Advertisement
ಸುದ್ದಿಗಳು

ರೈತರ ಭರವಸೆ ಹೆಚ್ಚಿಸಿದ ಕೃಷಿ ಉತ್ಪನ್ನಗಳ ರಫ್ತು | ಶೇ.12 ರಷ್ಟು ಬೆಳವಣಿಗೆ ಹೆಚ್ಚಳ |

Share

ಪ್ರಸಕ್ತ ಹಣಕಾಸು ವರ್ಷ 2022ರ  ಏಪ್ರಿಲ್ ನಿಂದ ಡಿಸೆಂಬರ್ ವರೆಗೆ ಅಂದರೆ ಇನ್ನು ನಾಲ್ಕು ತಿಂಗಳು ಬಾಕಿ ಇರುವ ಈ ಅವಧಿಯಲ್ಲಿ, ದೇಶದ ಕೃಷಿ ಮತ್ತು ಸಂಸ್ಕರಿಸಿದ ಆಹಾರಗಳ ರಫ್ತು $19.69 ಶತಕೋಟಿಗೆ ಏರಿದೆ. ಇದೇ ಒಂದು ವರ್ಷದ ಹಿಂದೆ ರಫ್ತು ಪ್ರಮಾಣ $17.51 ಶತಕೋಟಿಯಷ್ಟಿತ್ತು.  ಈ ಬಾರಿ ರಫ್ತಿನಲ್ಲಿ 12 ರಷ್ಟು ಬೆಳವಣಿಗೆ ದಾಖಲಾಗಿದೆ.

ಅಪೆಡಾ ಅಧ್ಯಕ್ಷ ಅಂಗುಮುತ್ತು ಪ್ರಕಾರ, ಬಾಂಗ್ಲಾದೇಶ, ಯುನೈಟೆಡ್ ಅರಬ್ ಎಮಿರೇಟ್ಸ್, ಯುಎಸ್ಎ, ಸೌದಿ ಅರೇಬಿಯಾ, ಇಂಡೋನೇಷ್ಯಾ ಭಾರತೀಯ ಕೃಷಿ ಉತ್ಪನ್ನಗಳ ಪ್ರಮುಖ ಖರೀದಿದಾರರಾಗಿ ಉಳಿದಿವೆ. ಕೇಂದ್ರ ಸರ್ಕಾರವು 2022-23ರ ಹಣಕಾಸು ವರ್ಷದಲ್ಲಿ 23.56 ಬಿಲಿಯನ್ ಡಾಲರ್ ರಫ್ತು ಗುರಿಯನ್ನು ಹೊಂದಿದೆ.

ಅಧಿಕೃತ ಮಾಹಿತಿಯ ಪ್ರಕಾರ, ಬಾಸ್ಮತಿ ಅಕ್ಕಿ ರಫ್ತು $2.38 ಶತಕೋಟಿಯಿಂದ $3.34 ಶತಕೋಟಿಗೆ 40.26 ಶೇಕಡಾ ಏರಿಕೆಯಾಗಿದೆ. ಹಾಗೆ ಇನ್ನಿತರ ಅಕ್ಕಿ ರಫ್ತು ಶೇಕಡಾ 3.35 ರಷ್ಟು ಏರಿಕೆಯಾಗಿ $4.66 ಶತಕೋಟಿಗೆ ತಲುಪಿದೆ. ಕಳೆದ ವರ್ಷ ಇದೇ ಅವಧಿಯಲ್ಲಿ ದೇಶವು $4.51 ಬಿಲಿಯನ್ ಮೌಲ್ಯದ ಬಾಸ್ಮತಿ ಅಲ್ಲದ ಅಕ್ಕಿಯನ್ನು ರಫ್ತು ಮಾಡಿದೆ.

ತಾಜಾ ತರಕಾರಿಗಳ ರಫ್ತು $616 ಮಿಲಿಯನ್‌ನಿಂದ $662 ಮಿಲಿಯನ್‌ಗೆ 7.5 ಶೇಕಡಾ ಏರಿಕೆಯಾಗಿದೆ, ತಾಜಾ ಹಣ್ಣುಗಳ ರಫ್ತು $462 ಮಿಲಿಯನ್‌ನಿಂದ $459 ಮಿಲಿಯನ್‌ಗೆ ಇಳಿದಿದೆ. ಬೇಳೆಕಾಳುಗಳ ರಫ್ತು ಶೇಕಡಾ 80.38 ರಷ್ಟು ಏರಿಕೆಯಾಗಿದ್ದು, ಕಳೆದ ವರ್ಷದ ಇದೇ ಅವಧಿಯಲ್ಲಿ $242 ಮಿಲಿಯನ್‌ಗೆ ಹೋಲಿಸಿದರೆ $436 ಮಿಲಿಯನ್‌ಗೆ ತಲುಪಿದೆ.

ಕೋಳಿ ಉತ್ಪನ್ನಗಳ ರಫ್ತು $50 ಮಿಲಿಯನ್‌ನಿಂದ $95 ಮಿಲಿಯನ್‌ಗೆ ಶೇಕಡಾ 91.7 ರಷ್ಟು ಹೆಚ್ಚಾಗಿದೆ, ಮೆಕ್ಕೆಜೋಳ ಸೇರಿದಂತೆ ಇತರ ಧಾನ್ಯಗಳ ರಫ್ತು $869 ಮಿಲಿಯನ್ ತಲುಪಿದೆ. ಧಾನ್ಯ ರಫ್ತು ಕಳೆದ ವರ್ಷದ ಇದೇ ಅವಧಿಯಲ್ಲಿ $764 ಮಿಲಿಯನ್‌ಗೆ ಹೋಲಿಸಿದರೆ 13.6 ಶೇಕಡಾ ಹೆಚ್ಚಾಗಿದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ದಕ್ಷಿಣ ಕನ್ನಡಕ್ಕೆ ಕೈಗಾರಿಕಾ ಬಲ : ಗಂಜಿಮಠ ಪ್ಲಾಸ್ಟಿಕ್ ಪಾರ್ಕ್ ಕಾಮಗಾರಿ ಪರಿಶೀಲಿಸಿದ ಸಂಸದ ಬ್ರಿಜೇಶ್ ಚೌಟ

ಗಂಜಿಮಠದ 104 ಎಕರೆ ಪ್ಲಾಸ್ಟಿಕ್ ಪಾರ್ಕ್ ಯೋಜನೆಗೆ ಮತ್ತೆ ವೇಗ ಸಿಕ್ಕಿದ್ದು, ಸಂಸದ…

3 hours ago

Gen Z ಮತದಾರರತ್ತ ಬಿಜೆಪಿ ಕಣ್ಣು- 18-25 ವಯೋಮಾನದ ಯುವಕರಿಗಾಗಿ ‘ತರುಣ ಮೋರ್ಚಾ’ ರಚನೆಗೆ ಚಿಂತನೆ

18-25 ವರ್ಷ ವಯಸ್ಸಿನ Gen Z ಯುವಕರನ್ನು ಸೆಳೆಯಲು ಬಿಜೆಪಿ ‘ತರುಣ ಮೋರ್ಚಾ’…

4 hours ago

ವಿಯೆಟ್ನಾಂನಲ್ಲಿ ಅಡಿಕೆ ಬೆಲೆ ಕುಸಿತ – ಚೀನಾದ ಬೇಡಿಕೆ ಇಳಿಕೆಯಿಂದ ರೈತರಿಗೆ ಸಂಕಷ್ಟ! – ಭಾರತದ ಅಡಿಕೆ ಮಾರುಕಟ್ಟೆಗೆ ಏನು ಎಚ್ಚರಿಕೆ..?

ವಿಯೆಟ್ನಾಂನಲ್ಲಿ ಅಡಿಕೆ ಬೆಲೆ ದಾಖಲೆಯ ಮಟ್ಟದಿಂದ ಭಾರೀ ಕುಸಿತ ಕಂಡಿದ್ದು, ಚೀನಾದ ಖರೀದಿ…

4 hours ago

ಹವಾಮಾನ ವರದಿ | 17-06-2026 | ಜೂನ್ 21 ರವರೆಗೆ ಕರಾವಳಿಯಲ್ಲಿ ಅಲ್ಪ ಮಳೆ, ಎಲ್ ನಿನೋ ಹಿನ್ನೆಲೆ ರೈತರಿಗೆ ನೀರು ಸಂಗ್ರಹದ ಸಲಹೆ

ಕರ್ನಾಟಕದಲ್ಲಿ ಮುಂಗಾರು ಇನ್ನೂ ಪೂರ್ಣ ಪ್ರಮಾಣದಲ್ಲಿ ಚುರುಕುಗೊಂಡಿಲ್ಲ. ಎಲ್ ನಿನೋ ಪ್ರಭಾವದಿಂದ ಮಳೆಯ…

12 hours ago

ಎಲ್ ನಿನೋ ಪರಿಣಾಮ – 10 ರಾಜ್ಯಗಳಲ್ಲಿ ಜಾಗೃತಿ ಅಭಿಯಾನ

2026ರ ಖಾರಿಫ್ ಹಂಗಾಮಿಗೆ ಸಿದ್ಧತೆ ಪರಿಶೀಲಿಸಿದ ಕೇಂದ್ರ ಕೃಷಿ ಸಚಿವ ಶಿವರಾಜ್ ಸಿಂಗ್…

13 hours ago

ಇಂಡೋನೇಷ್ಯಾದ ಸ್ಟಾರ್ಟ್‌ಅಪ್‌ನಿಂದ ಬಾಂಗ್ಲಾದೇಶ, ಮಾಲ್ಡೀವ್ಸ್‌ಗೆ ಅಡಿಕೆ ರಫ್ತು – ಜಾಗತಿಕ ಮಾರುಕಟ್ಟೆಯಲ್ಲಿ ಅಡಿಕೆಗೆ ಬೇಡಿಕೆ ಹೆಚ್ಚಳ

ಇಂಡೋನೇಷ್ಯಾದ ಸ್ಟಾರ್ಟ್‌ಅಪ್ ಸಂಸ್ಥೆ ಬಾಂಗ್ಲಾದೇಶ ಹಾಗೂ ಮಾಲ್ಡೀವ್ಸ್‌ಗೆ ಅಡಿಕೆ ರಫ್ತು ಮಾಡಿದೆ. ಜಾಗತಿಕ…

1 day ago