ಮಂಗಳೂರು-ಬೆಂಗಳೂರು ಸಂಪರ್ಕಿಸಲು ಎಕ್ಸ್ಪ್ರೆಸ್ವೇ (ಹೈ-ಸ್ಪೀಡ್ ಕಾರಿಡಾರ್) ನಿರ್ಮಿಸಲು ಯೋಜನೆ ರೂಪಿಸಲಾಗಿದೆ. ರಸ್ತೆ ಸಾರಿಗೆ ಮತ್ತು ಹೆದ್ದಾರಿಗಳ ಸಚಿವಾಲಯವು ಈ ಬಗ್ಗೆ ವಿವರವಾದ ಯೋಜನಾ ವರದಿಯನ್ನು (ಡಿಪಿಆರ್) ತಯಾರಿಸಲು ಸಲಹಾ ಸಂಸ್ಥೆಯನ್ನು ಆಯ್ಕೆ ಮಾಡಲು ಬಿಡ್ಗಳನ್ನು ಆಹ್ವಾನಿಸಿತ್ತು. ಇದೀಗ 9 ಸಂಸ್ಥೆಗಳು ಬಿಡ್ ಸಲ್ಲಿಸಿದೆ. ಡಿಪಿಆರ್ ತಯಾರಿಸಲು 540 ದಿನಗಳನ್ನು ನೀಡಲಾಗುತ್ತಿದ್ದು, ರಸ್ತೆ ನಿರ್ಮಾಣವು 2028 ರಲ್ಲಿ ಪ್ರಾರಂಭವಾಗುವ ನಿರೀಕ್ಷೆಯಿದೆ.
ಮಂಗಳೂರು-ಬೆಂಗಳೂರು ರಸ್ತೆಯು 335 ಕಿ.ಮೀ ಇರಬಹುದು, ನಾಲ್ಕು ಅಥವಾ ಆರು ಲೇನ್ಗಳನ್ನು ಹೊಂದಿರಬಹುದು. ಹಾಸನದ ಮೂಲಕ ರಸ್ತೆ ಹಾದುಹೋಗುತ್ತದೆ. ಪಶ್ಚಿಮ ಘಟ್ಟಗಳ ಹಲವು ಕಡೆ ಬೈಪಾಸ್ ರಸ್ತೆ ಹೊಂದಿರುತ್ತದೆ. ಎಕ್ಸ್ಪ್ರೆಸ್ವೇ ಜಾರಿಯಾದರೆ, ಬೆಂಗಳೂರು ಮತ್ತು ಮಂಗಳೂರು ನಡುವಿನ ಪ್ರಯಾಣದ ಸಮಯವು ಇಳಿಕೆಯಾಗಲಿದೆ.
ಡಿಪಿಆರ್ ಸಿದ್ಧಪಡಿಸಿದ ಬಳಿಕವಷ್ಟೇ ಮುಂದಿನ ಎಲ್ಲಾ ಅಂಶಗಳು ತಿಳಿಯಲಿದೆ. ಈ ಕಾರಿಡಾರ್ ಯೋಜನೆಗೆ ಶಿರಾಡಿ ಘಾಟ್ ಪ್ರದೇಶವು ಮಾತ್ರಾ ಸಮಸ್ಯೆಯಾಗಲಿದೆ.ಅಲ್ಲಿ ಫ್ಲೈಓವರ್ಗಳು ಮತ್ತು ಕೆಲವು ಕಡೆ ಸುರಂಗಗಳನ್ನು ನಿರ್ಮಿಸುವ ಮೂಲಕ ಇನ್ನೂ ಎರಡು ಲೇನ್ಗಳನ್ನು ಸೇರಿಸಲು ಎನ್ಎಚ್ಎಐ ಯೋಜಿಸಿದೆ. ಯಾವುದೇ ಕಾರಣಕ್ಕೂ ಪರಿಸರಕ್ಕೆ ಹೆಚ್ಚಿನ ಹಾನಿಯಾಗದಂತೆ ರಸ್ತೆ ಕಾಮಗಾರಿ ನಡೆಸುವ ಬಗ್ಗೆಯೂ ಚಿಂತನೆ ನಡೆದಿದೆ.
ಗ್ರಾಮ ಮತ್ತು ನಗರ ಜೀವನ ಪರಸ್ಪರ ವಿರುದ್ಧವಲ್ಲ, ಪೂರಕ ಶಕ್ತಿಗಳು. ಸಮತೋಲನವೇ ಸಮೃದ್ಧ…
ದೇಶದಲ್ಲಿ ಹವಾಮಾನ ತೀವ್ರ ಬದಲಾವಣೆ ಕಂಡುಬರುತ್ತಿದ್ದು, 13 ರಾಜ್ಯಗಳಲ್ಲಿ ಮಳೆ ಮತ್ತು ಗಾಳಿ…
ಅಂಜನಾದ್ರಿ ಬೆಟ್ಟ ಏರಲು ಮಧ್ಯಾಹ್ನ 11ರಿಂದ ಸಂಜೆ 4ರವರೆಗೆ ನಿರ್ಬಂಧ ವಿಧಿಸಲಾಗಿದೆ. ಬಿಸಿಲಿನ…
ರಾಜ್ಯದಲ್ಲಿ ಉಷ್ಣಾಂಶ ಏರಿಕೆ ಮುಂದುವರಿದಿದ್ದು, ಕಲಬುರಗಿಯಲ್ಲಿ 43.2°C ದಾಖಲಾಗಿದೆ. ಮುಂದಿನ ದಿನಗಳಲ್ಲಿ ಕರಾವಳಿಯಲ್ಲಿ…
ಏಪ್ರಿಲ್ 18ರಿಂದ ರಾಜ್ಯದಲ್ಲಿ ಹವಾಮಾನ ಬದಲಾವಣೆ ಕಂಡುಬರುತ್ತಿದ್ದು, ಹಂತ ಹಂತವಾಗಿ ಮಳೆಯ ಚಟುವಟಿಕೆ…
ಒಡಿಶಾ ಕರಾವಳಿಯಲ್ಲಿ ಅಕ್ರಮವಾಗಿ ಸಾಗಿಸಲಾಗುತ್ತಿದ್ದ 700 ಕ್ಕೂ ಹೆಚ್ಚು ಗೋಣಿ ಚೀಲಗಳ ಅಡಿಕೆ…