ಕಳೆದ ಬಾರಿ ಮುಂಗಾರು(Mansoon) ಕೈಕೊಟ್ಟಿದ್ದ ಹಿನ್ನೆಲೆ ರಾಜ್ಯಾದ್ಯಂತ ಬರಗಾಲ(Drought) ಆವರಿಸಿತ್ತು. ಆದರೆ ಈ ಬಾರಿ ಮುಂಗಾರು ನಿರೀಕ್ಷೆಗಿಂತ ಹೆಚ್ಚಾಗಿ ಈಗಾಗಲೇ ಮಲೆನಾಡು(Malenadu), ಕರಾವಳಿಯಲ್ಲಿ(Coastal) ಸುರಿಯುತ್ತಿದೆ. ಮಲೆನಾಡಿನಲ್ಲಿ ವಾಡಿಕೆಯಂತೆ ಜನವರಿಯಿಂದ ಜೂನ್ವರೆಗೆ 817 ಮಿ.ಮೀ ಮಳೆಯಾಗಬೇಕು. ಆದರೆ 1,096 ಮಿ.ಮೀ ಮಳೆ ಸುರಿದಿದ್ದು, ಇದು ಶೇ 76 ರಷ್ಟು ಹೆಚ್ಚು. ಕಳೆದ ಒಂದೇ ವಾರದಲ್ಲಿ 120 ಮಿ.ಮೀ ಮಳೆ ಆಗಬೇಕಿದ್ದು, 320 ಮಿ.ಮೀ ಮಳೆ ಬಿದ್ದಿದೆ(Excess Rainfall) ಎಂದು ಚಿಕ್ಕಮಗಳೂರಿನ(Chikkamagaluru) ಜಿಲ್ಲಾಧಿಕಾರಿ ಮೀನಾ ನಾಗಾರಾಜ್ ಮಾಹಿತಿ ನೀಡಿದರು.
ಈ ವರ್ಷದ ಮಹಾಮಳೆಗೆ 193 ಮನೆಗಳು ಧರಾಶಾಹಿಯಾಗಿವೆ. 77 ಮನೆಗಳಿಗೆ ಜಿಲ್ಲಾಡಳಿತ ಪರಿಹಾರ ನೀಡಿದೆ. 44 ಮನೆಗಳಿಗೆ ದಾಖಲೆ ಇಲ್ಲ ಎಂದು ಸರ್ಕಾರಕ್ಕೆ ವರದಿ ನೀಡಲಾಗಿದೆ. 1,800 ವಿದ್ಯುತ್ ಕಂಬಗಳು, 48 ಸೇತುವೆಗಳು ಹಾನಿಗೀಡಾಗಿವೆ. 90 ಎಕರೆ ತೋಟದ ಬೆಳೆ ನಾಶವಾಗಿದೆ. 10 ಕಿ.ಮೀ ರಸ್ತೆ ಹಾನಿಗೊಂಡಿದೆ. ಮುಳ್ಳಯ್ಯನಗಿರಿಯಲ್ಲಿ ಹಲವೆಡೆ ಭೂಕುಸಿತ ಉಂಟಾಗಿದ್ದು ಒಂದು ವಾರ ಪ್ರವಾಸಿಗರಿಗೆ ನಿರ್ಬಂಧ ಹೇರಲಾಗಿತ್ತು. ಲೋಕೋಪಯೋಗಿ ಇಲಾಖೆಯ ಮನವಿಯಂತೆ ಇನ್ನೊಂದು ವಾರ ಜಿಲ್ಲಾಡಳಿತ ನಿರ್ಬಂಧ ಹೇರಲಿದೆ ಎಂದು ಹೇಳಿದರು.
ಹಲಸಿನ ಹಣ್ಣಿನ ಬಜ್ಜಿಗೆ ಬೇಕಾಗುವ ಸಾಮಗ್ರಿಗಳು ಮತ್ತು ಮಾಡುವ ವಿಧಾನ : ಹಲಸಿನ…
ಎತ್ತಿನಹೊಳೆ ಯೋಜನೆಯಡಿ ಮೊದಲು ಕೋಲಾರ, ಚಿಕ್ಕಬಳ್ಳಾಪುರ ಮತ್ತು ಬೆಂಗಳೂರು ಗ್ರಾಮಾಂತರ ಜಿಲ್ಲೆಗಳ ಕೆರೆಗಳನ್ನು…
ದೇಶದ ರೈತರ ಹಿತಕ್ಕೆ ಧಕ್ಕೆಯಾಗುವ ಯಾವುದೇ ಒಪ್ಪಂದಗಳನ್ನು ಭಾರತ ಮಾಡಿಕೊಳ್ಳುವುದಿಲ್ಲ ಎಂದು ಕೃಷಿ…
ಬಂಗಾಳಕೊಲ್ಲಿಯ ಆಂದ್ರಾ, ಒಡಿಶಾ ಕರಾವಳಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತವು ಆಗಸ್ಟ್ 18,19 ರಂದು…
ಗ್ರಾಮೀಣ ಮಟ್ಟದ ಆರ್ಥಿಕ ಸಹಕಾರ ಸಂಘಗಳ ಪ್ರಮುಖ ಚಟುವಟಿಕೆ ಎಂದರೆ ಸದಸ್ಯರಿಂದ ಠೇವಣಾತಿ…
ಶೀಘ್ರದಲ್ಲೇ ಜಿಲ್ಲಾ ಪಂಚಾಯತ್ ಹಾಗೂ ತಾಲ್ಲೂಕು ಪಂಚಾಯತಿಗಳಿಗೆ ಚುನಾವಣೆ ನಡೆಸಲಾಗುವುದು ಎಂದು ಗ್ರಾಮೀಣಾಭಿವೃದ್ಧಿ…