ಅಕ್ಟೋಬರ್ 28ಕ್ಕೆ ವಿಶ್ವದಾದ್ಯಂತ ತೆರೆಮೇಲೆ ಕಾಣಿಸಿಕೊಳ್ಳಲಿರುವ ಗಂಧದ ಗುಡಿ ಸಿನಿಮಾ ಸರ್ಕಾರಿ ಶಾಲಾ ಮಕ್ಕಳು ಸಿನಿಮಾ ವೀಕ್ಷಿಸಲು ಗೋವಿಂದರಾಜನಗರದ ಮಾಜಿ ಎಂಎಲ್ಎ ಪ್ರಿಯಾ ಕೃಷ್ಣ ಅವರು ಉಚಿತವಾಗಿ ಸುಮಾರು 100 ಟಿಕೆಟ್ಗಳನ್ನು ನೀಡಿದ್ದಾರೆ.
ಮಕ್ಕಳಿಗೆ ಅನುಕೂಲವಾಗಲೆಂದು ಸುಮಾರು 100 ಟಿಕೆಟ್ಗಳನ್ನು ಉಚಿತವಾಗಿ ನೀಡಲಾಗಿದೆ. ಯುಗ ಎಂಬ ಎಂಜಿಓ ಮೂಲಕ ಈ ವ್ಯವಸ್ಥೆಯನ್ನು ಮಾಡಿದ್ದಾರೆ. ಅಕ್ಟೋಬರ್ 28 ಬೆಳಗ್ಗೆಯ 10.30ರ ಪ್ರದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. ಮಾಗಡಿ ರಸ್ತೆಯಲ್ಲಿರುವ ಕಾಮಾಕ್ಷಿಪಾಳ್ಯದ ವಿಕ್ಟರಿ ಸಿನಿಮಾದಲ್ಲಿ 100 ಸರ್ಕಾರಿ ಶಾಲೆಯ ಮಕ್ಕಳು ಗಂಧದ ಗುಡಿ ಸಿನಿಮಾವನ್ನು ವೀಕ್ಷಣೆ ಮಾಡಲಿದ್ದಾರೆ.
ಅಪ್ಪು ಕೊನೆಯ ಸಿನಿಮಾ ‘ಗಂಧದ ಗುಡಿ’ ಕೇವಲ ಸಿನಿಮಾ ಅಷ್ಟೇ ಅಲ್ಲ. ಮಕ್ಕಳಿಗೆ ಅದೊಂದು ಶೈಕ್ಷಣಿಕ ಪ್ರವಾಸವೂ ಕೂಡ ಹೌದು. ಕರ್ನಾಟಕ ರಮಣೀಯ ಪ್ರದೇಶಗಳು, ವನ್ಯಜೀವಿಗಳು, ಸಸ್ಯರಾಶಿಗಳನ್ನು ಈ ಸಿನಿಮಾ ಮೂಲಕ ತಿಳಿಸಲಾಗಿದೆ. ‘ಗಂಧದ ಗುಡಿ’ ಒಂದು ಸಿನಿಮಾದ ಅನುಭವವನ್ನೂ ನೀಡುತ್ತದೆ. ಜೊತೆಗೆ ಇಂದಿನ ಪೀಳಿಗೆಗೆ ಒಂದು ಸಂದೇಶವನ್ನೂ ರವಾನಿಸುತ್ತೆ. ಈ ಕಾರಣಕ್ಕೆ ‘ಗಂಧದ ಗುಡಿ’ ಒಂದು ವಿಶಿಷ್ಠ ಅನುಭವವೂ ಹೌದು.
ಕರುನಾಡಿನ ಪ್ರಕೃತಿ ಸಂಪತ್ತನ್ನು ತೆರೆಮೇಲೆ ತೋರಿಸುವ ಪ್ರಯತ್ನಕ್ಕೆ ಪುನೀತ್ ರಾಜ್ಕುಮಾರ್ ಮುಂದಾಗಿದ್ದರು. ಅದನ್ನು ಕಣ್ತುಂಬಿಕೊಳ್ಳುವ ಮುನ್ನವೇ ಕಣ್ಮರೆಯಾಗ್ಬಿಟ್ಟರು. ಈಗ ಅವರ ಕನಸು ಜನರಿಗೆ ತಲುಪಲು ವೇದಿಕೆ ಸಜ್ಜಾಗಿದೆ.
ಆಗಸ್ಟ್ 2ರಿಂದ 8ರವರೆಗೆ ಮಂಗಳೂರಿನಲ್ಲಿ ರಾಷ್ಟ್ರೀಯ ಅಂಡರ್-11 ಮುಕ್ತ ಹಾಗೂ ಬಾಲಕಿಯರ ಚೆಸ್…
ICAR-CPCRI ಸಂಶೋಧನೆಯ ಪ್ರಕಾರ ಅಡಿಕೆ ತಳಿಗಳಲ್ಲಿ ಆಲ್ಕಲಾಯ್ಡ್ ಪ್ರಮಾಣದಲ್ಲಿ ಗಣನೀಯ ವ್ಯತ್ಯಾಸವಿದೆ. ಮಂಗಳ…
ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯಲ್ಲಿ ನಿರಂತರ ಮಳೆಯಾಗುತ್ತಿರುವ ಹಿನ್ನೆಲೆ ಮುಂಜಾಗೃತಾ ಕ್ರಮವಾಗಿ…
ಮಂಗಳೂರಿನಲ್ಲಿ ಜುಲೈ 30ರಂದು ವಿವಿಧ ಖಾಸಗಿ ಸಂಸ್ಥೆಗಳ ಹುದ್ದೆಗಳ ಭರ್ತಿಗಾಗಿ ನೇರ ಸಂದರ್ಶನ…
ಆಹಾರ ಉತ್ಪಾದನೆಯಲ್ಲಿ ಸ್ವಾವಲಂಬನೆ ಸಾಧಿಸಿರುವ ಭಾರತ, ರಸಗೊಬ್ಬರದಲ್ಲಿ ಇನ್ನೂ ಆಮದು ಅವಲಂಬಿತವಾಗಿದೆ. ದೇಶೀಯ…
ಕರಾವಳಿ ಮತ್ತು ಮಲೆನಾಡಿನಲ್ಲಿ ಸಾಧಾರಣ ಮಳೆ ಮುಂದುವರಿಯಲಿದ್ದು, ಸುಳ್ಯ-ಮಡಿಕೇರಿ ಘಾಟಿ ಭಾಗಗಳಲ್ಲಿ ಮಳೆ…