ಕಳೆದ ಬಾರಿ ಮುಂಗಾರು(Mansoon) ಕೈಕೊಟ್ಟಿದ್ದ ಹಿನ್ನೆಲೆ ರಾಜ್ಯಾದ್ಯಂತ ಬರಗಾಲ(Drought) ಆವರಿಸಿತ್ತು. ಆದರೆ ಈ ಬಾರಿ ಮುಂಗಾರು ನಿರೀಕ್ಷೆಗಿಂತ ಹೆಚ್ಚಾಗಿ ಈಗಾಗಲೇ ಮಲೆನಾಡು(Malenadu), ಕರಾವಳಿಯಲ್ಲಿ(Coastal) ಸುರಿಯುತ್ತಿದೆ. ಮಲೆನಾಡಿನಲ್ಲಿ ವಾಡಿಕೆಯಂತೆ ಜನವರಿಯಿಂದ ಜೂನ್ವರೆಗೆ 817 ಮಿ.ಮೀ ಮಳೆಯಾಗಬೇಕು. ಆದರೆ 1,096 ಮಿ.ಮೀ ಮಳೆ ಸುರಿದಿದ್ದು, ಇದು ಶೇ 76 ರಷ್ಟು ಹೆಚ್ಚು. ಕಳೆದ ಒಂದೇ ವಾರದಲ್ಲಿ 120 ಮಿ.ಮೀ ಮಳೆ ಆಗಬೇಕಿದ್ದು, 320 ಮಿ.ಮೀ ಮಳೆ ಬಿದ್ದಿದೆ(Excess Rainfall) ಎಂದು ಚಿಕ್ಕಮಗಳೂರಿನ(Chikkamagaluru) ಜಿಲ್ಲಾಧಿಕಾರಿ ಮೀನಾ ನಾಗಾರಾಜ್ ಮಾಹಿತಿ ನೀಡಿದರು.
ಈ ವರ್ಷದ ಮಹಾಮಳೆಗೆ 193 ಮನೆಗಳು ಧರಾಶಾಹಿಯಾಗಿವೆ. 77 ಮನೆಗಳಿಗೆ ಜಿಲ್ಲಾಡಳಿತ ಪರಿಹಾರ ನೀಡಿದೆ. 44 ಮನೆಗಳಿಗೆ ದಾಖಲೆ ಇಲ್ಲ ಎಂದು ಸರ್ಕಾರಕ್ಕೆ ವರದಿ ನೀಡಲಾಗಿದೆ. 1,800 ವಿದ್ಯುತ್ ಕಂಬಗಳು, 48 ಸೇತುವೆಗಳು ಹಾನಿಗೀಡಾಗಿವೆ. 90 ಎಕರೆ ತೋಟದ ಬೆಳೆ ನಾಶವಾಗಿದೆ. 10 ಕಿ.ಮೀ ರಸ್ತೆ ಹಾನಿಗೊಂಡಿದೆ. ಮುಳ್ಳಯ್ಯನಗಿರಿಯಲ್ಲಿ ಹಲವೆಡೆ ಭೂಕುಸಿತ ಉಂಟಾಗಿದ್ದು ಒಂದು ವಾರ ಪ್ರವಾಸಿಗರಿಗೆ ನಿರ್ಬಂಧ ಹೇರಲಾಗಿತ್ತು. ಲೋಕೋಪಯೋಗಿ ಇಲಾಖೆಯ ಮನವಿಯಂತೆ ಇನ್ನೊಂದು ವಾರ ಜಿಲ್ಲಾಡಳಿತ ನಿರ್ಬಂಧ ಹೇರಲಿದೆ ಎಂದು ಹೇಳಿದರು.
ಮಿಜೋರಾಂನ ಅಸ್ಸಾಂ ರೈಫಲ್ಸ್ ಸಿಬ್ಬಂದಿ ಮತ್ತು ಕಸ್ಟಮ್ಸ್ ಅಧಿಕಾರಿಗಳು ಜಂಟಿ ಕಾರ್ಯಾಚರಣೆ ನಡೆಸಿ,…
ಜೂನ್ 14 ರಿಂದ ಕರಾವಳಿ ಜಿಲ್ಲೆಗಳಲ್ಲಿ ಸಾಮಾನ್ಯ ಮುಂಗಾರು ಮಳೆ ಮುಂದುವರಿಯಲಿದ್ದು, ಜೂನ್…
ಕರಾವಳಿ ಹಾಗೂ ರಾಜ್ಯದ ಹಲವೆಡೆ ಮಳೆಯಾಗುತ್ತಿದೆ.ಉತ್ತರಕನ್ನಡ ಜಿಲ್ಲೆಯ ಕಾರವಾರ, ಅಂಕೋಲಾ, ಕುಮಟಾ ಹಾಗೂ…
ಹೆಚ್ಚಿನ ಮಾಹಿತಿಗಾಗಿ ರಾಯರ ಪರಮಭಕ್ತರದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490
ಟೇಕ್ ಆಫ್ ಆಗುತ್ತಿದ್ದ ಏರ್ ಇಂಡಿಯಾ ವಿಮಾನ ಪತನವಾಗಿರುವ ಘಟನೆ ಗುಜರಾತಿನ ಅಹಮದಾಬಾದ್ನಲ್ಲಿ…
ಜೂನ್ 13ರಿಂದ ಗಾಳಿಯ ಚಲನೆಯು ನೈರುತ್ಯದಿಂದ ಈಶಾನ್ಯಕ್ಕೆ ಬದಲಾಗುವ ಸಾಧ್ಯತೆಗಳಿರುವುದರಿಂದ ರಾಜ್ಯದ ವಿವಿದೆಡೆ…