ಕಳೆದ ಬಾರಿ ಮುಂಗಾರು(Mansoon) ಕೈಕೊಟ್ಟಿದ್ದ ಹಿನ್ನೆಲೆ ರಾಜ್ಯಾದ್ಯಂತ ಬರಗಾಲ(Drought) ಆವರಿಸಿತ್ತು. ಆದರೆ ಈ ಬಾರಿ ಮುಂಗಾರು ನಿರೀಕ್ಷೆಗಿಂತ ಹೆಚ್ಚಾಗಿ ಈಗಾಗಲೇ ಮಲೆನಾಡು(Malenadu), ಕರಾವಳಿಯಲ್ಲಿ(Coastal) ಸುರಿಯುತ್ತಿದೆ. ಮಲೆನಾಡಿನಲ್ಲಿ ವಾಡಿಕೆಯಂತೆ ಜನವರಿಯಿಂದ ಜೂನ್ವರೆಗೆ 817 ಮಿ.ಮೀ ಮಳೆಯಾಗಬೇಕು. ಆದರೆ 1,096 ಮಿ.ಮೀ ಮಳೆ ಸುರಿದಿದ್ದು, ಇದು ಶೇ 76 ರಷ್ಟು ಹೆಚ್ಚು. ಕಳೆದ ಒಂದೇ ವಾರದಲ್ಲಿ 120 ಮಿ.ಮೀ ಮಳೆ ಆಗಬೇಕಿದ್ದು, 320 ಮಿ.ಮೀ ಮಳೆ ಬಿದ್ದಿದೆ(Excess Rainfall) ಎಂದು ಚಿಕ್ಕಮಗಳೂರಿನ(Chikkamagaluru) ಜಿಲ್ಲಾಧಿಕಾರಿ ಮೀನಾ ನಾಗಾರಾಜ್ ಮಾಹಿತಿ ನೀಡಿದರು.
ಈ ವರ್ಷದ ಮಹಾಮಳೆಗೆ 193 ಮನೆಗಳು ಧರಾಶಾಹಿಯಾಗಿವೆ. 77 ಮನೆಗಳಿಗೆ ಜಿಲ್ಲಾಡಳಿತ ಪರಿಹಾರ ನೀಡಿದೆ. 44 ಮನೆಗಳಿಗೆ ದಾಖಲೆ ಇಲ್ಲ ಎಂದು ಸರ್ಕಾರಕ್ಕೆ ವರದಿ ನೀಡಲಾಗಿದೆ. 1,800 ವಿದ್ಯುತ್ ಕಂಬಗಳು, 48 ಸೇತುವೆಗಳು ಹಾನಿಗೀಡಾಗಿವೆ. 90 ಎಕರೆ ತೋಟದ ಬೆಳೆ ನಾಶವಾಗಿದೆ. 10 ಕಿ.ಮೀ ರಸ್ತೆ ಹಾನಿಗೊಂಡಿದೆ. ಮುಳ್ಳಯ್ಯನಗಿರಿಯಲ್ಲಿ ಹಲವೆಡೆ ಭೂಕುಸಿತ ಉಂಟಾಗಿದ್ದು ಒಂದು ವಾರ ಪ್ರವಾಸಿಗರಿಗೆ ನಿರ್ಬಂಧ ಹೇರಲಾಗಿತ್ತು. ಲೋಕೋಪಯೋಗಿ ಇಲಾಖೆಯ ಮನವಿಯಂತೆ ಇನ್ನೊಂದು ವಾರ ಜಿಲ್ಲಾಡಳಿತ ನಿರ್ಬಂಧ ಹೇರಲಿದೆ ಎಂದು ಹೇಳಿದರು.
ಆಗಸ್ಟ್ 2ರಿಂದ 8ರವರೆಗೆ ಮಂಗಳೂರಿನಲ್ಲಿ ರಾಷ್ಟ್ರೀಯ ಅಂಡರ್-11 ಮುಕ್ತ ಹಾಗೂ ಬಾಲಕಿಯರ ಚೆಸ್…
ICAR-CPCRI ಸಂಶೋಧನೆಯ ಪ್ರಕಾರ ಅಡಿಕೆ ತಳಿಗಳಲ್ಲಿ ಆಲ್ಕಲಾಯ್ಡ್ ಪ್ರಮಾಣದಲ್ಲಿ ಗಣನೀಯ ವ್ಯತ್ಯಾಸವಿದೆ. ಮಂಗಳ…
ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯಲ್ಲಿ ನಿರಂತರ ಮಳೆಯಾಗುತ್ತಿರುವ ಹಿನ್ನೆಲೆ ಮುಂಜಾಗೃತಾ ಕ್ರಮವಾಗಿ…
ಮಂಗಳೂರಿನಲ್ಲಿ ಜುಲೈ 30ರಂದು ವಿವಿಧ ಖಾಸಗಿ ಸಂಸ್ಥೆಗಳ ಹುದ್ದೆಗಳ ಭರ್ತಿಗಾಗಿ ನೇರ ಸಂದರ್ಶನ…
ಆಹಾರ ಉತ್ಪಾದನೆಯಲ್ಲಿ ಸ್ವಾವಲಂಬನೆ ಸಾಧಿಸಿರುವ ಭಾರತ, ರಸಗೊಬ್ಬರದಲ್ಲಿ ಇನ್ನೂ ಆಮದು ಅವಲಂಬಿತವಾಗಿದೆ. ದೇಶೀಯ…
ಕರಾವಳಿ ಮತ್ತು ಮಲೆನಾಡಿನಲ್ಲಿ ಸಾಧಾರಣ ಮಳೆ ಮುಂದುವರಿಯಲಿದ್ದು, ಸುಳ್ಯ-ಮಡಿಕೇರಿ ಘಾಟಿ ಭಾಗಗಳಲ್ಲಿ ಮಳೆ…