ಕಳೆದ ಬಾರಿ ಮುಂಗಾರು(Mansoon) ಕೈಕೊಟ್ಟಿದ್ದ ಹಿನ್ನೆಲೆ ರಾಜ್ಯಾದ್ಯಂತ ಬರಗಾಲ(Drought) ಆವರಿಸಿತ್ತು. ಆದರೆ ಈ ಬಾರಿ ಮುಂಗಾರು ನಿರೀಕ್ಷೆಗಿಂತ ಹೆಚ್ಚಾಗಿ ಈಗಾಗಲೇ ಮಲೆನಾಡು(Malenadu), ಕರಾವಳಿಯಲ್ಲಿ(Coastal) ಸುರಿಯುತ್ತಿದೆ. ಮಲೆನಾಡಿನಲ್ಲಿ ವಾಡಿಕೆಯಂತೆ ಜನವರಿಯಿಂದ ಜೂನ್ವರೆಗೆ 817 ಮಿ.ಮೀ ಮಳೆಯಾಗಬೇಕು. ಆದರೆ 1,096 ಮಿ.ಮೀ ಮಳೆ ಸುರಿದಿದ್ದು, ಇದು ಶೇ 76 ರಷ್ಟು ಹೆಚ್ಚು. ಕಳೆದ ಒಂದೇ ವಾರದಲ್ಲಿ 120 ಮಿ.ಮೀ ಮಳೆ ಆಗಬೇಕಿದ್ದು, 320 ಮಿ.ಮೀ ಮಳೆ ಬಿದ್ದಿದೆ(Excess Rainfall) ಎಂದು ಚಿಕ್ಕಮಗಳೂರಿನ(Chikkamagaluru) ಜಿಲ್ಲಾಧಿಕಾರಿ ಮೀನಾ ನಾಗಾರಾಜ್ ಮಾಹಿತಿ ನೀಡಿದರು.
ಈ ವರ್ಷದ ಮಹಾಮಳೆಗೆ 193 ಮನೆಗಳು ಧರಾಶಾಹಿಯಾಗಿವೆ. 77 ಮನೆಗಳಿಗೆ ಜಿಲ್ಲಾಡಳಿತ ಪರಿಹಾರ ನೀಡಿದೆ. 44 ಮನೆಗಳಿಗೆ ದಾಖಲೆ ಇಲ್ಲ ಎಂದು ಸರ್ಕಾರಕ್ಕೆ ವರದಿ ನೀಡಲಾಗಿದೆ. 1,800 ವಿದ್ಯುತ್ ಕಂಬಗಳು, 48 ಸೇತುವೆಗಳು ಹಾನಿಗೀಡಾಗಿವೆ. 90 ಎಕರೆ ತೋಟದ ಬೆಳೆ ನಾಶವಾಗಿದೆ. 10 ಕಿ.ಮೀ ರಸ್ತೆ ಹಾನಿಗೊಂಡಿದೆ. ಮುಳ್ಳಯ್ಯನಗಿರಿಯಲ್ಲಿ ಹಲವೆಡೆ ಭೂಕುಸಿತ ಉಂಟಾಗಿದ್ದು ಒಂದು ವಾರ ಪ್ರವಾಸಿಗರಿಗೆ ನಿರ್ಬಂಧ ಹೇರಲಾಗಿತ್ತು. ಲೋಕೋಪಯೋಗಿ ಇಲಾಖೆಯ ಮನವಿಯಂತೆ ಇನ್ನೊಂದು ವಾರ ಜಿಲ್ಲಾಡಳಿತ ನಿರ್ಬಂಧ ಹೇರಲಿದೆ ಎಂದು ಹೇಳಿದರು.
ಬಲಮುರಿ, ಎಡಮುರಿ ಕಾವೇರಿ ತೀರಗಳಿಗೆ ಪ್ರವಾಸಿಗರ ಪ್ರವೇಶವನ್ನು ತಾತ್ಕಾಲಿಕವಾಗಿ ನಿಷೇಧಿಸಲಾಗಿದೆ. ಮುಳುಗು ಪ್ರಕರಣಗಳು…
ರಾಜ್ಯದ ಕೆಲವೆಡೆ ಮಳೆಯಾದರೂ, ಕರಾವಳಿಯಲ್ಲಿ ಮುಂದಿನ ಐದು ದಿನ ಬಿಸಿ ಮತ್ತು ತೇವಾಂಶ…
ರಾಜ್ಯದಲ್ಲಿ ಸಿಡಿಲು ಬಡಿತದಿಂದ 1,026 ಸಾವುಗಳು ದಾಖಲಾಗಿದೆ. ‘ದಾಮಿನಿ’ ಆ್ಯಪ್ ಬಳಸಿ ಮುನ್ನೆಚ್ಚರಿಕೆ…
ರಕ್ಷಾ ಆಯುರ್ವೇದವು ಏಪ್ರಿಲ್ 24ರಂದು ಸ್ವರ್ಣಪ್ರಾಶನ ಕಾರ್ಯಕ್ರಮ ಆಯೋಜಿಸಿದೆ. ಇದು ಮಕ್ಕಳ ರೋಗ…
ಕರ್ನಾಟಕದಲ್ಲಿ ಇಂದಿನಿಂದ ಪ್ರೀ-ಮಾನ್ಸೂನ್ ಮಳೆ ಚಟುವಟಿಕೆ ಆರಂಭವಾಗಲಿದೆ. ಕರಾವಳಿ, ಮಲೆನಾಡಿನಲ್ಲಿ ತಕ್ಷಣ ಮಳೆ,…
ಜಾಗತಿಕ ಬಿಕ್ಕಟ್ಟಿನಿಂದ ಆಟೋ LPG ಬೇಡಿಕೆ ಏರಿಕೆ ಕಂಡಿದ್ದು, ಇಂಡಿಯನ್ ಆಯಿಲ್ ಪೂರೈಕೆಯನ್ನು…