ಮಂಗಳೂರು-ಬೆಂಗಳೂರು ಸಂಪರ್ಕಿಸಲು ಎಕ್ಸ್ಪ್ರೆಸ್ವೇ (ಹೈ-ಸ್ಪೀಡ್ ಕಾರಿಡಾರ್) ನಿರ್ಮಿಸಲು ಯೋಜನೆ ರೂಪಿಸಲಾಗಿದೆ. ರಸ್ತೆ ಸಾರಿಗೆ ಮತ್ತು ಹೆದ್ದಾರಿಗಳ ಸಚಿವಾಲಯವು ಈ ಬಗ್ಗೆ ವಿವರವಾದ ಯೋಜನಾ ವರದಿಯನ್ನು (ಡಿಪಿಆರ್) ತಯಾರಿಸಲು ಸಲಹಾ ಸಂಸ್ಥೆಯನ್ನು ಆಯ್ಕೆ ಮಾಡಲು ಬಿಡ್ಗಳನ್ನು ಆಹ್ವಾನಿಸಿತ್ತು. ಇದೀಗ 9 ಸಂಸ್ಥೆಗಳು ಬಿಡ್ ಸಲ್ಲಿಸಿದೆ. ಡಿಪಿಆರ್ ತಯಾರಿಸಲು 540 ದಿನಗಳನ್ನು ನೀಡಲಾಗುತ್ತಿದ್ದು, ರಸ್ತೆ ನಿರ್ಮಾಣವು 2028 ರಲ್ಲಿ ಪ್ರಾರಂಭವಾಗುವ ನಿರೀಕ್ಷೆಯಿದೆ.
ಮಂಗಳೂರು-ಬೆಂಗಳೂರು ರಸ್ತೆಯು 335 ಕಿ.ಮೀ ಇರಬಹುದು, ನಾಲ್ಕು ಅಥವಾ ಆರು ಲೇನ್ಗಳನ್ನು ಹೊಂದಿರಬಹುದು. ಹಾಸನದ ಮೂಲಕ ರಸ್ತೆ ಹಾದುಹೋಗುತ್ತದೆ. ಪಶ್ಚಿಮ ಘಟ್ಟಗಳ ಹಲವು ಕಡೆ ಬೈಪಾಸ್ ರಸ್ತೆ ಹೊಂದಿರುತ್ತದೆ. ಎಕ್ಸ್ಪ್ರೆಸ್ವೇ ಜಾರಿಯಾದರೆ, ಬೆಂಗಳೂರು ಮತ್ತು ಮಂಗಳೂರು ನಡುವಿನ ಪ್ರಯಾಣದ ಸಮಯವು ಇಳಿಕೆಯಾಗಲಿದೆ.
ಡಿಪಿಆರ್ ಸಿದ್ಧಪಡಿಸಿದ ಬಳಿಕವಷ್ಟೇ ಮುಂದಿನ ಎಲ್ಲಾ ಅಂಶಗಳು ತಿಳಿಯಲಿದೆ. ಈ ಕಾರಿಡಾರ್ ಯೋಜನೆಗೆ ಶಿರಾಡಿ ಘಾಟ್ ಪ್ರದೇಶವು ಮಾತ್ರಾ ಸಮಸ್ಯೆಯಾಗಲಿದೆ.ಅಲ್ಲಿ ಫ್ಲೈಓವರ್ಗಳು ಮತ್ತು ಕೆಲವು ಕಡೆ ಸುರಂಗಗಳನ್ನು ನಿರ್ಮಿಸುವ ಮೂಲಕ ಇನ್ನೂ ಎರಡು ಲೇನ್ಗಳನ್ನು ಸೇರಿಸಲು ಎನ್ಎಚ್ಎಐ ಯೋಜಿಸಿದೆ. ಯಾವುದೇ ಕಾರಣಕ್ಕೂ ಪರಿಸರಕ್ಕೆ ಹೆಚ್ಚಿನ ಹಾನಿಯಾಗದಂತೆ ರಸ್ತೆ ಕಾಮಗಾರಿ ನಡೆಸುವ ಬಗ್ಗೆಯೂ ಚಿಂತನೆ ನಡೆದಿದೆ.
2026ರ ಗೌರಿ-ಗಣೇಶ ಹಬ್ಬವನ್ನು ಪರಿಸರ ಸ್ನೇಹಿಯಾಗಿ ಆಚರಿಸುವಂತೆ ಮಂಗಳೂರು ಮಹಾನಗರಪಾಲಿಕೆ ಸೂಚಿಸಿದ್ದು, POP…
ಕರ್ನಾಟಕದಲ್ಲಿ ಮಳೆಯ ಸಾಧ್ಯತೆ ಒಟ್ಟಾರೆ ಇಳಿಮುಖವಾಗುತ್ತಿದ್ದು, ಕರಾವಳಿಯಲ್ಲಿ ಸೆ.11ರಿಂದ ಮಳೆ ಕಡಿಮೆಯಾಗುವ ಲಕ್ಷಣಗಳಿವೆ.…
2025-26ರಲ್ಲಿ ಕ್ಯಾಂಪ್ಕೋದ ಅಡಿಕೆ ಖರೀದಿ ಪ್ರಮಾಣ ಹಿಂದಿನ ವರ್ಷಕ್ಕಿಂತ ಕಡಿಮೆಯಾಗಿದ್ದರೂ, ಬೆಲೆ ಏರಿಕೆಯಿಂದ…
ಅಸ್ಸಾಂನ ಗುಹಾಟಿ ಸಮೀಪದ 10 ಅರಣ್ಯ ಅಂಚಿನ ಗ್ರಾಮಗಳಲ್ಲಿ ಅಡಿಕೆ, ತೆಂಗು ಮತ್ತು…
ದೇಶದ ಪ್ರಸಕ್ತ ಮುಂಗಾರು ಬೆಳೆಗಳ ಬಿತ್ತನೆ ಪ್ರದೇಶ 1,086 ಲಕ್ಷ ಹೆಕ್ಟೇರ್ ದಾಟಿದ್ದರೂ…
ರಾಜ್ಯದಲ್ಲಿ ಜಾನುವಾರುಗಳಿಗೆ ಪೌಷ್ಟಿಕ ಪೂರಕ ಮೇವು ಒದಗಿಸಲು ₹3.78 ಕೋಟಿ ವೆಚ್ಚದಲ್ಲಿ 12…