಗುಡಿ’ ಕೇವಲ ಸಿನಿಮಾ ಅಷ್ಟೇ ಅಲ್ಲ. ಮಕ್ಕಳಿಗೆ ಅದೊಂದು ಶೈಕ್ಷಣಿಕ ಪ್ರವಾಸವೂ ಕೂಡ ಹೌದು. ಕರ್ನಾಟಕ ರಮಣೀಯ ಪ್ರದೇಶಗಳು, ವನ್ಯಜೀವಿಗಳು, ಸಸ್ಯರಾಶಿಗಳನ್ನು ಈ ಸಿನಿಮಾ ಮೂಲಕ ತಿಳಿಸಲಾಗಿದೆ. ‘ಗಂಧದ ಗುಡಿ’ ಒಂದು ಸಿನಿಮಾದ ಅನುಭವವನ್ನೂ ನೀಡುತ್ತದೆ. ಜೊತೆಗೆ ಇಂದಿನ ಪೀಳಿಗೆಗೆ ಒಂದು ಸಂದೇಶವನ್ನೂ ರವಾನಿಸುತ್ತೆ. ಈ ಕಾರಣಕ್ಕೆ ‘ಗಂಧದ ಗುಡಿ’ ಒಂದು ವಿಶಿಷ್ಠ ಅನುಭವವೂ ಹೌದು.
ಕರುನಾಡಿನ ಪ್ರಕೃತಿ ಸಂಪತ್ತನ್ನು ತೆರೆಮೇಲೆ ತೋರಿಸುವ ಪ್ರಯತ್ನಕ್ಕೆ ಪುನೀತ್ ರಾಜ್ಕುಮಾರ್ ಮುಂದಾಗಿದ್ದರು. ಅದನ್ನು ಕಣ್ತುಂಬಿಕೊಳ್ಳುವ ಮುನ್ನವೇ ಕಣ್ಮರೆಯಾಗ್ಬಿಟ್ಟರು. ಈಗ ಅವರ ಕನಸು ಜನರಿಗೆ ತಲುಪಲು ವೇದಿಕೆ ಸಜ್ಜಾಗಿದೆ.
2026 ರ ಮುಂಗಾರು ಉತ್ತಮ ಆರಂಭ ಕಂಡಿದ್ದರೂ ಎಲ್ನಿನೊ, ಋಣಾತ್ಮಕ IOD ಹಾಗೂ…
ಮಹಾರಾಷ್ಟ್ರದ ಹಿಂಗೋಲಿಯಲ್ಲಿ ₹2.34 ಕೋಟಿ ಮೌಲ್ಯದ 88,544 ಕೆ.ಜಿ. ಅಡಿಕೆಯನ್ನು ಆಹಾರ ಸುರಕ್ಷತಾ…
ಬೆಂಗಳೂರು ಹಣ್ಣು ಮೇಳಕ್ಕೆ ಭೇಟಿ ನೀಡಿದ ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ಅವರು…
ಕಾಪುವಿನ ಶ್ರೀ ನಾರಾಯಣ ಗುರು ಸಭಾಭವನದಲ್ಲಿ ನಡೆದ ಆಹ್ವಾನಿತರ ಮುಕ್ತ ಚೆಸ್ ಸ್ಪರ್ಧೆಯಲ್ಲಿ…
ಯುರೋಪಿಯನ್ ಒಕ್ಕೂಟವು 365 ಭಾರತೀಯ ಆಹಾರ ಮತ್ತು ಕೃಷಿ ಉತ್ಪನ್ನಗಳಲ್ಲಿ ಕೀಟನಾಶಕ ಹಾಗೂ…
ಕೀಟನಾಶಕ ಅಂಶಗಳು ಪತ್ತೆಯಾದ ಹಿನ್ನೆಲೆಯಲ್ಲಿ ನೇಪಾಳ ಸರ್ಕಾರ ಭಾರತೀಯ ಮಾವಿನ ಹಣ್ಣಿನ ಆಮದಿಗೆ…