ಕಳೆದ ಬಾರಿ ಮುಂಗಾರು(Mansoon) ಕೈಕೊಟ್ಟಿದ್ದ ಹಿನ್ನೆಲೆ ರಾಜ್ಯಾದ್ಯಂತ ಬರಗಾಲ(Drought) ಆವರಿಸಿತ್ತು. ಆದರೆ ಈ ಬಾರಿ ಮುಂಗಾರು ನಿರೀಕ್ಷೆಗಿಂತ ಹೆಚ್ಚಾಗಿ ಈಗಾಗಲೇ ಮಲೆನಾಡು(Malenadu), ಕರಾವಳಿಯಲ್ಲಿ(Coastal) ಸುರಿಯುತ್ತಿದೆ. ಮಲೆನಾಡಿನಲ್ಲಿ ವಾಡಿಕೆಯಂತೆ ಜನವರಿಯಿಂದ ಜೂನ್ವರೆಗೆ 817 ಮಿ.ಮೀ ಮಳೆಯಾಗಬೇಕು. ಆದರೆ 1,096 ಮಿ.ಮೀ ಮಳೆ ಸುರಿದಿದ್ದು, ಇದು ಶೇ 76 ರಷ್ಟು ಹೆಚ್ಚು. ಕಳೆದ ಒಂದೇ ವಾರದಲ್ಲಿ 120 ಮಿ.ಮೀ ಮಳೆ ಆಗಬೇಕಿದ್ದು, 320 ಮಿ.ಮೀ ಮಳೆ ಬಿದ್ದಿದೆ(Excess Rainfall) ಎಂದು ಚಿಕ್ಕಮಗಳೂರಿನ(Chikkamagaluru) ಜಿಲ್ಲಾಧಿಕಾರಿ ಮೀನಾ ನಾಗಾರಾಜ್ ಮಾಹಿತಿ ನೀಡಿದರು.
ಈ ವರ್ಷದ ಮಹಾಮಳೆಗೆ 193 ಮನೆಗಳು ಧರಾಶಾಹಿಯಾಗಿವೆ. 77 ಮನೆಗಳಿಗೆ ಜಿಲ್ಲಾಡಳಿತ ಪರಿಹಾರ ನೀಡಿದೆ. 44 ಮನೆಗಳಿಗೆ ದಾಖಲೆ ಇಲ್ಲ ಎಂದು ಸರ್ಕಾರಕ್ಕೆ ವರದಿ ನೀಡಲಾಗಿದೆ. 1,800 ವಿದ್ಯುತ್ ಕಂಬಗಳು, 48 ಸೇತುವೆಗಳು ಹಾನಿಗೀಡಾಗಿವೆ. 90 ಎಕರೆ ತೋಟದ ಬೆಳೆ ನಾಶವಾಗಿದೆ. 10 ಕಿ.ಮೀ ರಸ್ತೆ ಹಾನಿಗೊಂಡಿದೆ. ಮುಳ್ಳಯ್ಯನಗಿರಿಯಲ್ಲಿ ಹಲವೆಡೆ ಭೂಕುಸಿತ ಉಂಟಾಗಿದ್ದು ಒಂದು ವಾರ ಪ್ರವಾಸಿಗರಿಗೆ ನಿರ್ಬಂಧ ಹೇರಲಾಗಿತ್ತು. ಲೋಕೋಪಯೋಗಿ ಇಲಾಖೆಯ ಮನವಿಯಂತೆ ಇನ್ನೊಂದು ವಾರ ಜಿಲ್ಲಾಡಳಿತ ನಿರ್ಬಂಧ ಹೇರಲಿದೆ ಎಂದು ಹೇಳಿದರು.
ಕರ್ನಾಟಕದ ಹಲವು ಭಾಗಗಳಲ್ಲಿ ಸೆ.5ರಿಂದ ಕೆಲವು ದಿನ ಮಳೆಯ ತೀವ್ರತೆ ಕಡಿಮೆಯಾಗುವ ಲಕ್ಷಣಗಳಿವೆ.…
ಹಿಮನದಿ ಕುಸಿತದಿಂದ ಸಂಭವಿಸಿದ ಭೀಕರ ಪ್ರವಾಹದ ಬಳಿಕ ನೇಪಾಳ ಪ್ರಧಾನಿ ಬಾಲೆಂದ್ರ ಶಾ…
2023ರಿಂದ 2026ರವರೆಗೆ ದೇಶದ 23 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಪರೀಕ್ಷಿಸಿದ 70,652…
ಕಾಸರಗೋಡಿನ ICAR-CPCRIನಲ್ಲಿ ವಿಶ್ವ ತೆಂಗು ದಿನ–2026 ಆಚರಿಸಿ, ಹವಾಮಾನ ಅನಿಶ್ಚಿತತೆಯ ನಡುವೆ ತೆಂಗು…
ಕರಾವಳಿಯಲ್ಲಿ ಮುಂದಿನ ಎರಡು ದಿನ ಅಲ್ಲಲ್ಲಿ ಸಾಮಾನ್ಯ ಮಳೆಯಾದರೂ ಜೋರು ಮಳೆಯ ಸಾಧ್ಯತೆ…
ಕೃಷಿ ಉತ್ಪಾದನೆ ಹೆಚ್ಚಿಸಲು ಬ್ಯಾಂಕ್ಗಳು ರೈತರಿಗೆ ಹೆಚ್ಚಿನ ಸಾಂಸ್ಥಿಕ ಸಾಲ ನೀಡಬೇಕು ಎಂದು…