ಮಂಗಳೂರು-ಬೆಂಗಳೂರು ಸಂಪರ್ಕಿಸಲು ಎಕ್ಸ್‌ಪ್ರೆಸ್‌ವೇ | 2028 ರಲ್ಲಿ ಪ್ರಾರಂಭವಾಗುವ ನಿರೀಕ್ಷೆ |

November 12, 2024
10:26 PM

ಮಂಗಳೂರು-ಬೆಂಗಳೂರು ಸಂಪರ್ಕಿಸಲು ಎಕ್ಸ್‌ಪ್ರೆಸ್‌ವೇ (ಹೈ-ಸ್ಪೀಡ್ ಕಾರಿಡಾರ್) ನಿರ್ಮಿಸಲು ಯೋಜನೆ ರೂಪಿಸಲಾಗಿದೆ.  ರಸ್ತೆ ಸಾರಿಗೆ ಮತ್ತು ಹೆದ್ದಾರಿಗಳ ಸಚಿವಾಲಯವು ಈ ಬಗ್ಗೆ ವಿವರವಾದ ಯೋಜನಾ ವರದಿಯನ್ನು (ಡಿಪಿಆರ್) ತಯಾರಿಸಲು ಸಲಹಾ ಸಂಸ್ಥೆಯನ್ನು ಆಯ್ಕೆ ಮಾಡಲು ಬಿಡ್‌ಗಳನ್ನು ಆಹ್ವಾನಿಸಿತ್ತು. ಇದೀಗ 9 ಸಂಸ್ಥೆಗಳು ಬಿಡ್‌ ಸಲ್ಲಿಸಿದೆ. ಡಿಪಿಆರ್ ತಯಾರಿಸಲು 540 ದಿನಗಳನ್ನು ನೀಡಲಾಗುತ್ತಿದ್ದು, ರಸ್ತೆ ನಿರ್ಮಾಣವು 2028 ರಲ್ಲಿ ಪ್ರಾರಂಭವಾಗುವ ನಿರೀಕ್ಷೆಯಿದೆ.

ಮಂಗಳೂರು-ಬೆಂಗಳೂರು ರಸ್ತೆಯು 335 ಕಿ.ಮೀ ಇರಬಹುದು, ನಾಲ್ಕು ಅಥವಾ ಆರು ಲೇನ್‌ಗಳನ್ನು ಹೊಂದಿರಬಹುದು. ಹಾಸನದ ಮೂಲಕ ರಸ್ತೆ ಹಾದುಹೋಗುತ್ತದೆ. ಪಶ್ಚಿಮ ಘಟ್ಟಗಳ ಹಲವು ಕಡೆ ಬೈಪಾಸ್‌ ರಸ್ತೆ ಹೊಂದಿರುತ್ತದೆ. ಎಕ್ಸ್‌ಪ್ರೆಸ್‌ವೇ ಜಾರಿಯಾದರೆ,  ಬೆಂಗಳೂರು ಮತ್ತು ಮಂಗಳೂರು ನಡುವಿನ ಪ್ರಯಾಣದ ಸಮಯವು ಇಳಿಕೆಯಾಗಲಿದೆ.

ಡಿಪಿಆರ್ ಸಿದ್ಧಪಡಿಸಿದ ಬಳಿಕವಷ್ಟೇ ಮುಂದಿನ ಎಲ್ಲಾ ಅಂಶಗಳು ತಿಳಿಯಲಿದೆ. ಈ ಕಾರಿಡಾರ್‌ ಯೋಜನೆಗೆ ಶಿರಾಡಿ ಘಾಟ್ ಪ್ರದೇಶವು ಮಾತ್ರಾ ಸಮಸ್ಯೆಯಾಗಲಿದೆ.ಅಲ್ಲಿ ಫ್ಲೈಓವರ್‌ಗಳು ಮತ್ತು ಕೆಲವು ಕಡೆ ಸುರಂಗಗಳನ್ನು ನಿರ್ಮಿಸುವ ಮೂಲಕ ಇನ್ನೂ ಎರಡು ಲೇನ್‌ಗಳನ್ನು ಸೇರಿಸಲು ಎನ್‌ಎಚ್‌ಎಐ ಯೋಜಿಸಿದೆ. ಯಾವುದೇ ಕಾರಣಕ್ಕೂ ಪರಿಸರಕ್ಕೆ ಹೆಚ್ಚಿನ ಹಾನಿಯಾಗದಂತೆ ರಸ್ತೆ ಕಾಮಗಾರಿ ನಡೆಸುವ ಬಗ್ಗೆಯೂ ಚಿಂತನೆ ನಡೆದಿದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಮಧ್ಯಪ್ರಾಚ್ಯ ಸಂಘರ್ಷ ಪರಿಣಾಮ – ಗೋಮಯ ಗೊಬ್ಬರದತ್ತ ಭಾರತದ ರೈತರು – ರಾಸಾಯನಿಕ ಗೊಬ್ಬರ ಕೊರತೆ ಭೀತಿ..!
June 19, 2026
10:43 AM
by: ದ ರೂರಲ್ ಮಿರರ್.ಕಾಂ
ಕೇರಳದಲ್ಲಿ ಕೊಬ್ಬರಿ ಬೆಲೆ MSP ಗಿಂತಲೂ ಕಡಿಮೆ – ₹130 ಕನಿಷ್ಠ ಬೆಂಬಲ ಬೆಲೆಗೆ ರೈತರ ಆಗ್ರಹ
June 19, 2026
9:58 AM
by: ದ ರೂರಲ್ ಮಿರರ್.ಕಾಂ
ಎಲ್‌ ನಿನೋ ಈಗ ಮತ್ತಷ್ಟು ನಿಗೂಢ…! ಹವಾಮಾನ ಬದಲಾವಣೆ ಮಳೆ ಮುನ್ಸೂಚನೆಗಳನ್ನೇ ಗೊಂದಲಗೊಳಿಸುತ್ತಿದೆಯೇ..?
June 19, 2026
7:21 AM
by: ದ ರೂರಲ್ ಮಿರರ್.ಕಾಂ
ಪ್ರತಿ ಜಿಲ್ಲೆಯಲ್ಲಿ ಒಂದು ಗೋಆಧಾರಿತ ಉದ್ಯಮ – ಉತ್ತರ ಪ್ರದೇಶದ ಹೊಸ ಮಾದರಿ ದೇಶದ ಗಮನ ಸೆಳೆಯುತ್ತಿದೆ
June 19, 2026
7:01 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror