Advertisement
Opinion

ವಾರಣಾಸಿ ಎಂಬ ದ್ವಂದ್ವಗಳ ನಗರ

Share

ಕೆಲವು ದಿನಗಳ ಹಿಂದೆ ವಾರಣಾಸಿಗೆ ಭೇಟಿ ನೀಡಿದ್ದೆ.ಹೋದದ್ದು ಪ್ರವಾಸಿಗನಾಗಿ,ತೀರ್ಥಯಾತ್ರಿಯಾಗಿ ಅಲ್ಲ.ಇವೆರಡಕ್ಕೂ ವ್ಯತ್ಯಾಸ ಇದೆ.
ತೀರ್ಥಯಾತ್ರಿಗೆ ತಾನು ಆಶಿಸಿದ್ದ ಧಾರ್ಮಿಕ ವಿಧಿವಿಧಾನಗಳು ಸೂಕ್ತವಾಗಿ ಜರುಗಿದರಾಯ್ತು.ಆತ ತೃಪ್ತ.ಇನ್ನುಳಿದ ಯಾವುದೇ ತಾಪತ್ರಯಗಳು, ವಿಷಯಗಳು ಗೌಣವಾಗಿ ಬಿಡುತ್ತವೆ.ಪ್ರವಾಸಿಗನಿಗೆ ಹಾಗಲ್ಲ.ಅಲ್ಲಿನ ಸುಖಗಳ ಜೊತೆಗೆ ಅಲ್ಲಿನ ದೌರ್ಬಲ್ಯಗಳೂ ಕಾಣುತ್ತವೆ. ‌‌‌ಈ ವರೆಗೆ ದೇಶದ ವಿವಿದೆಡೆ ಸಂಚರಿಸಿದ್ದಾಗ ಕಂಡುಬಂದ ಅಂಶ ಎಂದರೆ ತಥಾಕಥಿತ ಧಾರ್ಮಿಕ ಕ್ಷೇತ್ರಗಳಲ್ಲಿ ಅಲ್ಲಿನ ನಿಯಂತ್ರಕರು ತೀರ್ಥಯಾತ್ರಿಗಳನ್ನಷ್ಟೇ ಅಪೇಕ್ಷಿಸುವುದು, ಪ್ರವಾಸಿಗರನ್ನಲ್ಲ.ಯಾಕೆಂದರೆ ತೀರ್ಥಯಾತ್ರಿಗಳಷ್ಟೇ ಬಂದರೆ ಭೌತಿಕ‌ ಸೌಕರ್ಯ ಹೆಚ್ಚು ಕೊಡಬೇಕಾದ್ದಿಲ್ಲ ಮತ್ತು‌ ಧಾರ್ಮಿಕತೆಯ ವ್ಯಾಪಾರೀಕರಣಕ್ಕೆ ಹೆಚ್ಚು ಅನುಕೂಲವಾಗ್ತದೆ.

‌‌ವಾರಣಾಸಿ ನನ್ನೆಲ್ಲಾ ಕಲ್ಪನೆಗೆ ಮೀರಿದ್ದಾಗಿತ್ತು.ಒಂದೆಡೆ ನಿರಂತರವಾಗಿ ಉರಿಯುತ್ತಿರುವ ಚಿತಾಗ್ನಿ.ಅದರಲ್ಲಿ ನಿರಂತರವಾಗಿ ಭಸ್ಮವಾಗುತ್ತಿರುವ ಮಾನವ ಶರೀರಗಳು.ಸಂತಾಪ,ಶೋಕದ ಪರಿಸರ.ನಶ್ವರತೆಯ ಪಾಠ ಅಲ್ಲಿ.ಅದರ ಎದುರಲ್ಲೇ ಡಿಜೆ ಶಬ್ದದೊಂದಿಗೆ ಮೋಜು ಮಸ್ತಿಯ ಕುಣಿತದಿಂದೊಡಗೂಡಿದ ಲಕ್ಸುರಿ ದೋಣಿ ಚಲಿಸುತ್ತಾ ಇರ್ತದೆ.ಪಕ್ಕದಲ್ಲೇ ಅಬ್ಬರದ ಸಂಗೀತದಿಂದೊಡಗೂಡಿದ ಗಂಗಾರತಿ ಎಂಬ ಹಬ್ಬ,ಜಾತ್ರೆ.ಮೂರೂ ಅಕ್ಕಪಕ್ಕದಲ್ಲೇ, ಜೊತೆಜೊತೆಯಲ್ಲಿಯೇ ಮೂರೂ ಪರಸ್ಪರ ವಿರೋಧದ್ದು ವಾರಣಾಸಿ ಎಂದರೇನೇ ದ್ವಂದ್ವ.

ಕಥೆಯೊಂದು ನೆನಪಾಗುತ್ತಿದೆ.ಒಮ್ಮೆ ಓರ್ವ ಸನ್ಯಾಸಿ ಮತ್ತು‌ ಓರ್ವ ಭೋಗಿ ಸ್ಮಶಾನವೊಂದರ ಪರಿಸರದಲ್ಲಿ ದೀರ್ಘಕಾಲ ವಾಸಿಸ ಬೇಕಾಯ್ತಂತೆ.ಸ್ಮಶಾನಕ್ಕೆ ಶವಗಳು ಬರುತ್ತಿದ್ದವು.ಜೊತೆಗಿರುವವರ ಗೋಳಾಟ ನಿತ್ಯವೂ ಇದ್ದದ್ದು.ಯಾವುದೂ ಶಾಶ್ವತವಲ್ಲ ಎಂಬ ದರ್ಶನ.ನಿಧಾನವಾಗಿ ಸನ್ಯಾಸಿ ‘ ಯಾವುದೂ ಶಾಶ್ವತವಲ್ಲ ಎಂದ ಮತ್ತೆ ಯಾಕೆ ಈ ಪ್ರಪಂಚದ ಸುಖಗಳಿಂದ ದೂರ ಇರಬೇಕು’ ಅಂತ ಭೋಗಿಯಾದನಂತೆ.ಭೋಗಿ ‘ ಯಾವುದೂ ಶಾಶ್ವತವಲ್ಲ’ ಎಂದ ಮತ್ತೆ ಈ ಕ್ಷಣಿಕವಾದ ಭೋಗ ಯಾತಕ್ಕೆ ಅಂತ ಸನ್ಯಾಸಿಯಾದನಂತೆ.ಒಂದೇ ಕ್ರಿಯೆ ಹೇಗೆ ಬೇರೆ ಬೇರೆ ಜನರಲ್ಲಿ ಭಿನ್ನ ಭಿನ್ನ ಪರಿಣಾಮಗಳನ್ಬು ಉಂಟು ಮಾಡ್ತದೆ ಎಂಬುದನ್ನು ತೋರಿಸುವ ಕಥೆ.

ಇತಿಹಾಸದಲ್ಲೂ ಇಂತಹುದೇ ಘಟನೆಯೊಂದು ದಾಖಲಾಗಿದೆಯಂತೆ.ಅಪರಾಧಿಗಳನ್ನು ಹತ್ಯೆಗೈಯಲು ಗಿಲೆಟಿನ್ ಕಂಡು ಹಿಡಿಯಲಾಗಿದ್ದ ಕಾಲ.ಅದರ ಮೂಲಕ ಸಾರ್ವಜನಿಕವಾಗಿ ಜನರನ್ನು ಹತ್ಯೆ ಮಾಡಲಾಗುತ್ತಿತ್ತಂತೆ.ಅದೇ ಸಮಯದಲ್ಲಿ ಅಲ್ಲಿ ಕ್ರಾಂತಿಯಾಗಿತ್ತು .ವಿರೋಧಿಗಳನ್ನೆಲ್ಲ ಅಪರಾಧಿಗಳು ಅಂತ ಪರಿಗಣಿಸಲಾಗುತ್ತಿತ್ತು.ಹಾಗಾಗಿ ದಿನವೂ ಅನೇಕರ ಹತ್ಯೆ ಸಾರ್ವಜನಿಕವಾಗಿ ನಡೆಯುತ್ತಿತ್ತು.ಮೊದ ಮೊದಲು ಜನ ಭಯ,ಹಿಂಜರಿಕೆಯಿಂದ ನೋಡ್ತಾ ಇದ್ರಂತೆ.ಬರಬರುತ್ತಾ ಅಲ್ಲೇ ತಿಂಡಿಗಳನ್ಬು ತಿನ್ನುತ್ತಾ ,ಪಾನೀಯ ಹೀರುತ್ತಾ ಜನರ ಕತ್ತು ಕತ್ತರಿಸುತ್ತಿರುವುದನ್ಬು ನೋಡಲಾರಂಭಿಸಿದರಂತೆ.ಅದನ್ನು ನೋಡಲೂ ಜನ ಸೇರಲಾರಂಭಿಸಿದರಂತೆ.

ವಾರಣಾಸಿಯ ಸೆಳೆತ ಅಸಾಧ್ಯವಾದದ್ದು ಅಂತ ಅಲ್ಲೇ ನೆಲೆನಿಂತ ವಿದೇಶಿಗರೂ ಇದ್ದಾರಂತೆ.ತಮ್ಮ ಉಳಿದ ಜೀವಿತಾವಧಿ ವಾರಣಾಸಿಯಲ್ಲೇ ಕಳೆಯುವುದು ಅಂತ ನಿರ್ಧರಿಸಿದ ವೈರಾಗಿಗಳೂ ಇದ್ದಾರಂತೆ. ಸ್ವತಹ ಶಿವನಿಂದ ಸ್ಥಾಪಿಸಲ್ಪಟ್ಟ ನಗರ ಎಂಬ ಐತಿಹ್ಯ ಇಲ್ಲಿಗೆ.ಐತಿಹಾಸಿಕವಾಗಿಯೂ ಶತಮಾನಗಳ…ಅಲ್ಲಲ್ಲ..ಸಹಸ್ರಮಾನದ ಇತಿಹಾಸ ,ನಗರೀಕತೆ ದಾಖಲಾಗಿರುವ ಪಟ್ಟಣ ಇದು. ಭಾರತದೆಲ್ಲೆಡೆ ಹಿಂದೂ ಶ್ರದ್ಧಾಳುಗಳಿಗೆ ಜೀವನದಲ್ಲಿ‌ ಒಮ್ಮೆಯಾದರೂ ಭೇಟಿ ನೀಡಬೇಕೆಂಬ ಬಯಕೆ ಇರುವ ಕ್ಷೇತ್ರ ವಾರಣಾಸಿ.ಆಧ್ಯಾತ್ಮಿಕ‌ ನಗರ ಎಂಬ ನಂಬಿಕೆ,ಭಾವ.ಆದರೇ….

ಧಾರ್ಮಿಕತೆಗೆ ಸಂಬಂಧಿಸಿದ ಪ್ರತಿಯೊಂದನ್ನೂ ಲೌಕಿಕ ವ್ಯವಹಾರದ,ವ್ಯಾಪಾರದ ಭಾಗವನ್ನಾಗಿಸಿದ ಪಟ್ಟಣವೂ ಇದುವೇ.ಇಲ್ಲಿನ ಜನರೇ.ಎಲ್ಲಿ ವ್ಯಾಪಾರ…? ಅಂಗಡಿಗಳಲ್ಲಿ ಮಾತ್ರ ಅಲ್ಲ.ಪವಿತ್ರವೆನಿಸಿದ ದೇವಾಲಯಗಳ ಒಳಗಡೆಯೂ ವ್ಯಾಪಾರವೇ.ಒಬ್ಬೊಬ್ವರದು ಒಂದೊಂದು ವ್ಯಾಪಾರೀ ಪಾತ್ರ.
ವ್ಯಾಪಾರವೇ ಪ್ರಧಾನವಾದಲ್ಲಿ ಜನ ಜೀವನ ವೇಗದ್ದು,ಧಾವಂತದ್ದು.ಉದ್ವೇಗದ್ದು.ಅವೆಲ್ಲವೂ ವಾರಣಾಸಿಯ ಜನಜೀವನದ ಅವಿಭಾಜ್ಯ ಅಂಗಗಳು.ಅದರಿಂದಾಗಿ‌ ಶಬ್ದ ಮಾಲಿನ್ಯ ವಿಪರೀತ.ಪ್ರತಿಯೊಬ್ಬ ವಾಹನಿಗನೂ ಹಾರ್ನ್ ಅದುಮಿಕೊಂಡೇ ಇರುವುದು. Accelerator ಕೊಟ್ಟುಕೊಂಡೇ ಇರುವುದು.

ವ್ಯಾಪಾರದ ಅಭಿಲಾಷೆ ಒಂದು ಹಂತ ಮೀರಿದರೆ ನೈತಿಕತೆ ಕಣ್ಮರೆಯಾಗುತ್ತದೆ. ಲಾಭ ಮಾತ್ರ ಕಾಣಿಸುವುದು. Floating customers ಇದ್ದಲ್ಲಂತೂ ಎದುರು ಇದ್ದವರನ್ನೆಲ್ಲ ಬಕ್ರಾಗಳೆಂದೇ ಪರಿಗಣನೆ. ಇವನ್ನೆಲ್ಲ ಮೀರಿ ನಿಂತವರು ಅಪರೂಪದಲ್ಲಷ್ಟೇ ಕಾಣಿಸಿಯಾರಷ್ಟೇ. ಇದು ವಾರಣಾಸಿ. ದ್ವಂದ್ವಗಳ ನಗರ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ರಮೇಶ್‌ ದೇಲಂಪಾಡಿ

ರಮೇಶ್‌ ದೇಲಂಪಾಡಿ ಅವರು ಕೃಷಿಕರು. ಪ್ರಯೋಗಶೀಲ ಕೃಷಿಕರಾಗಿ ಗುರುತಿಸಿಕೊಂಡಿದ್ದಾರೆ. ಅಡಿಕೆ, ತೆಂಗು, ತಾಳೆ, ರಬ್ಬರ್‌ ಇವರ ಪ್ರಮುಖ ಕೃಷಿ. ಅಡಿಕೆ ಬೇರುಹುಳ, ಅಡಿಕೆ ಹಳದಿ ಎಲೆರೋಗ ಸೇರಿದಂತೆ ಕೃಷಿ ಸಂಬಂಧಿತ ವಿಚಾರಗಳಲ್ಲಿ ಹೆಚ್ಚು ಆಸಕ್ತಿಯಿಂದ ಕೆಲಸ ಮಾಡುತ್ತಿದ್ದಾರೆ.

Published by
ರಮೇಶ್‌ ದೇಲಂಪಾಡಿ

Recent Posts

ಹವಾಮಾನ ವರದಿ | 03-09-2026 | ಕರಾವಳಿ–ಮಲೆನಾಡಿನಲ್ಲಿ ಮತ್ತೆ ಮಳೆಯ ಸಾಧ್ಯತೆ…?

ಕರ್ನಾಟಕದ ಹಲವು ಭಾಗಗಳಲ್ಲಿ ಸೆ.5ರಿಂದ ಕೆಲವು ದಿನ ಮಳೆಯ ತೀವ್ರತೆ ಕಡಿಮೆಯಾಗುವ ಲಕ್ಷಣಗಳಿವೆ.…

17 hours ago

ಹಿಮಾಲಯದಲ್ಲಿ ಹಿಮ ಕರಗಿದರೆ ಅದರ ಪರಿಣಾಮ ಎಲ್ಲಿಗೆ ತಲುಪುತ್ತದೆ? – ಹಿಮಾಲಯದ ದುರಂತದ ಬಳಿಕ ನೇಪಾಳದ ಪ್ರಧಾನಿ ಎಚ್ಚರಿಕೆ

ಹಿಮನದಿ ಕುಸಿತದಿಂದ ಸಂಭವಿಸಿದ ಭೀಕರ ಪ್ರವಾಹದ ಬಳಿಕ ನೇಪಾಳ ಪ್ರಧಾನಿ ಬಾಲೆಂದ್ರ ಶಾ…

24 hours ago

ನಾವು ತಿನ್ನುವ ಆಹಾರದಲ್ಲಿ ಕೀಟನಾಶಕ – ಕರ್ನಾಟಕದಲ್ಲಿ 9,176 ಮಾದರಿಗಳಲ್ಲಿ 334 ಮಿತಿ ಮೀರಿವೆ – ದೇಶದ ಅಂಕಿ ಏನು ಹೇಳುತ್ತದೆ?

2023ರಿಂದ 2026ರವರೆಗೆ ದೇಶದ 23 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಪರೀಕ್ಷಿಸಿದ 70,652…

1 day ago

ಒಂದೇ ತೆಂಗಿನ ಮರದಿಂದ ₹10,000 ಆದಾಯ? ಮೌಲ್ಯವರ್ಧನೆಗೆ ಹೊಸ ದಾರಿ ತೋರಿದ ವಿಶ್ವ ತೆಂಗು ದಿನ

ಕಾಸರಗೋಡಿನ ICAR-CPCRIನಲ್ಲಿ ವಿಶ್ವ ತೆಂಗು ದಿನ–2026 ಆಚರಿಸಿ, ಹವಾಮಾನ ಅನಿಶ್ಚಿತತೆಯ ನಡುವೆ ತೆಂಗು…

1 day ago

ಹವಾಮಾನ ವರದಿ | 02-09-2026 | ಉತ್ತರ ಭಾರತದ ವಾಯುಭಾರ ಕುಸಿತ ದುರ್ಬಲವಾಗುವ ಸಾಧ್ಯತೆ

ಕರಾವಳಿಯಲ್ಲಿ ಮುಂದಿನ ಎರಡು ದಿನ ಅಲ್ಲಲ್ಲಿ ಸಾಮಾನ್ಯ ಮಳೆಯಾದರೂ ಜೋರು ಮಳೆಯ ಸಾಧ್ಯತೆ…

2 days ago

ಕೃಷಿಗೆ ಸಾಲ ಹೆಚ್ಚಿಸಿ – ಅಲ್ಪಾವಧಿ ಮಾತ್ರವಲ್ಲ, ದೀರ್ಘಾವಧಿ ಸಾಲವೂ ಬೇಕು – ಬ್ಯಾಂಕ್‌ಗಳಿಗೆ ನಿರ್ಮಲಾ ಸೀತಾರಾಮನ್ ಸೂಚನೆ

ಕೃಷಿ ಉತ್ಪಾದನೆ ಹೆಚ್ಚಿಸಲು ಬ್ಯಾಂಕ್‌ಗಳು ರೈತರಿಗೆ ಹೆಚ್ಚಿನ ಸಾಂಸ್ಥಿಕ ಸಾಲ ನೀಡಬೇಕು ಎಂದು…

2 days ago