ಕಳೆದ ಬಾರಿ ಮುಂಗಾರು(Mansoon) ಕೈಕೊಟ್ಟಿದ್ದ ಹಿನ್ನೆಲೆ ರಾಜ್ಯಾದ್ಯಂತ ಬರಗಾಲ(Drought) ಆವರಿಸಿತ್ತು. ಆದರೆ ಈ ಬಾರಿ ಮುಂಗಾರು ನಿರೀಕ್ಷೆಗಿಂತ ಹೆಚ್ಚಾಗಿ ಈಗಾಗಲೇ ಮಲೆನಾಡು(Malenadu), ಕರಾವಳಿಯಲ್ಲಿ(Coastal) ಸುರಿಯುತ್ತಿದೆ. ಮಲೆನಾಡಿನಲ್ಲಿ ವಾಡಿಕೆಯಂತೆ ಜನವರಿಯಿಂದ ಜೂನ್ವರೆಗೆ 817 ಮಿ.ಮೀ ಮಳೆಯಾಗಬೇಕು. ಆದರೆ 1,096 ಮಿ.ಮೀ ಮಳೆ ಸುರಿದಿದ್ದು, ಇದು ಶೇ 76 ರಷ್ಟು ಹೆಚ್ಚು. ಕಳೆದ ಒಂದೇ ವಾರದಲ್ಲಿ 120 ಮಿ.ಮೀ ಮಳೆ ಆಗಬೇಕಿದ್ದು, 320 ಮಿ.ಮೀ ಮಳೆ ಬಿದ್ದಿದೆ(Excess Rainfall) ಎಂದು ಚಿಕ್ಕಮಗಳೂರಿನ(Chikkamagaluru) ಜಿಲ್ಲಾಧಿಕಾರಿ ಮೀನಾ ನಾಗಾರಾಜ್ ಮಾಹಿತಿ ನೀಡಿದರು.
ಈ ವರ್ಷದ ಮಹಾಮಳೆಗೆ 193 ಮನೆಗಳು ಧರಾಶಾಹಿಯಾಗಿವೆ. 77 ಮನೆಗಳಿಗೆ ಜಿಲ್ಲಾಡಳಿತ ಪರಿಹಾರ ನೀಡಿದೆ. 44 ಮನೆಗಳಿಗೆ ದಾಖಲೆ ಇಲ್ಲ ಎಂದು ಸರ್ಕಾರಕ್ಕೆ ವರದಿ ನೀಡಲಾಗಿದೆ. 1,800 ವಿದ್ಯುತ್ ಕಂಬಗಳು, 48 ಸೇತುವೆಗಳು ಹಾನಿಗೀಡಾಗಿವೆ. 90 ಎಕರೆ ತೋಟದ ಬೆಳೆ ನಾಶವಾಗಿದೆ. 10 ಕಿ.ಮೀ ರಸ್ತೆ ಹಾನಿಗೊಂಡಿದೆ. ಮುಳ್ಳಯ್ಯನಗಿರಿಯಲ್ಲಿ ಹಲವೆಡೆ ಭೂಕುಸಿತ ಉಂಟಾಗಿದ್ದು ಒಂದು ವಾರ ಪ್ರವಾಸಿಗರಿಗೆ ನಿರ್ಬಂಧ ಹೇರಲಾಗಿತ್ತು. ಲೋಕೋಪಯೋಗಿ ಇಲಾಖೆಯ ಮನವಿಯಂತೆ ಇನ್ನೊಂದು ವಾರ ಜಿಲ್ಲಾಡಳಿತ ನಿರ್ಬಂಧ ಹೇರಲಿದೆ ಎಂದು ಹೇಳಿದರು.
ಹೆಚ್ಚಿನ ಮಾಹಿತಿಗಾಗಿ ರಾಯರ ಪರಮಾಭಕ್ತರದ ಜ್ಯೋತಿಷ್ಗಳನ್ನು ಸಂಪರ್ಕಿಸಿ 9535156490
ಜಾತಿಗಣತಿ ಮಾಡಿ ಏನನ್ನು ಸಾಧಿಸಲು ಸಾಧ್ಯ? ಸದ್ಯ ಬಹಿರಂಗ ಆಗಿರುವ ವರದಿಯು ಇನ್ನಷ್ಟು…
ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಕುತ್ಲೂರು ಸರಕಾರಿ ಶಾಲೆ ವಿದ್ಯಾರ್ಥಿ ವಿದ್ಯಾರ್ಥಿನಿಯರು…
ಭಾರತದ ವಿವಿಧ ಕಡೆಗಳಲ್ಲಿ ಉತ್ಪಾದಕತೆಯನ್ನು ಹೆಚ್ಚಿಸುವ ಸಾಮರ್ಥ್ಯ ಇರುವ ಡ್ರಾಗನ್ ಫ್ರುಟ್(ಕಮಲಂ) ಹಾಗೂ…
ಏಪ್ರಿಲ್ ಮಧ್ಯದ ವೇಳೆಗೆ ದೆಹಲಿಯಲ್ಲಿ ತಾಪಮಾನವು 40 ಡಿಗ್ರಿಗಿಂತ ಹೆಚ್ಚಾಗಬಹುದು, ಈ ಬಾರಿ…