ವಯನಾಡ್‌ ದುರಂತ | 8 ಕಿಮೀ ಸಾಗಿದ ಜಲರಾಶಿ | ಉಪಗ್ರಹ ಚಿತ್ರವನ್ನು ಬಿಡುಗಡೆಗೊಳಿಸಿದ ಇಸ್ರೋ |

August 1, 2024
8:19 PM
ವಯನಾಡ್‌ ದುರಂತ ಪ್ರದೇಶದ ಉಪಗ್ರಹ ಚಿತ್ರವನ್ನು ಇಸ್ರೋ ಬಿಡುಗಡೆಗೊಳಿಸಿದೆ. ಈ ಪ್ರಕಾರ ಭೂಕುಸಿತದ ಪ್ರಭಾವವು ಸುಮಾರು 8 ಕಿಮೀ ಸಾಗಿದೆ.

ವಯನಾಡ್ ಭೂಕುಸಿತದ ಮೊದಲು ಮತ್ತು ನಂತರದ ಚಿತ್ರಗಳನ್ನು ಇಸ್ರೋ ಬಿಡುಗಡೆ ಮಾಡಿದೆ.ಉಪಗ್ರಹ ಚಿತ್ರಗಳ ಪ್ರಕಾರ ಭೂಕುಸಿತದ ಪ್ರಭಾವ ಸುಮಾರು 8 ಕಿಮೀ ವ್ಯಾಪ್ತಿಯಲ್ಲಿ ಸಾಗಿದೆ, ಸುಮಾರು  86,000 ಚ.ಮೀ ಹಾನಿ ವ್ಯಾಪಿಸಿದೆ. ಹೀಗಾಗಿ ಇಷ್ಟೂ ಪ್ರದೇಶದಲ್ಲಿ ಅಪಾರ ಪ್ರಮಾಣದಲ್ಲಿ ಹಾನಿಯಾಗಿದೆ.……….ಮುಂದೆ ಓದಿ……..

Advertisement
Advertisement

ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ಇಸ್ರೋ) ವಯನಾಡ್‌ ಭೂಕುಸಿದ ಉಪಗ್ರಹ ಚಿತ್ರವನ್ನು ಬಿಡುಗಡೆಗೊಳಿಸಿ ಹಾನಿಯ ವ್ಯಾಪ್ತಿಯನ್ನು ತಿಳಿಸಿದೆ.ಭಾರೀ ದೊಡ್ಡ ಪ್ರಮಾಣದ ಕುಸಿತ ಇಲ್ಲಿ ಸ್ಪಷ್ಟವಾಗಿದೆ. ಮಾತ್ರವಲ್ಲ ಮೋಡವು ಅತೀ ಕೆಳಭಾಗದಲ್ಲಿ ಇರುವುದು ಕೂಡಾ ಗೋಚರಿಸಿದೆ. ಭೂಕುಸಿತದಲ್ಲಿ 86,000 ಚದರ ಮೀಟರ್‌ಗಳಷ್ಟು ಭೂಮಿಯೇ ಸ್ಥಳಾಂತರವಾಗಿದೆ. ಭೂಕುಸಿತದ ಎರಡು ಚಿತ್ರಗಳನ್ನು ಇಸ್ರೋ ಬಿಡುಗಡೆ ಮಾಡಿದೆ.……….ಮುಂದೆ ಓದಿ……..

ಇಸ್ರೋದ ರಾಷ್ಟ್ರೀಯ ದೂರಸಂವೇದಿ ಕೇಂದ್ರವು (NRSC)  ಎರಡು ಭೂಕುಸಿತ ಪರಿಣಾಮದ ಬಗ್ಗೆ ಗಮನಿಸಲು ಈ ಚಿತ್ರವನ್ನು ಹತ್ತಿರದಿಂದ ಸೆರೆಹಿಡಿದಿದೆ.  ಜುಲೈ 31 ರಂದು ತೆಗೆದ ಅತಿ ಹೆಚ್ಚು ರೆಸಲ್ಯೂಶನ್ ಉಪಗ್ರಹ ಚಿತ್ರಗಳು ಭೂಕುಸಿತದ ಚಿತ್ರಣವು ಸ್ಪಷ್ಟವಾಗಿದೆ. ಎನ್‌ಆರ್‌ಎಸ್‌ಸಿ ಪ್ರಕಾರ, ಚೂರಲ್‌ಮಲಾ ಮತ್ತು ಅದರ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಭಾರಿ ಮಳೆಯಿಂದ ಈ ಹಾನಿಯಾಗಿದೆ. ಮೋಡವು ಬೆಟ್ಟದ ಹತ್ತಿರದಲ್ಲಿಯೇ ಇರುವುದು ಕಂಡುಬಂದಿದೆ. ಹೀಗಾಗಿ ಭಾರೀ ಮಳೆ ಒಮ್ಮೆಲೇ ಸುರಿದಿದೆ. ಇದು ಅವಘಡಕ್ಕೆ ಕಾರಣವಾಗಿದೆ.

Advertisement

ISRO releases images before and after Wayanad landslides | Satellite images show debris travelled 8km, damage extent 86,000-sqm; earlier landslide at the same spot seen |

Advertisement

Advertisement

Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಕೃಷಿ ಉತ್ಪನ್ನಗಳ ಮೌಲವರ್ಧನೆಗೆ ಪ್ರೋತ್ಸಾಹ | ಕೃಷಿ ಉದ್ಯಮಿಗಳಾಗುವಂತೆ ಉತ್ತೇಜನ
July 26, 2025
10:25 PM
by: The Rural Mirror ಸುದ್ದಿಜಾಲ
ದಾವಣಗೆರೆ ಜಿಲ್ಲೆಗೆ ಮುಂದಿನ 2050 ಮೆಟ್ರಿಕ್ ಟನ್ ಯೂರಿಯಾ ಗೊಬ್ಬರ ಪೂರೈಕೆಗೆ ಸಿದ್ಧತೆ
July 26, 2025
10:13 PM
by: The Rural Mirror ಸುದ್ದಿಜಾಲ
ಬಳ್ಳಾರಿಯಲ್ಲಿ ತಾಳೆ ಬೆಳೆ ಕುರಿತ ತರಬೇತಿ ಕಾರ್ಯಕ್ರಮ
July 26, 2025
10:05 PM
by: The Rural Mirror ಸುದ್ದಿಜಾಲ
ಹಾವೇರಿ ಜಿಲ್ಲೆಯಲ್ಲಿ ಹೆಚ್ಚುವರಿ ಯೂರಿಯಾ ರಸಗೊಬ್ಬರ ಪೂರೈಸುವಂತೆ  ಬೇಡಿಕೆ
July 26, 2025
9:12 PM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror

Join Our Group