ಕೇಂದ್ರ ಸರ್ಕಾರದ ಅಧೀನದಲ್ಲಿ ಬರುವ ವಿವಿಧ ಭದ್ರತಾ ಪಡೆಗಳಲ್ಲಿ 24,000 ಕ್ಕೂ ಹೆಚ್ಚು ಕಾನ್ಸ್ ಟೇಬಲ್ ಗಳ ನೇಮಕಕ್ಕೆ ಅರ್ಜಿ ಆಹ್ವಾನಿಸಲಾಗಿದ್ದು, ಹಿಂದಿ ಅಥವಾ ಇಂಗ್ಲೀಷ್ ನಲ್ಲಿ ಮಾತ್ರ ಪರೀಕ್ಷೆ ಬರೆಯಲು ಅವಕಾಶ ನೀಡಿದೆ. ಹೀಗಾಗಿ ಕನ್ನಡಿಗರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಕೇಂದ್ರ ಸರ್ಕಾರದ ಅಧೀನದಲ್ಲಿ ಬರುವ ವಿವಿಧ ಭದ್ರತಾ ಪಡೆಗಳಲ್ಲಿ 24,000 ಕ್ಕೂ ಹೆಚ್ಚು ಹುದ್ದೆಗಳ ನೇಮಕಾತಿ ಪರೀಕ್ಷೆಗೆ ಹಿಂದಿ ಅಥವಾ ಇಂಗ್ಲೀಷ್ ನಲ್ಲಿ ಮಾತ್ರ ಪರೀಕ್ಷೆ ಬರೆಯಲು ಅವಕಾಶ ನೀಡಿದೆ.10 ನೇ ತರಗತಿ ಕನಿಷ್ಟ ವಿದ್ಯಾರ್ಹತೆ ಇರುವ ಪರೀಕ್ಷೆಯಲ್ಲಿ ಕೇವಲ ಎಸ್ಎಸ್ ಎಲ್ ಸಿ ಪಾಸಾದವರು ಇಂಗ್ಲಿಷ್ ಮತ್ತು ಹಿಂದಿಯಲ್ಲಿ ಮಾತ್ರ ಪರೀಕ್ಷೆ ಬರೆಯಬೇಕು ಅಂದರೆ ಹೇಗೆ ಸಾಧ್ಯ. ಕನ್ನಡದಲ್ಲಿ ಏಕೆ ಪರೀಕ್ಷೆ ನಡೆಸುತ್ತಿಲ್ಲ. ಹಿಂದಿ ಭಾಷಿಕರನ್ನೇ ಹೆಚ್ಚಾಗಿ ನೇಮಕ ಮಾಡಿಕೊಳ್ಳಲು ನಡೆಸಿರುವ ಹುನ್ನಾರ ಎಂದು ಕನ್ನಡಿಗರು ಆಕ್ಷೇಪ ವ್ಯಕ್ತಪಡಿಸಿದ್ದಾರೆ.
Advertisement
ಇದು ನಮ್ಮ YouTube ಚಾನೆಲ್ -
Subscribe ಮಾಡಿ ಬೆಂಬಲಿಸಿ
Advertisement
Rural Mirror Special |
Subscribe Our Channel