ವಿಕಸಿತ ಭಾರತ ನಿರ್ಮಾಣಕ್ಕೆ ಯೋಜನೆಗಳು ಸಿದ್ಧ| ಕೃಷಿ ಕ್ಷೇತ್ರದಲ್ಲಿ ಗಣನೀಯ ಅಭಿವೃದ್ಧಿ ನಿರೀಕ್ಷೆ

March 25, 2025
7:58 AM
ದೇಶದ ಹಿಂದುಳಿದಿರುವ 109 ಜಿಲ್ಲೆಗಳಲ್ಲಿ  ಕೃಷಿ  ಉತ್ಪಾದನೆಯನ್ನು  ಹೆಚ್ಚಿಸಬೇಕೆಂದು  ಪ್ರಧಾನಿ ನರೇಂದ್ರ ಮೋದಿ ಅವರು ಉದ್ದೇಶಿಸಿದ್ದಾರೆ. ಇದಲ್ಲದೆ,  ಕೃತಕಬುದ್ಧಿಮತ್ತೆ ಹಾಗೂ ಹೊಸ ಸಂಶೋಧನೆಗಳಿಗೂ ಹೆಚ್ಚಿನ ಒತ್ತು ನೀಡಲಾಗುತ್ತದೆ ಎಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ. (Photo-File)

ಮುಂದಿನ 25 ವರ್ಷಗಳಲ್ಲಿ  ವಿಕಸಿತ ಭಾರತ ನಿರ್ಮಾಣಕ್ಕೆ  ಅಗತ್ಯವಾದ  ಯೋಜನೆಗಳನ್ನು ಹಣಕಾಸು ಆಯೋಗವು ರೂಪಿಸುತ್ತಿದೆ ಎಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ.………ಮುಂದೆ ಓದಿ……..

ಚೆನ್ನೈನಲ್ಲಿ  ನಾಗರಿಕ ವೇದಿಕೆ  ಏರ್ಪಡಿಸಿದ್ದ ಸಂವಾದದಲ್ಲಿ ಕಾರ್ಯಕ್ರಮದಲ್ಲಿ  ಅವರು ಪಾಲ್ಗೊಂಡಿದ್ದರು. ಅಮೆರಿಕಾದ  ತೆರಿಗೆ ನೀತಿ,  ಉಕ್ರೇನ್ ಯುದ್ಧ, ಚೈನಾದ  ವ್ಯಾಪಾರ ವ್ಯವಹಾರಗಳು ಸೇರಿದಂತೆ  ಹಲವು ವಿಷಯಗಳನ್ನು ಗಮನದಲ್ಲಿಟ್ಟುಕೊಂಡು ಹೊಸ ಯೋಜನೆಗಳನ್ನು ರೂಪಿಸಲಾಗುತ್ತಿದೆ. ಮುಂದಿನ ದಿನಗಳಲ್ಲಿ ಎದುರಾಗುವ ಸವಾಲುಗಳನ್ನು ಎದುರಿಸಲು  ಯುವಪೀಳಿಗೆಯನ್ನು  ಸನ್ನದ್ಧಗೊಳಿಸಬೇಕಾಗಿದೆ. ಅದಕ್ಕಾಗಿ  ತರಬೇತಿ ಕಾರ್ಯಕ್ರಮಗಳನ್ನು ರೂಪಿಸಲು ಸಹ ಉದ್ದೇಶಿಸಲಾಗಿದೆ ಎಂದು ತಿಳಿಸಿದರು. ದೇಶದ ಎಲ್ಲ ಜಿಲ್ಲೆಗಳಲ್ಲೂ  ಕ್ಯಾನ್ಸರ್ ನಿಗಾ ಘಟಕಗಳನ್ನು ಸ್ಥಾಪಿಸಲಾಗುತ್ತದೆ.  ಕೃಷಿ ಕ್ಷೇತ್ರದಲ್ಲೂ  ಗಣನೀಯ ಅಭಿವೃದ್ಧಿಯನ್ನು ನಿರೀಕ್ಷಿಸಲಾಗಿದ್ದು, ದೇಶದ ಸುಮಾರು 112  ಜಿಲ್ಲೆಗಳಲ್ಲಿ ಪ್ರಾಯೋಗಿಕವಾಗಿ  ಕೃಷಿ ಯೋಜನೆಗಳನ್ನು ಜಾರಿಗೊಳಿಸಲಾಗುತ್ತದೆ.  ದೇಶದ ಹಿಂದುಳಿದಿರುವ 109 ಜಿಲ್ಲೆಗಳಲ್ಲಿ  ಕೃಷಿ  ಉತ್ಪಾದನೆಯನ್ನು  ಹೆಚ್ಚಿಸಬೇಕೆಂದು  ಪ್ರಧಾನಿ ನರೇಂದ್ರ ಮೋದಿ ಅವರು ಉದ್ದೇಶಿಸಿದ್ದಾರೆ. ಇದಲ್ಲದೆ,  ಕೃತಕಬುದ್ಧಿಮತ್ತೆ ಹಾಗೂ ಹೊಸ ಸಂಶೋಧನೆಗಳಿಗೂ ಹೆಚ್ಚಿನ ಒತ್ತು ನೀಡಲಾಗುತ್ತದೆ. ಕಳೆದ 10 ವರ್ಷಗಳಲ್ಲಿ  ಕೇಂದ್ರ ಸರ್ಕಾರದ ಹಲವು ಯೋಜನೆಗಳಿಂದ ತಮಿಳುನಾಡಿಗೂ ಸಾಕಷ್ಟು ಅನುಕೂಲವಾಗಿದೆ. ಜನ್ ಧನ್ ಯೋಜನೆಯಿಂದ  12 ಲಕ್ಷ ಜನರಿಗೆ  ಅನುಕೂಲವಾದರೆ ಸುಮಾರು 89 ಲಕ್ಷ ಕುಟುಂಬಗಳಿಗೆ ಹೊಸ ನೀರಿನ ಸಂಪರ್ಕಗಳು ದೊರೆತಿವೆ. 41 ಲಕ್ಷ ಜನರಿಗೆ  ಅಡುಗೆ ಅನಿಲ  ಸಿಲಿಂಡರ್  ಸಂಪರ್ಕಗಳ ಸಹಾಯಧನ ಯೋಜನೆ ದೊರೆತಿದೆ ಎಂದು ಅವರು ಹೇಳಿದರು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಎಲ್ ನಿನೋ ಎಚ್ಚರಿಕೆ – ದೇಶದಲ್ಲಿ 43% ಮಳೆ ಕೊರತೆ, ಕರ್ನಾಟಕ ಸೇರಿ 12 ರಾಜ್ಯಗಳ 315 ಜಿಲ್ಲೆಗಳಿಗೆ ಕೇಂದ್ರದ ವಿಶೇಷ ಕೃಷಿ ಯೋಜನೆ
June 25, 2026
7:34 AM
by: ದ ರೂರಲ್ ಮಿರರ್.ಕಾಂ
ತೆಂಗು ಬೆಳೆಗೂ ಏರಿದ ಉತ್ಪಾದನಾ ವೆಚ್ಚ, ರೈತರು ಸಂಕಷ್ಟದಲ್ಲಿ – ತಮಿಳುನಾಡಿನಲ್ಲಿ ತೆಂಗು ಬೆಳೆಗಾರರಿಗೆ ಕಾರ್ಮಿಕರ ಕೊರತೆ
June 24, 2026
10:16 PM
by: ದ ರೂರಲ್ ಮಿರರ್.ಕಾಂ
ಮುಂಗಾರು ಮತ್ತಷ್ಟು ಚುರುಕು – ಕರಾವಳಿ ಕರ್ನಾಟಕದಲ್ಲಿ ಜೂನ್ 26 ರವರೆಗೆ ಭಾರೀ ಮಳೆ ಎಚ್ಚರಿಕೆ
June 23, 2026
10:13 PM
by: ದ ರೂರಲ್ ಮಿರರ್.ಕಾಂ
ಅಡಿಕೆ ಬೆಳೆಗಾರರ ಸಮಸ್ಯೆಗಳ ಪರಿಹಾರಕ್ಕೆ ತಕ್ಷಣ ಕ್ರಮ – ಸರ್ಕಾರಕ್ಕೆ ಅಖಿಲ ಭಾರತ ಅಡಿಕೆ ಬೆಳೆಗಾರರ ಸಂಘದ ಒತ್ತಾಯ
June 23, 2026
8:11 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror