ಕಳೆದ ಬಾರಿ ಮುಂಗಾರು(Mansoon) ಕೈಕೊಟ್ಟಿದ್ದ ಹಿನ್ನೆಲೆ ರಾಜ್ಯಾದ್ಯಂತ ಬರಗಾಲ(Drought) ಆವರಿಸಿತ್ತು. ಆದರೆ ಈ ಬಾರಿ ಮುಂಗಾರು ನಿರೀಕ್ಷೆಗಿಂತ ಹೆಚ್ಚಾಗಿ ಈಗಾಗಲೇ ಮಲೆನಾಡು(Malenadu), ಕರಾವಳಿಯಲ್ಲಿ(Coastal) ಸುರಿಯುತ್ತಿದೆ. ಮಲೆನಾಡಿನಲ್ಲಿ ವಾಡಿಕೆಯಂತೆ ಜನವರಿಯಿಂದ ಜೂನ್ವರೆಗೆ 817 ಮಿ.ಮೀ ಮಳೆಯಾಗಬೇಕು. ಆದರೆ 1,096 ಮಿ.ಮೀ ಮಳೆ ಸುರಿದಿದ್ದು, ಇದು ಶೇ 76 ರಷ್ಟು ಹೆಚ್ಚು. ಕಳೆದ ಒಂದೇ ವಾರದಲ್ಲಿ 120 ಮಿ.ಮೀ ಮಳೆ ಆಗಬೇಕಿದ್ದು, 320 ಮಿ.ಮೀ ಮಳೆ ಬಿದ್ದಿದೆ(Excess Rainfall) ಎಂದು ಚಿಕ್ಕಮಗಳೂರಿನ(Chikkamagaluru) ಜಿಲ್ಲಾಧಿಕಾರಿ ಮೀನಾ ನಾಗಾರಾಜ್ ಮಾಹಿತಿ ನೀಡಿದರು.
ಈ ವರ್ಷದ ಮಹಾಮಳೆಗೆ 193 ಮನೆಗಳು ಧರಾಶಾಹಿಯಾಗಿವೆ. 77 ಮನೆಗಳಿಗೆ ಜಿಲ್ಲಾಡಳಿತ ಪರಿಹಾರ ನೀಡಿದೆ. 44 ಮನೆಗಳಿಗೆ ದಾಖಲೆ ಇಲ್ಲ ಎಂದು ಸರ್ಕಾರಕ್ಕೆ ವರದಿ ನೀಡಲಾಗಿದೆ. 1,800 ವಿದ್ಯುತ್ ಕಂಬಗಳು, 48 ಸೇತುವೆಗಳು ಹಾನಿಗೀಡಾಗಿವೆ. 90 ಎಕರೆ ತೋಟದ ಬೆಳೆ ನಾಶವಾಗಿದೆ. 10 ಕಿ.ಮೀ ರಸ್ತೆ ಹಾನಿಗೊಂಡಿದೆ. ಮುಳ್ಳಯ್ಯನಗಿರಿಯಲ್ಲಿ ಹಲವೆಡೆ ಭೂಕುಸಿತ ಉಂಟಾಗಿದ್ದು ಒಂದು ವಾರ ಪ್ರವಾಸಿಗರಿಗೆ ನಿರ್ಬಂಧ ಹೇರಲಾಗಿತ್ತು. ಲೋಕೋಪಯೋಗಿ ಇಲಾಖೆಯ ಮನವಿಯಂತೆ ಇನ್ನೊಂದು ವಾರ ಜಿಲ್ಲಾಡಳಿತ ನಿರ್ಬಂಧ ಹೇರಲಿದೆ ಎಂದು ಹೇಳಿದರು.
ಗುಟ್ಕಾ–ಪಾನ್ಮಸಾಲಾ ನಿಷೇಧದ ಪರಿಣಾಮ ಅಡಿಕೆ ಮಾರುಕಟ್ಟೆಯ ಮೇಲೆ ಬಿದ್ದರೆ ಅದನ್ನು ಎದುರಿಸಲು ಸರ್ಕಾರ…
ಕರ್ನಾಟಕದ ಕರಾವಳಿ, ಮಲೆನಾಡು ಹಾಗೂ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮುಂದಿನ ದಿನಗಳಲ್ಲೂ ಮಳೆ…
ಎಲ್ ನಿನೊದ ಸಂಭಾವ್ಯ ಪರಿಣಾಮಗಳ ಹಿನ್ನೆಲೆಯಲ್ಲಿ ದೇಶದ ಹವಾಮಾನ, ಮುಂಗಾರು ಮತ್ತು ಕೃಷಿ…
ಇತರರ ಮನೆಯ ಸಮಸ್ಯೆ ನಮಗೆ ಕುತೂಹಲದ ಸುದ್ದಿಯಾಗಬಹುದು. ಆದರೆ ಆ ಮನೆಯವರಿಗೆ ಅದು…
ಕೈಗಾರಿಕಾ ಕೋಳಿ ಸಾಕಾಣಿಕೆ ಆಹಾರ ವಿಷಬಾಧೆಗೆ ಕಾರಣವಾಗುವ ಕ್ಯಾಂಪಿಲೋಬ್ಯಾಕ್ಟರ್ ಬ್ಯಾಕ್ಟೀರಿಯಾದ ಹರಡುವಿಕೆಯನ್ನು ವೇಗಗೊಳಿಸುತ್ತಿದೆ…
ದೇಶದ 651 ಕೃಷಿ ಜಿಲ್ಲೆಗಳ ಹವಾಮಾನ ಅಪಾಯ ಮೌಲ್ಯಮಾಪನದಲ್ಲಿ 310 ಜಿಲ್ಲೆಗಳು ದುರ್ಬಲವೆಂದು…