ಮಂಗಳೂರು-ಬೆಂಗಳೂರು ಸಂಪರ್ಕಿಸಲು ಎಕ್ಸ್ಪ್ರೆಸ್ವೇ (ಹೈ-ಸ್ಪೀಡ್ ಕಾರಿಡಾರ್) ನಿರ್ಮಿಸಲು ಯೋಜನೆ ರೂಪಿಸಲಾಗಿದೆ. ರಸ್ತೆ ಸಾರಿಗೆ ಮತ್ತು ಹೆದ್ದಾರಿಗಳ ಸಚಿವಾಲಯವು ಈ ಬಗ್ಗೆ ವಿವರವಾದ ಯೋಜನಾ ವರದಿಯನ್ನು (ಡಿಪಿಆರ್) ತಯಾರಿಸಲು ಸಲಹಾ ಸಂಸ್ಥೆಯನ್ನು ಆಯ್ಕೆ ಮಾಡಲು ಬಿಡ್ಗಳನ್ನು ಆಹ್ವಾನಿಸಿತ್ತು. ಇದೀಗ 9 ಸಂಸ್ಥೆಗಳು ಬಿಡ್ ಸಲ್ಲಿಸಿದೆ. ಡಿಪಿಆರ್ ತಯಾರಿಸಲು 540 ದಿನಗಳನ್ನು ನೀಡಲಾಗುತ್ತಿದ್ದು, ರಸ್ತೆ ನಿರ್ಮಾಣವು 2028 ರಲ್ಲಿ ಪ್ರಾರಂಭವಾಗುವ ನಿರೀಕ್ಷೆಯಿದೆ.
ಮಂಗಳೂರು-ಬೆಂಗಳೂರು ರಸ್ತೆಯು 335 ಕಿ.ಮೀ ಇರಬಹುದು, ನಾಲ್ಕು ಅಥವಾ ಆರು ಲೇನ್ಗಳನ್ನು ಹೊಂದಿರಬಹುದು. ಹಾಸನದ ಮೂಲಕ ರಸ್ತೆ ಹಾದುಹೋಗುತ್ತದೆ. ಪಶ್ಚಿಮ ಘಟ್ಟಗಳ ಹಲವು ಕಡೆ ಬೈಪಾಸ್ ರಸ್ತೆ ಹೊಂದಿರುತ್ತದೆ. ಎಕ್ಸ್ಪ್ರೆಸ್ವೇ ಜಾರಿಯಾದರೆ, ಬೆಂಗಳೂರು ಮತ್ತು ಮಂಗಳೂರು ನಡುವಿನ ಪ್ರಯಾಣದ ಸಮಯವು ಇಳಿಕೆಯಾಗಲಿದೆ.
ಡಿಪಿಆರ್ ಸಿದ್ಧಪಡಿಸಿದ ಬಳಿಕವಷ್ಟೇ ಮುಂದಿನ ಎಲ್ಲಾ ಅಂಶಗಳು ತಿಳಿಯಲಿದೆ. ಈ ಕಾರಿಡಾರ್ ಯೋಜನೆಗೆ ಶಿರಾಡಿ ಘಾಟ್ ಪ್ರದೇಶವು ಮಾತ್ರಾ ಸಮಸ್ಯೆಯಾಗಲಿದೆ.ಅಲ್ಲಿ ಫ್ಲೈಓವರ್ಗಳು ಮತ್ತು ಕೆಲವು ಕಡೆ ಸುರಂಗಗಳನ್ನು ನಿರ್ಮಿಸುವ ಮೂಲಕ ಇನ್ನೂ ಎರಡು ಲೇನ್ಗಳನ್ನು ಸೇರಿಸಲು ಎನ್ಎಚ್ಎಐ ಯೋಜಿಸಿದೆ. ಯಾವುದೇ ಕಾರಣಕ್ಕೂ ಪರಿಸರಕ್ಕೆ ಹೆಚ್ಚಿನ ಹಾನಿಯಾಗದಂತೆ ರಸ್ತೆ ಕಾಮಗಾರಿ ನಡೆಸುವ ಬಗ್ಗೆಯೂ ಚಿಂತನೆ ನಡೆದಿದೆ.
ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಶೇಕಡಾ 66 ರಷ್ಟು ಮಳೆ ಕೊರತೆಯಿಂದ ಕೇವಲ ಶೇ.…
ಕರಾವಳಿ ಮತ್ತು ಮಲೆನಾಡಿನಲ್ಲಿ ಮುಂದಿನ 10 ದಿನಗಳವರೆಗೆ ಸಾಮಾನ್ಯ ಮಳೆ ಮುಂದುವರಿಯುವ ನಿರೀಕ್ಷೆಯಿದ್ದು,…
ಉತ್ತರ ಪ್ರದೇಶದಲ್ಲಿ 200 ಹಸುಗಳನ್ನು ಆಧರಿಸಿದ ಸಮಗ್ರ ಗೋ ಆರ್ಥಿಕತೆ ಮಾದರಿಯಲ್ಲಿ ಗೋಮಯದಿಂದ…
ರಬ್ಬರ್ ತೋಟಗಳು ಹಸಿರಾಗಿದ್ದರೂ ಅವು ನೈಸರ್ಗಿಕ ಮಳೆಕಾಡಿನ ಜೀವವೈವಿಧ್ಯವನ್ನು ಉಳಿಸಿಕೊಳ್ಳಲು ಸಾಧ್ಯವಿಲ್ಲ ಎಂದು…
ಭಾರತದ ಅಡುಗೆ ಎಣ್ಣೆ ಆಮದು ಎಂಟು ತಿಂಗಳಲ್ಲಿ ಶೇ.7ರಷ್ಟು ಏರಿಕೆಯಾಗಿದೆ. ಜೂನ್ನಲ್ಲಿ ಆಮದು…
ಕೇರಳದಲ್ಲಿ ಉತ್ಪಾದನೆಯಾಗುವ ಬಹುತೇಕ ಹಲಸು ಬಳಕೆಯಾಗದೆ ವ್ಯರ್ಥವಾಗುತ್ತಿದ್ದು, ವರ್ಷಕ್ಕೆ ಸುಮಾರು ₹1,200 ಕೋಟಿ…