Advertisement
ಸುದ್ದಿಗಳು

ಸರ್ಕಾರಿ ಶಾಲೆ ಮಕ್ಕಳಿಗೆ ಗಂಧದ ಗುಡಿ ಸಿನಿಮಾ ವೀಕ್ಷಣೆಗೆ ನೆರವು

Share

ಅಕ್ಟೋಬರ್ 28ಕ್ಕೆ ವಿಶ್ವದಾದ್ಯಂತ ತೆರೆಮೇಲೆ ಕಾಣಿಸಿಕೊಳ್ಳಲಿರುವ ಗಂಧದ ಗುಡಿ ಸಿನಿಮಾ ಸರ್ಕಾರಿ ಶಾಲಾ ಮಕ್ಕಳು ಸಿನಿಮಾ ವೀಕ್ಷಿಸಲು ಗೋವಿಂದರಾಜನಗರದ ಮಾಜಿ ಎಂಎಲ್‌ಎ ಪ್ರಿಯಾ ಕೃಷ್ಣ ಅವರು ಉಚಿತವಾಗಿ ಸುಮಾರು 100 ಟಿಕೆಟ್‌ಗಳನ್ನು ನೀಡಿದ್ದಾರೆ.

Advertisement
Advertisement

ಮಕ್ಕಳಿಗೆ ಅನುಕೂಲವಾಗಲೆಂದು ಸುಮಾರು 100 ಟಿಕೆಟ್‌ಗಳನ್ನು ಉಚಿತವಾಗಿ ನೀಡಲಾಗಿದೆ. ಯುಗ ಎಂಬ ಎಂಜಿಓ ಮೂಲಕ ಈ ವ್ಯವಸ್ಥೆಯನ್ನು ಮಾಡಿದ್ದಾರೆ. ಅಕ್ಟೋಬರ್ 28 ಬೆಳಗ್ಗೆಯ 10.30ರ ಪ್ರದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. ಮಾಗಡಿ ರಸ್ತೆಯಲ್ಲಿರುವ ಕಾಮಾಕ್ಷಿಪಾಳ್ಯದ ವಿಕ್ಟರಿ ಸಿನಿಮಾದಲ್ಲಿ 100 ಸರ್ಕಾರಿ ಶಾಲೆಯ ಮಕ್ಕಳು ಗಂಧದ ಗುಡಿ ಸಿನಿಮಾವನ್ನು ವೀಕ್ಷಣೆ ಮಾಡಲಿದ್ದಾರೆ.

Advertisement

ಅಪ್ಪು ಕೊನೆಯ ಸಿನಿಮಾ ‘ಗಂಧದ ಗುಡಿ’ ಕೇವಲ ಸಿನಿಮಾ ಅಷ್ಟೇ ಅಲ್ಲ. ಮಕ್ಕಳಿಗೆ ಅದೊಂದು ಶೈಕ್ಷಣಿಕ ಪ್ರವಾಸವೂ ಕೂಡ ಹೌದು. ಕರ್ನಾಟಕ ರಮಣೀಯ ಪ್ರದೇಶಗಳು, ವನ್ಯಜೀವಿಗಳು, ಸಸ್ಯರಾಶಿಗಳನ್ನು ಈ ಸಿನಿಮಾ ಮೂಲಕ ತಿಳಿಸಲಾಗಿದೆ. ‘ಗಂಧದ ಗುಡಿ’ ಒಂದು ಸಿನಿಮಾದ ಅನುಭವವನ್ನೂ ನೀಡುತ್ತದೆ. ಜೊತೆಗೆ ಇಂದಿನ ಪೀಳಿಗೆಗೆ ಒಂದು ಸಂದೇಶವನ್ನೂ ರವಾನಿಸುತ್ತೆ. ಈ ಕಾರಣಕ್ಕೆ ‘ಗಂಧದ ಗುಡಿ’ ಒಂದು ವಿಶಿಷ್ಠ ಅನುಭವವೂ ಹೌದು.

ಕರುನಾಡಿನ ಪ್ರಕೃತಿ ಸಂಪತ್ತನ್ನು ತೆರೆಮೇಲೆ ತೋರಿಸುವ ಪ್ರಯತ್ನಕ್ಕೆ ಪುನೀತ್ ರಾಜ್‌ಕುಮಾರ್ ಮುಂದಾಗಿದ್ದರು. ಅದನ್ನು ಕಣ್ತುಂಬಿಕೊಳ್ಳುವ ಮುನ್ನವೇ ಕಣ್ಮರೆಯಾಗ್ಬಿಟ್ಟರು. ಈಗ ಅವರ ಕನಸು ಜನರಿಗೆ ತಲುಪಲು ವೇದಿಕೆ ಸಜ್ಜಾಗಿದೆ.

Advertisement
Advertisement
Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

Published by
ಮಿರರ್‌ ಡೆಸ್ಕ್‌

Recent Posts

ನೀವು ನಿರಂತರವಾಗಿ ಹೆಡ್‌ಫೋನ್ ಬಳಸುತ್ತಿದ್ದರೆ ಜಾಗರೂಕರಾಗಿರಿ..! | ಕಿವಿಯ ಮೇಲೆ ಪರಿಣಾಮಗಳು…..

ಇತ್ತೀಚಿನ ದಿನಗಳಲ್ಲಿ, ಜನರು ಮೊಬೈಲ್ ಫೋನ್‌ಗಳನ್ನು(Mobile Phone) ಹಿಡಿದಿಟ್ಟುಕೊಳ್ಳುವ ಬದಲು ಇಯರ್‌ಫೋನ್(Ear Phone)…

9 hours ago

ಸೆಗಣಿಯಲ್ಲಡಗಿದೆ ಬೆಳೆಗೆ ಅವಶ್ಯಕ ಪೋಷಕಾಂಶಗಳು | ನೈಸರ್ಗಿಕ ಕೃಷಿಯಲ್ಲಿ ದೇಸೀ ಗೋವಿನ ಮಹತ್ವ ಬಹಳ ಮುಖ್ಯ |

ಸಸ್ಯಗಳು ಆರೋಗ್ಯಪೂರ್ಣವಾಗಿರಬೇಕಾದರೆ ಸರಿಯಾದ ಪೋಷಕಾಂಶಗಳು ಬೇಕು. ಗೋವಿನ ಸಗಣಿಯಲ್ಲಿ(Cow dung) ಪೂರ್ಣ ಪ್ರಮಾಣದ…

10 hours ago

ಗದಗ ಜಿಮ್ಸ್ ಆಸ್ಪತ್ರೆಗೆ ತಟ್ಟಿದ ಬರದ ಬಿಸಿ | ನೀರಿಲ್ಲದೆ ರೋಗಿಗಳ ಪರದಾಟ | ದಾರಿಕಾಣದಾದ ಸಿಬ್ಬಂದಿಗಳು

ರಾಜ್ಯದ ಕೆಲ ಭಾಗಗಳಲ್ಲಿ ಚೆನ್ನಾಗಿ ಮಳೆಯಾಗುತ್ತಿದೆ(Heavy Rain). ನೀರಿಲ್ಲದೆ ಬೇಸತ್ತಿದ್ದ ಜನ ಜಾನುವಾರುಗಳು…

10 hours ago

ಹವಾಮಾನ ಸಂಕಷ್ಟ | ಕಾದ ಭೂಮಿಗೆ ‘ರೆಡ್‌ ಅಲರ್ಟ್‌’ | ಜಗತ್ತಿನ ತಾಪಮಾನ 1.5 ಡಿಗ್ರಿ ಇಳಿಕೆ ಸಾಧ್ಯವಾಗುತ್ತಿಲ್ಲ…!

ಹವಾಮಾನ ವೈಪರೀತ್ಯ, ತಾಪಮಾನ ಏರಿಕೆ ಜಗತ್ತಿನಲ್ಲಿ ಬಹುದೊಡ್ಡ ಸಮಸ್ಯೆಯಾಗಿದೆ. ಆಹಾರ ಉತ್ಪಾದನೆ ಮೇಲೂ…

11 hours ago

Karnataka Weather | 17-05-2024 | ಹೆಚ್ಚಿನ ಕಡೆಗಳಲ್ಲಿ ಗುಡುಗು ಸಹಿತ ಮಳೆ | ಮೇ 22ರ ನಂತರ ವಾಯುಭಾರ ಕುಸಿತ ಸಾಧ್ಯತೆ |

ಮೇ 22ರ ನಂತರ ಪ್ರಭಲ ಮುಂಗಾರು ಮಾರುತಗಳು ಅಂಡಮಾನ್ ಕಡೆ ಚಲಿಸುವುದರಿಂದ ಬಂಗಾಳಕೊಲ್ಲಿಯಲ್ಲಿ…

12 hours ago