ಮಂಗಳೂರು-ಬೆಂಗಳೂರು ಸಂಪರ್ಕಿಸಲು ಎಕ್ಸ್ಪ್ರೆಸ್ವೇ (ಹೈ-ಸ್ಪೀಡ್ ಕಾರಿಡಾರ್) ನಿರ್ಮಿಸಲು ಯೋಜನೆ ರೂಪಿಸಲಾಗಿದೆ. ರಸ್ತೆ ಸಾರಿಗೆ ಮತ್ತು ಹೆದ್ದಾರಿಗಳ ಸಚಿವಾಲಯವು ಈ ಬಗ್ಗೆ ವಿವರವಾದ ಯೋಜನಾ ವರದಿಯನ್ನು (ಡಿಪಿಆರ್) ತಯಾರಿಸಲು ಸಲಹಾ ಸಂಸ್ಥೆಯನ್ನು ಆಯ್ಕೆ ಮಾಡಲು ಬಿಡ್ಗಳನ್ನು ಆಹ್ವಾನಿಸಿತ್ತು. ಇದೀಗ 9 ಸಂಸ್ಥೆಗಳು ಬಿಡ್ ಸಲ್ಲಿಸಿದೆ. ಡಿಪಿಆರ್ ತಯಾರಿಸಲು 540 ದಿನಗಳನ್ನು ನೀಡಲಾಗುತ್ತಿದ್ದು, ರಸ್ತೆ ನಿರ್ಮಾಣವು 2028 ರಲ್ಲಿ ಪ್ರಾರಂಭವಾಗುವ ನಿರೀಕ್ಷೆಯಿದೆ.
ಮಂಗಳೂರು-ಬೆಂಗಳೂರು ರಸ್ತೆಯು 335 ಕಿ.ಮೀ ಇರಬಹುದು, ನಾಲ್ಕು ಅಥವಾ ಆರು ಲೇನ್ಗಳನ್ನು ಹೊಂದಿರಬಹುದು. ಹಾಸನದ ಮೂಲಕ ರಸ್ತೆ ಹಾದುಹೋಗುತ್ತದೆ. ಪಶ್ಚಿಮ ಘಟ್ಟಗಳ ಹಲವು ಕಡೆ ಬೈಪಾಸ್ ರಸ್ತೆ ಹೊಂದಿರುತ್ತದೆ. ಎಕ್ಸ್ಪ್ರೆಸ್ವೇ ಜಾರಿಯಾದರೆ, ಬೆಂಗಳೂರು ಮತ್ತು ಮಂಗಳೂರು ನಡುವಿನ ಪ್ರಯಾಣದ ಸಮಯವು ಇಳಿಕೆಯಾಗಲಿದೆ.
ಡಿಪಿಆರ್ ಸಿದ್ಧಪಡಿಸಿದ ಬಳಿಕವಷ್ಟೇ ಮುಂದಿನ ಎಲ್ಲಾ ಅಂಶಗಳು ತಿಳಿಯಲಿದೆ. ಈ ಕಾರಿಡಾರ್ ಯೋಜನೆಗೆ ಶಿರಾಡಿ ಘಾಟ್ ಪ್ರದೇಶವು ಮಾತ್ರಾ ಸಮಸ್ಯೆಯಾಗಲಿದೆ.ಅಲ್ಲಿ ಫ್ಲೈಓವರ್ಗಳು ಮತ್ತು ಕೆಲವು ಕಡೆ ಸುರಂಗಗಳನ್ನು ನಿರ್ಮಿಸುವ ಮೂಲಕ ಇನ್ನೂ ಎರಡು ಲೇನ್ಗಳನ್ನು ಸೇರಿಸಲು ಎನ್ಎಚ್ಎಐ ಯೋಜಿಸಿದೆ. ಯಾವುದೇ ಕಾರಣಕ್ಕೂ ಪರಿಸರಕ್ಕೆ ಹೆಚ್ಚಿನ ಹಾನಿಯಾಗದಂತೆ ರಸ್ತೆ ಕಾಮಗಾರಿ ನಡೆಸುವ ಬಗ್ಗೆಯೂ ಚಿಂತನೆ ನಡೆದಿದೆ.
ಮ್ಯಾನ್ಮಾರ್ನಿಂದ ಅಕ್ರಮ ಅಡಿಕೆ ಸಾಗಾಟ ಮಾಡಿ ₹1,500 ಕೋಟಿ ಹಣ ವರ್ಗಾವಣೆ ನಡೆಸಿದ…
ಮಹಾರಾಷ್ಟ್ರದಲ್ಲಿ ತಡೆಹಿಡಿದಿರುವ 50ಕ್ಕೂ ಹೆಚ್ಚು ಅಡಿಕೆ ಲಾರಿಗಳನ್ನು ಬಿಡುಗಡೆ ಮಾಡುವಂತೆ ಫಡ್ನವೀಸ್ಗೆ ಅಡಿಕೆ…
ಭಾರೀ ಮಳೆ ಹಿನ್ನೆಲೆಯಲ್ಲಿ ಜುಲೈ 8ರಂದು ರಾಜ್ಯದ ಹಲವು ಜಿಲ್ಲೆಗಳ ಶಾಲೆ-ಕಾಲೇಜುಗಳಿಗೆ ರಜೆ…
2026-27ರ ಮುಂಗಾರು ಬೆಳೆ ಸಮೀಕ್ಷೆಗೆ ಚಾಲನೆ; ರೈತರು ಮೊಬೈಲ್ ಆ್ಯಪ್ ಮೂಲಕವೇ ಬೆಳೆ…
ಮಾಣಿ–ಸಂಪಾಜೆ ರಾಷ್ಟ್ರೀಯ ಹೆದ್ದಾರಿ ದುರಸ್ತಿಗೆ ಕೇಂದ್ರದಿಂದ ₹49.22 ಕೋಟಿ ವಿಶೇಷ ಅನುದಾನ ಮಂಜೂರು.…
ಜುಲೈ 7ರಿಂದ 11ರವರೆಗೆ ಪಶ್ಚಿಮಘಟ್ಟ ಪ್ರದೇಶಗಳಲ್ಲಿ ಭಾರೀ ಮಳೆಯ ಸಾಧ್ಯತೆ ಇದೆ. ಭೂಕುಸಿತದ…