Advertisement
ಸುದ್ದಿಗಳು

ವಿಕಸಿತ ಭಾರತ ನಿರ್ಮಾಣಕ್ಕೆ ಯೋಜನೆಗಳು ಸಿದ್ಧ| ಕೃಷಿ ಕ್ಷೇತ್ರದಲ್ಲಿ ಗಣನೀಯ ಅಭಿವೃದ್ಧಿ ನಿರೀಕ್ಷೆ

Share

ಮುಂದಿನ 25 ವರ್ಷಗಳಲ್ಲಿ  ವಿಕಸಿತ ಭಾರತ ನಿರ್ಮಾಣಕ್ಕೆ  ಅಗತ್ಯವಾದ  ಯೋಜನೆಗಳನ್ನು ಹಣಕಾಸು ಆಯೋಗವು ರೂಪಿಸುತ್ತಿದೆ ಎಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ.………ಮುಂದೆ ಓದಿ……..

ಚೆನ್ನೈನಲ್ಲಿ  ನಾಗರಿಕ ವೇದಿಕೆ  ಏರ್ಪಡಿಸಿದ್ದ ಸಂವಾದದಲ್ಲಿ ಕಾರ್ಯಕ್ರಮದಲ್ಲಿ  ಅವರು ಪಾಲ್ಗೊಂಡಿದ್ದರು. ಅಮೆರಿಕಾದ  ತೆರಿಗೆ ನೀತಿ,  ಉಕ್ರೇನ್ ಯುದ್ಧ, ಚೈನಾದ  ವ್ಯಾಪಾರ ವ್ಯವಹಾರಗಳು ಸೇರಿದಂತೆ  ಹಲವು ವಿಷಯಗಳನ್ನು ಗಮನದಲ್ಲಿಟ್ಟುಕೊಂಡು ಹೊಸ ಯೋಜನೆಗಳನ್ನು ರೂಪಿಸಲಾಗುತ್ತಿದೆ. ಮುಂದಿನ ದಿನಗಳಲ್ಲಿ ಎದುರಾಗುವ ಸವಾಲುಗಳನ್ನು ಎದುರಿಸಲು  ಯುವಪೀಳಿಗೆಯನ್ನು  ಸನ್ನದ್ಧಗೊಳಿಸಬೇಕಾಗಿದೆ. ಅದಕ್ಕಾಗಿ  ತರಬೇತಿ ಕಾರ್ಯಕ್ರಮಗಳನ್ನು ರೂಪಿಸಲು ಸಹ ಉದ್ದೇಶಿಸಲಾಗಿದೆ ಎಂದು ತಿಳಿಸಿದರು. ದೇಶದ ಎಲ್ಲ ಜಿಲ್ಲೆಗಳಲ್ಲೂ  ಕ್ಯಾನ್ಸರ್ ನಿಗಾ ಘಟಕಗಳನ್ನು ಸ್ಥಾಪಿಸಲಾಗುತ್ತದೆ.  ಕೃಷಿ ಕ್ಷೇತ್ರದಲ್ಲೂ  ಗಣನೀಯ ಅಭಿವೃದ್ಧಿಯನ್ನು ನಿರೀಕ್ಷಿಸಲಾಗಿದ್ದು, ದೇಶದ ಸುಮಾರು 112  ಜಿಲ್ಲೆಗಳಲ್ಲಿ ಪ್ರಾಯೋಗಿಕವಾಗಿ  ಕೃಷಿ ಯೋಜನೆಗಳನ್ನು ಜಾರಿಗೊಳಿಸಲಾಗುತ್ತದೆ.  ದೇಶದ ಹಿಂದುಳಿದಿರುವ 109 ಜಿಲ್ಲೆಗಳಲ್ಲಿ  ಕೃಷಿ  ಉತ್ಪಾದನೆಯನ್ನು  ಹೆಚ್ಚಿಸಬೇಕೆಂದು  ಪ್ರಧಾನಿ ನರೇಂದ್ರ ಮೋದಿ ಅವರು ಉದ್ದೇಶಿಸಿದ್ದಾರೆ. ಇದಲ್ಲದೆ,  ಕೃತಕಬುದ್ಧಿಮತ್ತೆ ಹಾಗೂ ಹೊಸ ಸಂಶೋಧನೆಗಳಿಗೂ ಹೆಚ್ಚಿನ ಒತ್ತು ನೀಡಲಾಗುತ್ತದೆ. ಕಳೆದ 10 ವರ್ಷಗಳಲ್ಲಿ  ಕೇಂದ್ರ ಸರ್ಕಾರದ ಹಲವು ಯೋಜನೆಗಳಿಂದ ತಮಿಳುನಾಡಿಗೂ ಸಾಕಷ್ಟು ಅನುಕೂಲವಾಗಿದೆ. ಜನ್ ಧನ್ ಯೋಜನೆಯಿಂದ  12 ಲಕ್ಷ ಜನರಿಗೆ  ಅನುಕೂಲವಾದರೆ ಸುಮಾರು 89 ಲಕ್ಷ ಕುಟುಂಬಗಳಿಗೆ ಹೊಸ ನೀರಿನ ಸಂಪರ್ಕಗಳು ದೊರೆತಿವೆ. 41 ಲಕ್ಷ ಜನರಿಗೆ  ಅಡುಗೆ ಅನಿಲ  ಸಿಲಿಂಡರ್  ಸಂಪರ್ಕಗಳ ಸಹಾಯಧನ ಯೋಜನೆ ದೊರೆತಿದೆ ಎಂದು ಅವರು ಹೇಳಿದರು.

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಹವಾಮಾನ ವರದಿ | 28-08-2026 | ಕರ್ನಾಟಕದ ಹವಾಮಾನದಲ್ಲಿ ಮುಂದಿನ ಬದಲಾವಣೆ ಎಲ್ಲಿದೆ?

ಕರ್ನಾಟಕದಲ್ಲಿ ಮುಂಗಾರು ಸದ್ಯ ದುರ್ಬಲಗೊಂಡಿದ್ದು, ಬಹುತೇಕ ಕಡೆ ಬಿಸಿಲು–ಮೋಡದ ವಾತಾವರಣ ಹಾಗೂ ಅಲ್ಲಲ್ಲಿ…

4 hours ago

ಜಗತ್ತು ನಮ್ಮ ಜೊತೆಗಿದೆ ಎಂಬ ಭ್ರಮೆ

ಜಗತ್ತು ಸದಾ ನಮ್ಮ ಜೊತೆಗಿರುತ್ತದೆ ಎಂಬ ನಿರೀಕ್ಷೆಗಿಂತ, ಪರಿಸ್ಥಿತಿ ಬದಲಾದರೂ ನಮ್ಮ ದಾರಿಯಲ್ಲಿ…

2 days ago

ತೆಂಗಿನ ಎಣ್ಣೆಯಿಂದ ವಿಮಾನದ ಇಂಧನ ? ಜೆಟ್‌ ಎಂಜಿನ್‌ ಪರೀಕ್ಷೆಯಲ್ಲಿ ಕುತೂಹಲ ಮೂಡಿಸಿದ ಫಲಿತಾಂಶ

ಮಾರುಕಟ್ಟೆಗೆ ಯೋಗ್ಯವಲ್ಲದ ತೆಂಗಿನಕಾಯಿಯಿಂದ ಪಡೆದ ತೆಂಗಿನ ಎಣ್ಣೆಯನ್ನು ಬಳಸಿ ಸುಸ್ಥಿರ ವಿಮಾನ ಇಂಧನ…

2 days ago

ಕೃಷಿ ಇನ್ನು ಕೇವಲ ಬೆಳೆ ಬೆಳೆಯುವುದಲ್ಲ – ಯುವಕರಿಗೆ ಸ್ಟಾರ್ಟ್‌ಅಪ್ ಕ್ಷೇತ್ರ

ಕೃಷಿ ಮತ್ತು ಕೃಷಿ ಸಂಬಂಧಿತ ಕ್ಷೇತ್ರಗಳು ಯುವ ಉದ್ಯಮಶೀಲತೆಗೆ ಮುಂದಿನ ದೊಡ್ಡ ಅವಕಾಶಗಳಾಗಿದ್ದು,…

2 days ago

ಬರಪೀಡಿತ ಪ್ರದೇಶಗಳ ರೈತರಿಗೆ ಗುಡ್‌ನ್ಯೂಸ್ ; ಬೆಳೆ ವಿಮೆ ನೋಂದಣಿ ಅವಧಿ ವಿಸ್ತರಣೆ

ಕರ್ನಾಟಕದ ಬರಪೀಡಿತ ಪ್ರದೇಶಗಳಲ್ಲಿ ಬೆಳೆ ವಿಮೆ ನೋಂದಣಿ ಹಾಗೂ ಪ್ರೀಮಿಯಂ ಕಡಿತದ ಅವಧಿಯನ್ನು…

3 days ago

ರಾಜ್ಯದ 102 ತಾಲೂಕುಗಳಲ್ಲಿ ಬರದ ಛಾಯೆ – ತಿಂಗಳಾಂತ್ಯಕ್ಕೆ ಕೇಂದ್ರಕ್ಕೆ ವರದಿ ಸಲ್ಲಿಕೆ

ಕರ್ನಾಟಕದ 102 ತಾಲೂಕುಗಳಲ್ಲಿ ಬರ ಪರಿಸ್ಥಿತಿ ಉಂಟಾಗಿದ್ದು, ಈ ತಿಂಗಳಾಂತ್ಯಕ್ಕೆ ಕೇಂದ್ರ ಸರ್ಕಾರಕ್ಕೆ…

3 days ago