ಅಕ್ಟೋಬರ್ 28ಕ್ಕೆ ವಿಶ್ವದಾದ್ಯಂತ ತೆರೆಮೇಲೆ ಕಾಣಿಸಿಕೊಳ್ಳಲಿರುವ ಗಂಧದ ಗುಡಿ ಸಿನಿಮಾ ಸರ್ಕಾರಿ ಶಾಲಾ ಮಕ್ಕಳು ಸಿನಿಮಾ ವೀಕ್ಷಿಸಲು ಗೋವಿಂದರಾಜನಗರದ ಮಾಜಿ ಎಂಎಲ್ಎ ಪ್ರಿಯಾ ಕೃಷ್ಣ ಅವರು ಉಚಿತವಾಗಿ ಸುಮಾರು 100 ಟಿಕೆಟ್ಗಳನ್ನು ನೀಡಿದ್ದಾರೆ.
ಮಕ್ಕಳಿಗೆ ಅನುಕೂಲವಾಗಲೆಂದು ಸುಮಾರು 100 ಟಿಕೆಟ್ಗಳನ್ನು ಉಚಿತವಾಗಿ ನೀಡಲಾಗಿದೆ. ಯುಗ ಎಂಬ ಎಂಜಿಓ ಮೂಲಕ ಈ ವ್ಯವಸ್ಥೆಯನ್ನು ಮಾಡಿದ್ದಾರೆ. ಅಕ್ಟೋಬರ್ 28 ಬೆಳಗ್ಗೆಯ 10.30ರ ಪ್ರದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. ಮಾಗಡಿ ರಸ್ತೆಯಲ್ಲಿರುವ ಕಾಮಾಕ್ಷಿಪಾಳ್ಯದ ವಿಕ್ಟರಿ ಸಿನಿಮಾದಲ್ಲಿ 100 ಸರ್ಕಾರಿ ಶಾಲೆಯ ಮಕ್ಕಳು ಗಂಧದ ಗುಡಿ ಸಿನಿಮಾವನ್ನು ವೀಕ್ಷಣೆ ಮಾಡಲಿದ್ದಾರೆ.
ಅಪ್ಪು ಕೊನೆಯ ಸಿನಿಮಾ ‘ಗಂಧದ ಗುಡಿ’ ಕೇವಲ ಸಿನಿಮಾ ಅಷ್ಟೇ ಅಲ್ಲ. ಮಕ್ಕಳಿಗೆ ಅದೊಂದು ಶೈಕ್ಷಣಿಕ ಪ್ರವಾಸವೂ ಕೂಡ ಹೌದು. ಕರ್ನಾಟಕ ರಮಣೀಯ ಪ್ರದೇಶಗಳು, ವನ್ಯಜೀವಿಗಳು, ಸಸ್ಯರಾಶಿಗಳನ್ನು ಈ ಸಿನಿಮಾ ಮೂಲಕ ತಿಳಿಸಲಾಗಿದೆ. ‘ಗಂಧದ ಗುಡಿ’ ಒಂದು ಸಿನಿಮಾದ ಅನುಭವವನ್ನೂ ನೀಡುತ್ತದೆ. ಜೊತೆಗೆ ಇಂದಿನ ಪೀಳಿಗೆಗೆ ಒಂದು ಸಂದೇಶವನ್ನೂ ರವಾನಿಸುತ್ತೆ. ಈ ಕಾರಣಕ್ಕೆ ‘ಗಂಧದ ಗುಡಿ’ ಒಂದು ವಿಶಿಷ್ಠ ಅನುಭವವೂ ಹೌದು.
ಕರುನಾಡಿನ ಪ್ರಕೃತಿ ಸಂಪತ್ತನ್ನು ತೆರೆಮೇಲೆ ತೋರಿಸುವ ಪ್ರಯತ್ನಕ್ಕೆ ಪುನೀತ್ ರಾಜ್ಕುಮಾರ್ ಮುಂದಾಗಿದ್ದರು. ಅದನ್ನು ಕಣ್ತುಂಬಿಕೊಳ್ಳುವ ಮುನ್ನವೇ ಕಣ್ಮರೆಯಾಗ್ಬಿಟ್ಟರು. ಈಗ ಅವರ ಕನಸು ಜನರಿಗೆ ತಲುಪಲು ವೇದಿಕೆ ಸಜ್ಜಾಗಿದೆ.
ಬೇರೊಬ್ಬರ ಬದುಕಿನೊಂದಿಗೆ ನಿರಂತರ ಹೋಲಿಕೆ ನಮ್ಮ ನೆಮ್ಮದಿ ಮತ್ತು ಆತ್ಮವಿಶ್ವಾಸವನ್ನು ಕಸಿದುಕೊಳ್ಳಬಹುದು. ಮತ್ತೊಬ್ಬರ…
ಶಿಕ್ಷಕರ ದಿನಾಚರಣೆ ಶಿಕ್ಷಕರನ್ನು ಸನ್ಮಾನಿಸುವ ದಿನ ಮಾತ್ರವಲ್ಲ, ಶಿಕ್ಷಕತ್ವ ಮತ್ತು ಶಿಕ್ಷಣದ ನಿಜವಾದ…
ಮುಂಗಾರು ಮಳೆ ಕೊರತೆ ಹಿನ್ನೆಲೆಯಲ್ಲಿ ಕರ್ನಾಟಕದಲ್ಲಿ ₹28.52 ಕೋಟಿ ವೆಚ್ಚದ 60 ದಿನಗಳ…
ಬಿಹಾರದ ಯುರೆನ್ನಲ್ಲಿ ಪತ್ತೆಯಾದ 5 ಲಕ್ಷಕ್ಕೂ ಹೆಚ್ಚು ಸುಟ್ಟ ಬೀಜಗಳ ಅಧ್ಯಯನವು ಭಾರತದ…
ಶ್ರೀಕೃಷ್ಣನನ್ನು ಕೇವಲ ದೇವರ ಅವತಾರವಾಗಿ ನೋಡುವುದಕ್ಕಿಂತ, ಮನುಷ್ಯರ ನಡುವೆ ನಿಂತು ಉಪದೇಶಿಸಿದ ಮಾನವಶಿಕ್ಷಕನಾಗಿಯೂ…
ಮುಂಗಾರು ದುರ್ಬಲಗೊಂಡಿದ್ದರೂ ಸ್ಥಳೀಯ ಮೋಡಗಳ ಬೆಳವಣಿಗೆಯಿಂದ ಮಲೆನಾಡು ಹಾಗೂ ಒಳನಾಡಿನಲ್ಲಿ ಗುಡುಗು ಸಹಿತ…