Advertisement
ಸುದ್ದಿಗಳು

ರೈತರ ಭರವಸೆ ಹೆಚ್ಚಿಸಿದ ಕೃಷಿ ಉತ್ಪನ್ನಗಳ ರಫ್ತು | ಶೇ.12 ರಷ್ಟು ಬೆಳವಣಿಗೆ ಹೆಚ್ಚಳ |

Share

ಪ್ರಸಕ್ತ ಹಣಕಾಸು ವರ್ಷ 2022ರ  ಏಪ್ರಿಲ್ ನಿಂದ ಡಿಸೆಂಬರ್ ವರೆಗೆ ಅಂದರೆ ಇನ್ನು ನಾಲ್ಕು ತಿಂಗಳು ಬಾಕಿ ಇರುವ ಈ ಅವಧಿಯಲ್ಲಿ, ದೇಶದ ಕೃಷಿ ಮತ್ತು ಸಂಸ್ಕರಿಸಿದ ಆಹಾರಗಳ ರಫ್ತು $19.69 ಶತಕೋಟಿಗೆ ಏರಿದೆ. ಇದೇ ಒಂದು ವರ್ಷದ ಹಿಂದೆ ರಫ್ತು ಪ್ರಮಾಣ $17.51 ಶತಕೋಟಿಯಷ್ಟಿತ್ತು.  ಈ ಬಾರಿ ರಫ್ತಿನಲ್ಲಿ 12 ರಷ್ಟು ಬೆಳವಣಿಗೆ ದಾಖಲಾಗಿದೆ.

ಅಪೆಡಾ ಅಧ್ಯಕ್ಷ ಅಂಗುಮುತ್ತು ಪ್ರಕಾರ, ಬಾಂಗ್ಲಾದೇಶ, ಯುನೈಟೆಡ್ ಅರಬ್ ಎಮಿರೇಟ್ಸ್, ಯುಎಸ್ಎ, ಸೌದಿ ಅರೇಬಿಯಾ, ಇಂಡೋನೇಷ್ಯಾ ಭಾರತೀಯ ಕೃಷಿ ಉತ್ಪನ್ನಗಳ ಪ್ರಮುಖ ಖರೀದಿದಾರರಾಗಿ ಉಳಿದಿವೆ. ಕೇಂದ್ರ ಸರ್ಕಾರವು 2022-23ರ ಹಣಕಾಸು ವರ್ಷದಲ್ಲಿ 23.56 ಬಿಲಿಯನ್ ಡಾಲರ್ ರಫ್ತು ಗುರಿಯನ್ನು ಹೊಂದಿದೆ.

ಅಧಿಕೃತ ಮಾಹಿತಿಯ ಪ್ರಕಾರ, ಬಾಸ್ಮತಿ ಅಕ್ಕಿ ರಫ್ತು $2.38 ಶತಕೋಟಿಯಿಂದ $3.34 ಶತಕೋಟಿಗೆ 40.26 ಶೇಕಡಾ ಏರಿಕೆಯಾಗಿದೆ. ಹಾಗೆ ಇನ್ನಿತರ ಅಕ್ಕಿ ರಫ್ತು ಶೇಕಡಾ 3.35 ರಷ್ಟು ಏರಿಕೆಯಾಗಿ $4.66 ಶತಕೋಟಿಗೆ ತಲುಪಿದೆ. ಕಳೆದ ವರ್ಷ ಇದೇ ಅವಧಿಯಲ್ಲಿ ದೇಶವು $4.51 ಬಿಲಿಯನ್ ಮೌಲ್ಯದ ಬಾಸ್ಮತಿ ಅಲ್ಲದ ಅಕ್ಕಿಯನ್ನು ರಫ್ತು ಮಾಡಿದೆ.

ತಾಜಾ ತರಕಾರಿಗಳ ರಫ್ತು $616 ಮಿಲಿಯನ್‌ನಿಂದ $662 ಮಿಲಿಯನ್‌ಗೆ 7.5 ಶೇಕಡಾ ಏರಿಕೆಯಾಗಿದೆ, ತಾಜಾ ಹಣ್ಣುಗಳ ರಫ್ತು $462 ಮಿಲಿಯನ್‌ನಿಂದ $459 ಮಿಲಿಯನ್‌ಗೆ ಇಳಿದಿದೆ. ಬೇಳೆಕಾಳುಗಳ ರಫ್ತು ಶೇಕಡಾ 80.38 ರಷ್ಟು ಏರಿಕೆಯಾಗಿದ್ದು, ಕಳೆದ ವರ್ಷದ ಇದೇ ಅವಧಿಯಲ್ಲಿ $242 ಮಿಲಿಯನ್‌ಗೆ ಹೋಲಿಸಿದರೆ $436 ಮಿಲಿಯನ್‌ಗೆ ತಲುಪಿದೆ.

ಕೋಳಿ ಉತ್ಪನ್ನಗಳ ರಫ್ತು $50 ಮಿಲಿಯನ್‌ನಿಂದ $95 ಮಿಲಿಯನ್‌ಗೆ ಶೇಕಡಾ 91.7 ರಷ್ಟು ಹೆಚ್ಚಾಗಿದೆ, ಮೆಕ್ಕೆಜೋಳ ಸೇರಿದಂತೆ ಇತರ ಧಾನ್ಯಗಳ ರಫ್ತು $869 ಮಿಲಿಯನ್ ತಲುಪಿದೆ. ಧಾನ್ಯ ರಫ್ತು ಕಳೆದ ವರ್ಷದ ಇದೇ ಅವಧಿಯಲ್ಲಿ $764 ಮಿಲಿಯನ್‌ಗೆ ಹೋಲಿಸಿದರೆ 13.6 ಶೇಕಡಾ ಹೆಚ್ಚಾಗಿದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಆಂಧ್ರಪ್ರದೇಶದ ಹೊಸ ಪ್ರಯೋಗ : ರೈತನ ತೋಟದಿಂದ ನೇರವಾಗಿ ಮನೆ ಬಾಗಿಲಿಗೆ ಕೃಷಿ ಉತ್ಪನ್ನ

ಆಂಧ್ರಪ್ರದೇಶ ಸರ್ಕಾರ ರೈತರಿಂದ ನೇರವಾಗಿ ಕೃಷಿ ಉತ್ಪನ್ನಗಳನ್ನು ಮನೆ ಬಾಗಿಲಿಗೆ ತಲುಪಿಸುವ “Farm-to-Home”…

9 hours ago

ಭಾರತ ಕೃಷಿಯಲ್ಲಿ ಭರ್ಜರಿ ದಾಖಲೆ : ಆಹಾರ ಉತ್ಪಾದನೆ 3765 ಮಿಲಿಯನ್ ಟನ್!

2025-26ರಲ್ಲಿ ಭಾರತದಲ್ಲಿ 3765.63 ಲಕ್ಷ ಟನ್ ಆಹಾರ ಉತ್ಪಾದನೆ ಸಾಧ್ಯತೆ ಇದ್ದು, ಇದು…

19 hours ago

ಮಂಗಳೂರಿನಲ್ಲಿ ಉದ್ಯೋಗಾವಕಾಶ : ಮೇ 30ರಂದು ಕಸ್ಟಮರ್ ಸಪೋರ್ಟ್ ಹಾಗೂ ಟೆಲಿಕಾಲರ್ ಹುದ್ದೆಗಳಿಗೆ ನೇರ ಸಂದರ್ಶನ

ವಿ.ಆರ್.ಎನ್ ಇನ್ಪೋಟೆಕ್ ಕಂಪೆನಿಯ ಕಸ್ಟಮರ್ ಸಪೋರ್ಟ್ ಎಕ್ಸಿಕ್ಯೂಟಿವ್ ಹಾಗೂ ಟೆಲಿಕಾಲರ್ ಹುದ್ದೆಗಳಿಗೆ ಮೇ…

20 hours ago

ಬ್ಲಿಂಕಿಟ್‌ನಲ್ಲಿ ಉದ್ಯೋಗಾವಕಾಶ : ಜೂನ್ 1ರಂದು ಮಂಗಳೂರಿನಲ್ಲಿ ನೇರ ಸಂದರ್ಶನ

ಬ್ಲಿಂಕಿಟ್ ಕಂಪೆನಿಯ ಪಿಕ್ಕರ್ ಹಾಗೂ ಪ್ಯಾಕರ್ ಹುದ್ದೆಗಳಿಗೆ ಜೂನ್ 1ರಂದು ಮಂಗಳೂರಿನಲ್ಲಿ ನೇರ…

20 hours ago

ಬಕ್ರೀದ್‌ಗೂ ಮುನ್ನ ದೇಶದಲ್ಲಿ ಹೊಸ ಚರ್ಚೆ | “ಗೋವನ್ನು ರಾಷ್ಟ್ರೀಯ ಪ್ರಾಣಿ ಎಂದು ಘೋಷಿಸಿ” — ಮುಸ್ಲಿಂ ಸಂಘಟನೆಗಳ ಬೇಡಿಕೆ

ಬಕ್ರೀದ್‌ಗೂ ಮುನ್ನ ಗೋಹತ್ಯೆ ಮತ್ತು ಗೋ ರಕ್ಷಣೆಯ ವಿಚಾರ ಮತ್ತೆ ದೇಶದಲ್ಲಿ ಚರ್ಚೆಗೆ…

1 day ago

ಹವಾಮಾನ ಬದಲಾವಣೆ ಈಗ ಭವಿಷ್ಯದ ಸಮಸ್ಯೆಯಲ್ಲ- ಸ್ಥಳೀಯ ಮಟ್ಟದಲ್ಲೇ ಆರಂಭವಾಗುತ್ತಿದೆ ಕ್ರಿಯಾ ಯೋಜನೆ

ಹವಾಮಾನ ಬದಲಾವಣೆಯ ಪರಿಣಾಮಗಳನ್ನು ಎದುರಿಸಲು ದಕ್ಷಿಣ ಕನ್ನಡದಲ್ಲಿ ಜಿಲ್ಲಾ ಮಟ್ಟದ ಅಧಿಕಾರಿಗಳು ಹಾಗೂ…

1 day ago