Advertisement
ಸುದ್ದಿಗಳು

ರೈತರ ಭರವಸೆ ಹೆಚ್ಚಿಸಿದ ಕೃಷಿ ಉತ್ಪನ್ನಗಳ ರಫ್ತು | ಶೇ.12 ರಷ್ಟು ಬೆಳವಣಿಗೆ ಹೆಚ್ಚಳ |

Share

ಪ್ರಸಕ್ತ ಹಣಕಾಸು ವರ್ಷ 2022ರ  ಏಪ್ರಿಲ್ ನಿಂದ ಡಿಸೆಂಬರ್ ವರೆಗೆ ಅಂದರೆ ಇನ್ನು ನಾಲ್ಕು ತಿಂಗಳು ಬಾಕಿ ಇರುವ ಈ ಅವಧಿಯಲ್ಲಿ, ದೇಶದ ಕೃಷಿ ಮತ್ತು ಸಂಸ್ಕರಿಸಿದ ಆಹಾರಗಳ ರಫ್ತು $19.69 ಶತಕೋಟಿಗೆ ಏರಿದೆ. ಇದೇ ಒಂದು ವರ್ಷದ ಹಿಂದೆ ರಫ್ತು ಪ್ರಮಾಣ $17.51 ಶತಕೋಟಿಯಷ್ಟಿತ್ತು.  ಈ ಬಾರಿ ರಫ್ತಿನಲ್ಲಿ 12 ರಷ್ಟು ಬೆಳವಣಿಗೆ ದಾಖಲಾಗಿದೆ.

ಅಪೆಡಾ ಅಧ್ಯಕ್ಷ ಅಂಗುಮುತ್ತು ಪ್ರಕಾರ, ಬಾಂಗ್ಲಾದೇಶ, ಯುನೈಟೆಡ್ ಅರಬ್ ಎಮಿರೇಟ್ಸ್, ಯುಎಸ್ಎ, ಸೌದಿ ಅರೇಬಿಯಾ, ಇಂಡೋನೇಷ್ಯಾ ಭಾರತೀಯ ಕೃಷಿ ಉತ್ಪನ್ನಗಳ ಪ್ರಮುಖ ಖರೀದಿದಾರರಾಗಿ ಉಳಿದಿವೆ. ಕೇಂದ್ರ ಸರ್ಕಾರವು 2022-23ರ ಹಣಕಾಸು ವರ್ಷದಲ್ಲಿ 23.56 ಬಿಲಿಯನ್ ಡಾಲರ್ ರಫ್ತು ಗುರಿಯನ್ನು ಹೊಂದಿದೆ.

ಅಧಿಕೃತ ಮಾಹಿತಿಯ ಪ್ರಕಾರ, ಬಾಸ್ಮತಿ ಅಕ್ಕಿ ರಫ್ತು $2.38 ಶತಕೋಟಿಯಿಂದ $3.34 ಶತಕೋಟಿಗೆ 40.26 ಶೇಕಡಾ ಏರಿಕೆಯಾಗಿದೆ. ಹಾಗೆ ಇನ್ನಿತರ ಅಕ್ಕಿ ರಫ್ತು ಶೇಕಡಾ 3.35 ರಷ್ಟು ಏರಿಕೆಯಾಗಿ $4.66 ಶತಕೋಟಿಗೆ ತಲುಪಿದೆ. ಕಳೆದ ವರ್ಷ ಇದೇ ಅವಧಿಯಲ್ಲಿ ದೇಶವು $4.51 ಬಿಲಿಯನ್ ಮೌಲ್ಯದ ಬಾಸ್ಮತಿ ಅಲ್ಲದ ಅಕ್ಕಿಯನ್ನು ರಫ್ತು ಮಾಡಿದೆ.

ತಾಜಾ ತರಕಾರಿಗಳ ರಫ್ತು $616 ಮಿಲಿಯನ್‌ನಿಂದ $662 ಮಿಲಿಯನ್‌ಗೆ 7.5 ಶೇಕಡಾ ಏರಿಕೆಯಾಗಿದೆ, ತಾಜಾ ಹಣ್ಣುಗಳ ರಫ್ತು $462 ಮಿಲಿಯನ್‌ನಿಂದ $459 ಮಿಲಿಯನ್‌ಗೆ ಇಳಿದಿದೆ. ಬೇಳೆಕಾಳುಗಳ ರಫ್ತು ಶೇಕಡಾ 80.38 ರಷ್ಟು ಏರಿಕೆಯಾಗಿದ್ದು, ಕಳೆದ ವರ್ಷದ ಇದೇ ಅವಧಿಯಲ್ಲಿ $242 ಮಿಲಿಯನ್‌ಗೆ ಹೋಲಿಸಿದರೆ $436 ಮಿಲಿಯನ್‌ಗೆ ತಲುಪಿದೆ.

ಕೋಳಿ ಉತ್ಪನ್ನಗಳ ರಫ್ತು $50 ಮಿಲಿಯನ್‌ನಿಂದ $95 ಮಿಲಿಯನ್‌ಗೆ ಶೇಕಡಾ 91.7 ರಷ್ಟು ಹೆಚ್ಚಾಗಿದೆ, ಮೆಕ್ಕೆಜೋಳ ಸೇರಿದಂತೆ ಇತರ ಧಾನ್ಯಗಳ ರಫ್ತು $869 ಮಿಲಿಯನ್ ತಲುಪಿದೆ. ಧಾನ್ಯ ರಫ್ತು ಕಳೆದ ವರ್ಷದ ಇದೇ ಅವಧಿಯಲ್ಲಿ $764 ಮಿಲಿಯನ್‌ಗೆ ಹೋಲಿಸಿದರೆ 13.6 ಶೇಕಡಾ ಹೆಚ್ಚಾಗಿದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

E20 ಪೆಟ್ರೋಲ್‌ : ದೇಶದ ಹಿತದ ಹೆಸರಿನಲ್ಲಿ ಸಾಮಾನ್ಯರ ಹೆಗಲಿನ ಮೇಲೆ ಹೆಚ್ಚು”ವರಿ”ಯೇ?

ಪವರ್‌ ಸ್ಪ್ರೇಯರ್‌ ಸಮಸ್ಯೆಯ ಅನುಭವದ ಮೂಲಕ E20 ಪೆಟ್ರೋಲ್‌ನ ಪರಿಣಾಮಗಳ ಬಗ್ಗೆ ಪ್ರಶ್ನೆ…

35 minutes ago

₹1,500 ಕೋಟಿ ಅಕ್ರಮ ಅಡಿಕೆ ಜಾಲ ಬಯಲು – ED ತನಿಖೆಯಲ್ಲಿ ಬೆಚ್ಚಿಬೀಳಿಸುವ ಮಾಹಿತಿ

ಮ್ಯಾನ್ಮಾರ್‌ನಿಂದ ಅಕ್ರಮ ಅಡಿಕೆ ಸಾಗಾಟ ಮಾಡಿ ₹1,500 ಕೋಟಿ ಹಣ ವರ್ಗಾವಣೆ ನಡೆಸಿದ…

15 hours ago

ಮಹಾರಾಷ್ಟ್ರದಲ್ಲಿ ತಡೆಹಿಡಿದ ಅಡಿಕೆ ಲಾರಿಗಳ ಬಿಡುಗಡೆಗೆ ಫಡ್ನವೀಸ್‌ಗೆ ಮನವಿ

ಮಹಾರಾಷ್ಟ್ರದಲ್ಲಿ ತಡೆಹಿಡಿದಿರುವ 50ಕ್ಕೂ ಹೆಚ್ಚು ಅಡಿಕೆ ಲಾರಿಗಳನ್ನು ಬಿಡುಗಡೆ ಮಾಡುವಂತೆ ಫಡ್ನವೀಸ್‌ಗೆ ಅಡಿಕೆ…

16 hours ago

ರಾಜ್ಯದ ವಿವಿದೆಡೆ ಭಾರೀ ಮಳೆ – ಜುಲೈ 8 ರಂದು ಹಲವು ಜಿಲ್ಲೆಗಳಲ್ಲಿ ಶಾಲೆ-ಕಾಲೇಜುಗಳಿಗೆ ರಜೆ ಘೋಷಣೆ

ಭಾರೀ ಮಳೆ ಹಿನ್ನೆಲೆಯಲ್ಲಿ ಜುಲೈ 8ರಂದು ರಾಜ್ಯದ ಹಲವು ಜಿಲ್ಲೆಗಳ ಶಾಲೆ-ಕಾಲೇಜುಗಳಿಗೆ ರಜೆ…

16 hours ago

ಮುಂಗಾರು ಬೆಳೆ ಸಮೀಕ್ಷೆ ಆರಂಭ | ರೈತರೇ ಮೊಬೈಲ್‌ ಮೂಲಕ ಬೆಳೆ ವಿವರ ದಾಖಲಿಸಿ – ಕೃಷಿ ಇಲಾಖೆ ಮನವಿ

2026-27ರ ಮುಂಗಾರು ಬೆಳೆ ಸಮೀಕ್ಷೆಗೆ ಚಾಲನೆ; ರೈತರು ಮೊಬೈಲ್‌ ಆ್ಯಪ್‌ ಮೂಲಕವೇ ಬೆಳೆ…

17 hours ago

ಮಾಣಿ–ಸಂಪಾಜೆ ರಸ್ತೆ ದುರಸ್ತಿಗೆ ₹49.22 ಕೋಟಿ ಮಂಜೂರು | ಚತುಷ್ಪಥ ಯೋಜನೆಗೆ ವೇಗ

ಮಾಣಿ–ಸಂಪಾಜೆ ರಾಷ್ಟ್ರೀಯ ಹೆದ್ದಾರಿ ದುರಸ್ತಿಗೆ ಕೇಂದ್ರದಿಂದ ₹49.22 ಕೋಟಿ ವಿಶೇಷ ಅನುದಾನ ಮಂಜೂರು.…

17 hours ago