Advertisement
ಸುದ್ದಿಗಳು

ಸರ್ಕಾರಿ ಶಾಲೆ ಮಕ್ಕಳಿಗೆ ಗಂಧದ ಗುಡಿ ಸಿನಿಮಾ ವೀಕ್ಷಣೆಗೆ ನೆರವು

Share

ಅಕ್ಟೋಬರ್ 28ಕ್ಕೆ ವಿಶ್ವದಾದ್ಯಂತ ತೆರೆಮೇಲೆ ಕಾಣಿಸಿಕೊಳ್ಳಲಿರುವ ಗಂಧದ ಗುಡಿ ಸಿನಿಮಾ ಸರ್ಕಾರಿ ಶಾಲಾ ಮಕ್ಕಳು ಸಿನಿಮಾ ವೀಕ್ಷಿಸಲು ಗೋವಿಂದರಾಜನಗರದ ಮಾಜಿ ಎಂಎಲ್‌ಎ ಪ್ರಿಯಾ ಕೃಷ್ಣ ಅವರು ಉಚಿತವಾಗಿ ಸುಮಾರು 100 ಟಿಕೆಟ್‌ಗಳನ್ನು ನೀಡಿದ್ದಾರೆ.

ಮಕ್ಕಳಿಗೆ ಅನುಕೂಲವಾಗಲೆಂದು ಸುಮಾರು 100 ಟಿಕೆಟ್‌ಗಳನ್ನು ಉಚಿತವಾಗಿ ನೀಡಲಾಗಿದೆ. ಯುಗ ಎಂಬ ಎಂಜಿಓ ಮೂಲಕ ಈ ವ್ಯವಸ್ಥೆಯನ್ನು ಮಾಡಿದ್ದಾರೆ. ಅಕ್ಟೋಬರ್ 28 ಬೆಳಗ್ಗೆಯ 10.30ರ ಪ್ರದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. ಮಾಗಡಿ ರಸ್ತೆಯಲ್ಲಿರುವ ಕಾಮಾಕ್ಷಿಪಾಳ್ಯದ ವಿಕ್ಟರಿ ಸಿನಿಮಾದಲ್ಲಿ 100 ಸರ್ಕಾರಿ ಶಾಲೆಯ ಮಕ್ಕಳು ಗಂಧದ ಗುಡಿ ಸಿನಿಮಾವನ್ನು ವೀಕ್ಷಣೆ ಮಾಡಲಿದ್ದಾರೆ.

ಅಪ್ಪು ಕೊನೆಯ ಸಿನಿಮಾ ‘ಗಂಧದ ಗುಡಿ’ ಕೇವಲ ಸಿನಿಮಾ ಅಷ್ಟೇ ಅಲ್ಲ. ಮಕ್ಕಳಿಗೆ ಅದೊಂದು ಶೈಕ್ಷಣಿಕ ಪ್ರವಾಸವೂ ಕೂಡ ಹೌದು. ಕರ್ನಾಟಕ ರಮಣೀಯ ಪ್ರದೇಶಗಳು, ವನ್ಯಜೀವಿಗಳು, ಸಸ್ಯರಾಶಿಗಳನ್ನು ಈ ಸಿನಿಮಾ ಮೂಲಕ ತಿಳಿಸಲಾಗಿದೆ. ‘ಗಂಧದ ಗುಡಿ’ ಒಂದು ಸಿನಿಮಾದ ಅನುಭವವನ್ನೂ ನೀಡುತ್ತದೆ. ಜೊತೆಗೆ ಇಂದಿನ ಪೀಳಿಗೆಗೆ ಒಂದು ಸಂದೇಶವನ್ನೂ ರವಾನಿಸುತ್ತೆ. ಈ ಕಾರಣಕ್ಕೆ ‘ಗಂಧದ ಗುಡಿ’ ಒಂದು ವಿಶಿಷ್ಠ ಅನುಭವವೂ ಹೌದು.

ಕರುನಾಡಿನ ಪ್ರಕೃತಿ ಸಂಪತ್ತನ್ನು ತೆರೆಮೇಲೆ ತೋರಿಸುವ ಪ್ರಯತ್ನಕ್ಕೆ ಪುನೀತ್ ರಾಜ್‌ಕುಮಾರ್ ಮುಂದಾಗಿದ್ದರು. ಅದನ್ನು ಕಣ್ತುಂಬಿಕೊಳ್ಳುವ ಮುನ್ನವೇ ಕಣ್ಮರೆಯಾಗ್ಬಿಟ್ಟರು. ಈಗ ಅವರ ಕನಸು ಜನರಿಗೆ ತಲುಪಲು ವೇದಿಕೆ ಸಜ್ಜಾಗಿದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

Published by
ಮಿರರ್‌ ಡೆಸ್ಕ್‌

Recent Posts

₹2.34 ಕೋಟಿ ಮೌಲ್ಯದ ಅಡಿಕೆ ಜಪ್ತಿ – ಶಿವಮೊಗ್ಗದ 8 ಮಂದಿಯ ವಿರುದ್ಧ ಕೇಸ್..!

ಮಹಾರಾಷ್ಟ್ರದ ಹಿಂಗೋಲಿಯಲ್ಲಿ ₹2.34 ಕೋಟಿ ಮೌಲ್ಯದ 88,544 ಕೆ.ಜಿ. ಅಡಿಕೆಯನ್ನು ಆಹಾರ ಸುರಕ್ಷತಾ…

4 hours ago

ಹಲಸು ಅಭಿವೃದ್ಧಿಗೆ ರಾಷ್ಟ್ರೀಯ ಮಂಡಳಿ ಸ್ಥಾಪಿಸಲು ಮಾಜಿ ಪ್ರಧಾನಿ ದೇವೇ ಗೌಡ ಒತ್ತಾಯ

ಬೆಂಗಳೂರು ಹಣ್ಣು ಮೇಳಕ್ಕೆ ಭೇಟಿ ನೀಡಿದ ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ಅವರು…

4 hours ago

ಕಾಪುವಿನಲ್ಲಿ ಆಹ್ವಾನಿತರ ಮುಕ್ತ ಚೆಸ್ ಸ್ಪರ್ಧೆ ಯಶಸ್ವಿ – ಶ್ರೀ ನಾರಾಯಣ ಗುರು ಸ್ಕೂಲ್ ಆಫ್ ಚೆಸ್ ಆಯೋಜನೆ

ಕಾಪುವಿನ ಶ್ರೀ ನಾರಾಯಣ ಗುರು ಸಭಾಭವನದಲ್ಲಿ ನಡೆದ ಆಹ್ವಾನಿತರ ಮುಕ್ತ ಚೆಸ್ ಸ್ಪರ್ಧೆಯಲ್ಲಿ…

11 hours ago

ಭಾರತದ 365 ಆಹಾರ ಉತ್ಪನ್ನಗಳಲ್ಲಿ ಕೀಟನಾಶಕ, ಭಾರೀ ಲೋಹಗಳ ಅವಶೇಷ ಪತ್ತೆ..!

ಯುರೋಪಿಯನ್ ಒಕ್ಕೂಟವು 365 ಭಾರತೀಯ ಆಹಾರ ಮತ್ತು ಕೃಷಿ ಉತ್ಪನ್ನಗಳಲ್ಲಿ ಕೀಟನಾಶಕ ಹಾಗೂ…

11 hours ago

ನೇಪಾಳದಿಂದ ಭಾರತೀಯ ಮಾವಿನ ಹಣ್ಣಿಗೆ ನಿರ್ಬಂಧ – ಕೀಟನಾಶಕ ಅಂಶಗಳು ಪತ್ತೆ ಹಿನ್ನೆಲೆ ಕ್ರಮ

ಕೀಟನಾಶಕ ಅಂಶಗಳು ಪತ್ತೆಯಾದ ಹಿನ್ನೆಲೆಯಲ್ಲಿ ನೇಪಾಳ ಸರ್ಕಾರ ಭಾರತೀಯ ಮಾವಿನ ಹಣ್ಣಿನ ಆಮದಿಗೆ…

11 hours ago