Advertisement
ಸುದ್ದಿಗಳು

ರೈತರ ಭರವಸೆ ಹೆಚ್ಚಿಸಿದ ಕೃಷಿ ಉತ್ಪನ್ನಗಳ ರಫ್ತು | ಶೇ.12 ರಷ್ಟು ಬೆಳವಣಿಗೆ ಹೆಚ್ಚಳ |

Share

ಪ್ರಸಕ್ತ ಹಣಕಾಸು ವರ್ಷ 2022ರ  ಏಪ್ರಿಲ್ ನಿಂದ ಡಿಸೆಂಬರ್ ವರೆಗೆ ಅಂದರೆ ಇನ್ನು ನಾಲ್ಕು ತಿಂಗಳು ಬಾಕಿ ಇರುವ ಈ ಅವಧಿಯಲ್ಲಿ, ದೇಶದ ಕೃಷಿ ಮತ್ತು ಸಂಸ್ಕರಿಸಿದ ಆಹಾರಗಳ ರಫ್ತು $19.69 ಶತಕೋಟಿಗೆ ಏರಿದೆ. ಇದೇ ಒಂದು ವರ್ಷದ ಹಿಂದೆ ರಫ್ತು ಪ್ರಮಾಣ $17.51 ಶತಕೋಟಿಯಷ್ಟಿತ್ತು.  ಈ ಬಾರಿ ರಫ್ತಿನಲ್ಲಿ 12 ರಷ್ಟು ಬೆಳವಣಿಗೆ ದಾಖಲಾಗಿದೆ.

ಅಪೆಡಾ ಅಧ್ಯಕ್ಷ ಅಂಗುಮುತ್ತು ಪ್ರಕಾರ, ಬಾಂಗ್ಲಾದೇಶ, ಯುನೈಟೆಡ್ ಅರಬ್ ಎಮಿರೇಟ್ಸ್, ಯುಎಸ್ಎ, ಸೌದಿ ಅರೇಬಿಯಾ, ಇಂಡೋನೇಷ್ಯಾ ಭಾರತೀಯ ಕೃಷಿ ಉತ್ಪನ್ನಗಳ ಪ್ರಮುಖ ಖರೀದಿದಾರರಾಗಿ ಉಳಿದಿವೆ. ಕೇಂದ್ರ ಸರ್ಕಾರವು 2022-23ರ ಹಣಕಾಸು ವರ್ಷದಲ್ಲಿ 23.56 ಬಿಲಿಯನ್ ಡಾಲರ್ ರಫ್ತು ಗುರಿಯನ್ನು ಹೊಂದಿದೆ.

ಅಧಿಕೃತ ಮಾಹಿತಿಯ ಪ್ರಕಾರ, ಬಾಸ್ಮತಿ ಅಕ್ಕಿ ರಫ್ತು $2.38 ಶತಕೋಟಿಯಿಂದ $3.34 ಶತಕೋಟಿಗೆ 40.26 ಶೇಕಡಾ ಏರಿಕೆಯಾಗಿದೆ. ಹಾಗೆ ಇನ್ನಿತರ ಅಕ್ಕಿ ರಫ್ತು ಶೇಕಡಾ 3.35 ರಷ್ಟು ಏರಿಕೆಯಾಗಿ $4.66 ಶತಕೋಟಿಗೆ ತಲುಪಿದೆ. ಕಳೆದ ವರ್ಷ ಇದೇ ಅವಧಿಯಲ್ಲಿ ದೇಶವು $4.51 ಬಿಲಿಯನ್ ಮೌಲ್ಯದ ಬಾಸ್ಮತಿ ಅಲ್ಲದ ಅಕ್ಕಿಯನ್ನು ರಫ್ತು ಮಾಡಿದೆ.

ತಾಜಾ ತರಕಾರಿಗಳ ರಫ್ತು $616 ಮಿಲಿಯನ್‌ನಿಂದ $662 ಮಿಲಿಯನ್‌ಗೆ 7.5 ಶೇಕಡಾ ಏರಿಕೆಯಾಗಿದೆ, ತಾಜಾ ಹಣ್ಣುಗಳ ರಫ್ತು $462 ಮಿಲಿಯನ್‌ನಿಂದ $459 ಮಿಲಿಯನ್‌ಗೆ ಇಳಿದಿದೆ. ಬೇಳೆಕಾಳುಗಳ ರಫ್ತು ಶೇಕಡಾ 80.38 ರಷ್ಟು ಏರಿಕೆಯಾಗಿದ್ದು, ಕಳೆದ ವರ್ಷದ ಇದೇ ಅವಧಿಯಲ್ಲಿ $242 ಮಿಲಿಯನ್‌ಗೆ ಹೋಲಿಸಿದರೆ $436 ಮಿಲಿಯನ್‌ಗೆ ತಲುಪಿದೆ.

ಕೋಳಿ ಉತ್ಪನ್ನಗಳ ರಫ್ತು $50 ಮಿಲಿಯನ್‌ನಿಂದ $95 ಮಿಲಿಯನ್‌ಗೆ ಶೇಕಡಾ 91.7 ರಷ್ಟು ಹೆಚ್ಚಾಗಿದೆ, ಮೆಕ್ಕೆಜೋಳ ಸೇರಿದಂತೆ ಇತರ ಧಾನ್ಯಗಳ ರಫ್ತು $869 ಮಿಲಿಯನ್ ತಲುಪಿದೆ. ಧಾನ್ಯ ರಫ್ತು ಕಳೆದ ವರ್ಷದ ಇದೇ ಅವಧಿಯಲ್ಲಿ $764 ಮಿಲಿಯನ್‌ಗೆ ಹೋಲಿಸಿದರೆ 13.6 ಶೇಕಡಾ ಹೆಚ್ಚಾಗಿದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಹವಾಮಾನ ವರದಿ | 17-04-2026 | ಕರ್ನಾಟಕದ ಹವಾಮಾನದಲ್ಲಿ ಬದಲಾವಣೆ – ಏಪ್ರಿಲ್ 18 ರಿಂದ ಮಳೆ ಹೆಚ್ಚಳ

ಏಪ್ರಿಲ್ 18ರಿಂದ ರಾಜ್ಯದಲ್ಲಿ ಹವಾಮಾನ ಬದಲಾವಣೆ ಕಂಡುಬರುತ್ತಿದ್ದು, ಹಂತ ಹಂತವಾಗಿ ಮಳೆಯ ಚಟುವಟಿಕೆ…

9 hours ago

ಒಡಿಶಾ ಕರಾವಳಿಯಲ್ಲಿ ಅಕ್ರಮ ಅಡಿಕೆ ಸಾಗಣೆ ಪತ್ತೆ – 700 ಕ್ಕೂ ಹೆಚ್ಚು ಗೋಣಿ ಚೀಲ ವಶಕ್ಕೆ

ಒಡಿಶಾ ಕರಾವಳಿಯಲ್ಲಿ ಅಕ್ರಮವಾಗಿ ಸಾಗಿಸಲಾಗುತ್ತಿದ್ದ 700 ಕ್ಕೂ ಹೆಚ್ಚು ಗೋಣಿ ಚೀಲಗಳ ಅಡಿಕೆ…

2 days ago

ರಾಸಾಯನಿಕ ಮುಕ್ತ ಕೃಷಿಗೆ ಪ್ರಧಾನಿ ಮೋದಿ ಕರೆ

ಆದಿಚುಂಚನಗಿರಿಯಲ್ಲಿ ಭೈರವೈಕ್ಯ ಮಂದಿರವನ್ನು ಪ್ರಧಾನಿ ಮೋದಿ ಲೋಕಾರ್ಪಣೆಗೊಳಿಸಿದರು. ರಾಸಾಯನಿಕ ಮುಕ್ತ ಕೃಷಿಗೆ ಆದ್ಯತೆ…

2 days ago

ವಳಲಂಬೆಯಲ್ಲಿ ಎ.19 ರಂದು ‘ಸಂಗೀತ ಸಂಭ್ರಮ’

ಸುಳ್ಯದ ವಳಲಂಬೆಯಲ್ಲಿ ಏಪ್ರಿಲ್ 19ರಂದು ‘ಸಂಗೀತ ಸಂಭ್ರಮ’ ಕಾರ್ಯಕ್ರಮ ನಡೆಯಲಿದೆ. ಖ್ಯಾತ ಕಲಾವಿದರಿಂದ…

2 days ago

ಹವಾಮಾನ ವರದಿ | 15-04-2026 | ಕರ್ನಾಟಕದಲ್ಲಿ ಬಿಸಿಗಾಳಿಯ ನಡುವೆ ಮಳೆಯ ಸುಳಿವು – ಏಪ್ರಿಲ್ 18 ರಿಂದ ಮಳೆ…!

ಕರ್ನಾಟಕದಲ್ಲಿ ಏಪ್ರಿಲ್ 18ರಿಂದ ಹಂತ ಹಂತವಾಗಿ ಮಳೆಯ ಚಟುವಟಿಕೆ ಆರಂಭವಾಗುವ ಸಾಧ್ಯತೆ ಇದೆ.…

2 days ago

ವಿಷು ಹಬ್ಬದ ಅರ್ಥವೇನು ಗೊತ್ತಾ..? ಸೂರ್ಯ ಸಂಕ್ರಮಣದ ಈ ರಹಸ್ಯ ನಿಮ್ಮ ಜೀವನವೇ ಬದಲಾಯಿಸಬಹುದು..!

ವಿಷು ಹಬ್ಬವು ಸೂರ್ಯನ ಮೇಷ ಸಂಕ್ರಮಣದೊಂದಿಗೆ ಸಂಬಂಧಿಸಿದ ಆಧ್ಯಾತ್ಮಿಕ ಹಬ್ಬವಾಗಿದೆ. ವಿಷು ಕಣಿ…

3 days ago