ವಯನಾಡ್‌ ದುರಂತ | 8 ಕಿಮೀ ಸಾಗಿದ ಜಲರಾಶಿ | ಉಪಗ್ರಹ ಚಿತ್ರವನ್ನು ಬಿಡುಗಡೆಗೊಳಿಸಿದ ಇಸ್ರೋ |

August 1, 2024
8:19 PM
ವಯನಾಡ್‌ ದುರಂತ ಪ್ರದೇಶದ ಉಪಗ್ರಹ ಚಿತ್ರವನ್ನು ಇಸ್ರೋ ಬಿಡುಗಡೆಗೊಳಿಸಿದೆ. ಈ ಪ್ರಕಾರ ಭೂಕುಸಿತದ ಪ್ರಭಾವವು ಸುಮಾರು 8 ಕಿಮೀ ಸಾಗಿದೆ.

ವಯನಾಡ್ ಭೂಕುಸಿತದ ಮೊದಲು ಮತ್ತು ನಂತರದ ಚಿತ್ರಗಳನ್ನು ಇಸ್ರೋ ಬಿಡುಗಡೆ ಮಾಡಿದೆ.ಉಪಗ್ರಹ ಚಿತ್ರಗಳ ಪ್ರಕಾರ ಭೂಕುಸಿತದ ಪ್ರಭಾವ ಸುಮಾರು 8 ಕಿಮೀ ವ್ಯಾಪ್ತಿಯಲ್ಲಿ ಸಾಗಿದೆ, ಸುಮಾರು  86,000 ಚ.ಮೀ ಹಾನಿ ವ್ಯಾಪಿಸಿದೆ. ಹೀಗಾಗಿ ಇಷ್ಟೂ ಪ್ರದೇಶದಲ್ಲಿ ಅಪಾರ ಪ್ರಮಾಣದಲ್ಲಿ ಹಾನಿಯಾಗಿದೆ.……….ಮುಂದೆ ಓದಿ……..

ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ಇಸ್ರೋ) ವಯನಾಡ್‌ ಭೂಕುಸಿದ ಉಪಗ್ರಹ ಚಿತ್ರವನ್ನು ಬಿಡುಗಡೆಗೊಳಿಸಿ ಹಾನಿಯ ವ್ಯಾಪ್ತಿಯನ್ನು ತಿಳಿಸಿದೆ.ಭಾರೀ ದೊಡ್ಡ ಪ್ರಮಾಣದ ಕುಸಿತ ಇಲ್ಲಿ ಸ್ಪಷ್ಟವಾಗಿದೆ. ಮಾತ್ರವಲ್ಲ ಮೋಡವು ಅತೀ ಕೆಳಭಾಗದಲ್ಲಿ ಇರುವುದು ಕೂಡಾ ಗೋಚರಿಸಿದೆ. ಭೂಕುಸಿತದಲ್ಲಿ 86,000 ಚದರ ಮೀಟರ್‌ಗಳಷ್ಟು ಭೂಮಿಯೇ ಸ್ಥಳಾಂತರವಾಗಿದೆ. ಭೂಕುಸಿತದ ಎರಡು ಚಿತ್ರಗಳನ್ನು ಇಸ್ರೋ ಬಿಡುಗಡೆ ಮಾಡಿದೆ.……….ಮುಂದೆ ಓದಿ……..

ಇಸ್ರೋದ ರಾಷ್ಟ್ರೀಯ ದೂರಸಂವೇದಿ ಕೇಂದ್ರವು (NRSC)  ಎರಡು ಭೂಕುಸಿತ ಪರಿಣಾಮದ ಬಗ್ಗೆ ಗಮನಿಸಲು ಈ ಚಿತ್ರವನ್ನು ಹತ್ತಿರದಿಂದ ಸೆರೆಹಿಡಿದಿದೆ.  ಜುಲೈ 31 ರಂದು ತೆಗೆದ ಅತಿ ಹೆಚ್ಚು ರೆಸಲ್ಯೂಶನ್ ಉಪಗ್ರಹ ಚಿತ್ರಗಳು ಭೂಕುಸಿತದ ಚಿತ್ರಣವು ಸ್ಪಷ್ಟವಾಗಿದೆ. ಎನ್‌ಆರ್‌ಎಸ್‌ಸಿ ಪ್ರಕಾರ, ಚೂರಲ್‌ಮಲಾ ಮತ್ತು ಅದರ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಭಾರಿ ಮಳೆಯಿಂದ ಈ ಹಾನಿಯಾಗಿದೆ. ಮೋಡವು ಬೆಟ್ಟದ ಹತ್ತಿರದಲ್ಲಿಯೇ ಇರುವುದು ಕಂಡುಬಂದಿದೆ. ಹೀಗಾಗಿ ಭಾರೀ ಮಳೆ ಒಮ್ಮೆಲೇ ಸುರಿದಿದೆ. ಇದು ಅವಘಡಕ್ಕೆ ಕಾರಣವಾಗಿದೆ.

ISRO releases images before and after Wayanad landslides | Satellite images show debris travelled 8km, damage extent 86,000-sqm; earlier landslide at the same spot seen |

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಮಕ್ಕಳಿಗೆ ಸೋಶಿಯಲ್ ಮೀಡಿಯಾ ನಿಷೇಧ..
March 7, 2026
7:29 AM
by: ಮಿರರ್‌ ಡೆಸ್ಕ್
ಕುಕ್ಕೆ–ಕೊಲ್ಲೂರು ದೇವಾಲಯಗಳಿಗೆ ಅಭಿವೃದ್ಧಿ ಪ್ರಾಧಿಕಾರ : ಮುಜರಾಯಿ ಇಲಾಖೆಗೆ ಬಜೆಟ್ ಬಲ
March 7, 2026
7:23 AM
by: ಮಿರರ್‌ ಡೆಸ್ಕ್
ರೈತರಿಗೆ ಬಜೆಟ್‌ನಲ್ಲಿ ಸಿಕ್ಕ 15 ಘೋಷಣೆಗಳು | ಕೃಷಿ, ಅಡಿಕೆ, ಮೀನುಗಾರಿಕೆ ಕ್ಷೇತ್ರಕ್ಕೆ ವಿಶೇಷ ಯೋಜನೆಗಳು
March 6, 2026
8:22 PM
by: ದ ರೂರಲ್ ಮಿರರ್.ಕಾಂ
ರಾಜ್ಯ ಬಜೆಟ್‌ 2026-27: ಕೃಷಿ, ತೋಟಗಾರಿಕೆ, ಮೀನುಗಾರಿಕೆ ಕ್ಷೇತ್ರಕ್ಕೆ ಹೊಸ ಯೋಜನೆಗಳ ಘೋಷಣೆ
March 6, 2026
8:08 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror