Advertisement
ಸುದ್ದಿಗಳು

ಸರ್ಕಾರಿ ಶಾಲೆ ಮಕ್ಕಳಿಗೆ ಗಂಧದ ಗುಡಿ ಸಿನಿಮಾ ವೀಕ್ಷಣೆಗೆ ನೆರವು

Share

ಅಕ್ಟೋಬರ್ 28ಕ್ಕೆ ವಿಶ್ವದಾದ್ಯಂತ ತೆರೆಮೇಲೆ ಕಾಣಿಸಿಕೊಳ್ಳಲಿರುವ ಗಂಧದ ಗುಡಿ ಸಿನಿಮಾ ಸರ್ಕಾರಿ ಶಾಲಾ ಮಕ್ಕಳು ಸಿನಿಮಾ ವೀಕ್ಷಿಸಲು ಗೋವಿಂದರಾಜನಗರದ ಮಾಜಿ ಎಂಎಲ್‌ಎ ಪ್ರಿಯಾ ಕೃಷ್ಣ ಅವರು ಉಚಿತವಾಗಿ ಸುಮಾರು 100 ಟಿಕೆಟ್‌ಗಳನ್ನು ನೀಡಿದ್ದಾರೆ.

ಮಕ್ಕಳಿಗೆ ಅನುಕೂಲವಾಗಲೆಂದು ಸುಮಾರು 100 ಟಿಕೆಟ್‌ಗಳನ್ನು ಉಚಿತವಾಗಿ ನೀಡಲಾಗಿದೆ. ಯುಗ ಎಂಬ ಎಂಜಿಓ ಮೂಲಕ ಈ ವ್ಯವಸ್ಥೆಯನ್ನು ಮಾಡಿದ್ದಾರೆ. ಅಕ್ಟೋಬರ್ 28 ಬೆಳಗ್ಗೆಯ 10.30ರ ಪ್ರದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. ಮಾಗಡಿ ರಸ್ತೆಯಲ್ಲಿರುವ ಕಾಮಾಕ್ಷಿಪಾಳ್ಯದ ವಿಕ್ಟರಿ ಸಿನಿಮಾದಲ್ಲಿ 100 ಸರ್ಕಾರಿ ಶಾಲೆಯ ಮಕ್ಕಳು ಗಂಧದ ಗುಡಿ ಸಿನಿಮಾವನ್ನು ವೀಕ್ಷಣೆ ಮಾಡಲಿದ್ದಾರೆ.

ಅಪ್ಪು ಕೊನೆಯ ಸಿನಿಮಾ ‘ಗಂಧದ ಗುಡಿ’ ಕೇವಲ ಸಿನಿಮಾ ಅಷ್ಟೇ ಅಲ್ಲ. ಮಕ್ಕಳಿಗೆ ಅದೊಂದು ಶೈಕ್ಷಣಿಕ ಪ್ರವಾಸವೂ ಕೂಡ ಹೌದು. ಕರ್ನಾಟಕ ರಮಣೀಯ ಪ್ರದೇಶಗಳು, ವನ್ಯಜೀವಿಗಳು, ಸಸ್ಯರಾಶಿಗಳನ್ನು ಈ ಸಿನಿಮಾ ಮೂಲಕ ತಿಳಿಸಲಾಗಿದೆ. ‘ಗಂಧದ ಗುಡಿ’ ಒಂದು ಸಿನಿಮಾದ ಅನುಭವವನ್ನೂ ನೀಡುತ್ತದೆ. ಜೊತೆಗೆ ಇಂದಿನ ಪೀಳಿಗೆಗೆ ಒಂದು ಸಂದೇಶವನ್ನೂ ರವಾನಿಸುತ್ತೆ. ಈ ಕಾರಣಕ್ಕೆ ‘ಗಂಧದ ಗುಡಿ’ ಒಂದು ವಿಶಿಷ್ಠ ಅನುಭವವೂ ಹೌದು.

ಕರುನಾಡಿನ ಪ್ರಕೃತಿ ಸಂಪತ್ತನ್ನು ತೆರೆಮೇಲೆ ತೋರಿಸುವ ಪ್ರಯತ್ನಕ್ಕೆ ಪುನೀತ್ ರಾಜ್‌ಕುಮಾರ್ ಮುಂದಾಗಿದ್ದರು. ಅದನ್ನು ಕಣ್ತುಂಬಿಕೊಳ್ಳುವ ಮುನ್ನವೇ ಕಣ್ಮರೆಯಾಗ್ಬಿಟ್ಟರು. ಈಗ ಅವರ ಕನಸು ಜನರಿಗೆ ತಲುಪಲು ವೇದಿಕೆ ಸಜ್ಜಾಗಿದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

Published by
ಮಿರರ್‌ ಡೆಸ್ಕ್‌

Recent Posts

ಎತ್ತುಗಳಿಂದ ಡ್ರೋನ್‌ವರೆಗೆ… ಇದು ಭಾರತದ ಕೃಷಿಯ 79 ವರ್ಷಗಳ ಪಯಣ..!

ಸ್ವಾತಂತ್ರ್ಯದ 79 ವರ್ಷಗಳ ಭಾರತದ ಪಯಣದಲ್ಲಿ ಕೃಷಿ -ಎತ್ತು-ನೇಗಿಲಿನಿಂದ ಡ್ರೋನ್, ಡಿಜಿಟಲ್ ಮಾಹಿತಿ…

33 minutes ago

ತೀವ್ರ ವಿರೋಧದ ಹಿನ್ನೆಲೆ – ರಾಜ್ಯದಲ್ಲಿ ಗುಟ್ಕಾ ನಿಷೇಧ ಹಿಂತೆಗೆದುಕೊಳ್ಳಲು ಸರ್ಕಾರ ನಿರ್ಧಾರ – ಹೊರಬೀಳದ ಅಧಿಕೃತ ಆದೇಶ..!

ತೀವ್ರ ವಿರೋಧ ಹಾಗೂ ಅಡಿಕೆ ಬೆಳೆಗಾರರ ಮೇಲಿನ ಪರಿಣಾಮದ ಆತಂಕದ ಹಿನ್ನೆಲೆಯಲ್ಲಿ ರಾಜ್ಯದ…

56 minutes ago

ಗುಟ್ಕಾ–ಪಾನ್‌ಮಸಾಲಾ ನಿಷೇಧ : ಅಡಿಕೆ ಬೆಳೆಗಾರನ ಮುಂದಿರುವ ನಿಜವಾದ ಪ್ರಶ್ನೆ ಏನು?

ಗುಟ್ಕಾ–ಪಾನ್‌ಮಸಾಲಾ ನಿಷೇಧದ ಪರಿಣಾಮ ಅಡಿಕೆ ಮಾರುಕಟ್ಟೆಯ ಮೇಲೆ ಬಿದ್ದರೆ ಅದನ್ನು ಎದುರಿಸಲು ಸರ್ಕಾರ…

1 day ago

ಹವಾಮಾನ ವರದಿ | 13- 08-2026 | ಕರ್ನಾಟಕದಲ್ಲಿ ಮಳೆ ಮುಂದುವರಿಕೆ| ಸುಳ್ಯ, ಘಟ್ಟದ ಕೆಳಭಾಗದಲ್ಲಿ ಮಧ್ಯಾಹ್ನದ ಬಳಿಕ ಹೆಚ್ಚು ಮಳೆ ಸಾಧ್ಯತೆ

ಕರ್ನಾಟಕದ ಕರಾವಳಿ, ಮಲೆನಾಡು ಹಾಗೂ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮುಂದಿನ ದಿನಗಳಲ್ಲೂ ಮಳೆ…

2 days ago

ಎಲ್ ನಿನೊ ಪರಿಣಾಮ 15 ರಾಜ್ಯಗಳ 342 ಜಿಲ್ಲೆಗಳಲ್ಲಿ ಮಳೆ ಕೊರತೆ

ಎಲ್ ನಿನೊದ ಸಂಭಾವ್ಯ ಪರಿಣಾಮಗಳ ಹಿನ್ನೆಲೆಯಲ್ಲಿ ದೇಶದ ಹವಾಮಾನ, ಮುಂಗಾರು ಮತ್ತು ಕೃಷಿ…

2 days ago

ಇನ್ನೊಂದು ಮನೆಯ ಸಮಸ್ಯೆ ನಮಗೆ ಸುದ್ದಿ ; ನಮ್ಮ ಮನೆಯ ನೋವು ಮಾತ್ರ ನಮಗೆ ಸಂಕಟ..! ಯಾಕೆ ?

ಇತರರ ಮನೆಯ ಸಮಸ್ಯೆ ನಮಗೆ ಕುತೂಹಲದ ಸುದ್ದಿಯಾಗಬಹುದು. ಆದರೆ ಆ ಮನೆಯವರಿಗೆ ಅದು…

2 days ago