Advertisement
MIRROR FOCUS

ಭಾರೀ ಬಿಸಿ ಹೊಡೆತ..! ಜಗತ್ತಿನ 1 ಬಿಲಿಯನ್ ಜನರ ಬದುಕಿಗೆ ಬಿಸಿ ಹೊಡೆತ

Share

ಜಗತ್ತಿನಾದ್ಯಂತ ಹೆಚ್ಚುತ್ತಿರುವ ಉಷ್ಣತೆ ಈಗ ಕೇವಲ ಹವಾಮಾನ ಬದಲಾವಣೆಯ ವಿಷಯವಲ್ಲ, ಅದು ಕೃಷಿ ಮತ್ತು ಜನರ ಜೀವನೋಪಾಯಕ್ಕೆ ದೊಡ್ಡ ಬೆದರಿಕೆಯಾಗುತ್ತಿದೆ. United Nations Food and Agriculture Organization (FAO) ಮತ್ತು World Meteorological Organization (WMO) ಬಿಡುಗಡೆ ಮಾಡಿದ “ತೀವ್ರ ಶಾಖ ಮತ್ತು ಕೃಷಿ” ವರದಿ ಈ ಬಗ್ಗೆ ಗಂಭೀರ ಎಚ್ಚರಿಕೆ ನೀಡಿದೆ.

ವರದಿಯ ಪ್ರಕಾರ, ಕಳೆದ 50 ವರ್ಷಗಳಲ್ಲಿ ತೀವ್ರ ಶಾಖದ ಘಟನೆಗಳು ವೇಗವಾಗಿ ಹೆಚ್ಚುತ್ತಿದ್ದು, ಮುಂದಿನ ದಿನಗಳಲ್ಲಿ ಇದರ ಪರಿಣಾಮ ಇನ್ನಷ್ಟು ಗಂಭೀರವಾಗಲಿದೆ. ಈ ಪರಿಸ್ಥಿತಿ ಸುಮಾರು 1 ಬಿಲಿಯನ್ ಜನರ ಜೀವನೋಪಾಯಕ್ಕೆ ಅಪಾಯವನ್ನುಂಟುಮಾಡುವ ಸಾಧ್ಯತೆ ಇದೆ.

 ಬೆಳೆಗಳಿಗೆ ಭಾರೀ ಹೊಡೆತ :  ತಾಪಮಾನವು 30 ಡಿಗ್ರಿ ಸೆಲ್ಸಿಯಸ್‌ಗಿಂತ ಹೆಚ್ಚಾದಾಗ ಹೆಚ್ಚಿನ ಬೆಳೆಗಳ ಇಳುವರಿ ಕಡಿಮೆಯಾಗಲು ಪ್ರಾರಂಭವಾಗುತ್ತದೆ. ವಿಶೇಷವಾಗಿ ಆಲೂಗಡ್ಡೆ ಮತ್ತು ಬಾರ್ಲಿ ಬೆಳೆಗಳು ಇನ್ನೂ ಕಡಿಮೆ ತಾಪಮಾನದಲ್ಲಿಯೇ ಪರಿಣಾಮಕ್ಕೆ ಒಳಗಾಗುತ್ತವೆ. ಇದರಿಂದ ಆಹಾರ ಭದ್ರತೆಗೂ ದೊಡ್ಡ ಹೊಡೆತ ಬೀಳುವ ಸಾಧ್ಯತೆ ಇದೆ.

ಜಾನುವಾರು ಮತ್ತು ಮೀನುಗಾರಿಕೆಗೆ ಸಂಕಷ್ಟ :  ತಾಪಮಾನವು 25 ಡಿಗ್ರಿ ಸೆಲ್ಸಿಯಸ್‌ಗಿಂತ ಹೆಚ್ಚಾದಾಗ ಬಹುತೇಕ ಜಾನುವಾರುಗಳು ಒತ್ತಡ ಅನುಭವಿಸುತ್ತವೆ. ಕೋಳಿಗಳು ಮತ್ತು ಹಂದಿಗಳು ಹೆಚ್ಚು ಅಪಾಯಕ್ಕೆ ಒಳಗಾಗುತ್ತವೆ, ಏಕೆಂದರೆ ಅವು ಬೆವರು ಬಿಡುವುದಿಲ್ಲ.

ಮೀನುಗಾರಿಕೆಯಲ್ಲಿ ಪರಿಸ್ಥಿತಿ ಇನ್ನೂ ಗಂಭೀರವಾಗಿದೆ. ನೀರಿನ ತಾಪಮಾನ ಹೆಚ್ಚಾದಂತೆ ಆಮ್ಲಜನಕ ಪ್ರಮಾಣ ಕಡಿಮೆಯಾಗುತ್ತದೆ. ಇದರಿಂದ ಮೀನುಗಳ ಸಾವಿನ ಪ್ರಮಾಣವೂ ಹೆಚ್ಚುತ್ತಿದೆ. 2025ರ ವರದಿ ಪ್ರಕಾರ, ವಿಶ್ವದ 90% ಸಾಗರಗಳು ಕನಿಷ್ಠ ಒಂದು ಬಾರಿ ಶಾಖದ ಅಲೆಯನ್ನು ಅನುಭವಿಸಿವೆ.

ಕಾರ್ಮಿಕರ ಮೇಲೆ ತೀವ್ರ ಪರಿಣಾಮ :  ದಕ್ಷಿಣ ಏಷ್ಯಾ ಸೇರಿದಂತೆ ಹಲವಾರು ಪ್ರದೇಶಗಳಲ್ಲಿ ವರ್ಷಕ್ಕೆ 250 ದಿನಗಳವರೆಗೆ ಅತಿಯಾದ ಬಿಸಿಲಿನ ದಿನಗಳು ಕಂಡುಬರುತ್ತಿವೆ. ಇದರಿಂದ ಕೃಷಿ ಕಾರ್ಮಿಕರ ಕೆಲಸದ ಸಾಮರ್ಥ್ಯ ಕುಗ್ಗುತ್ತಿದ್ದು, ದೈನಂದಿನ ಆದಾಯಕ್ಕೂ ಹೊಡೆತ ಬೀಳುತ್ತಿದೆ.

ಹೆಚ್ಚುತ್ತಿರುವ ಅಪಾಯಗಳು : ತೀವ್ರ ಶಾಖದಿಂದಾಗಿ ನೀರಿನ ಕೊರತೆ, ಬರ ಪರಿಸ್ಥಿತಿ, ಕಾಡು ಬೆಂಕಿ, ಕೀಟಗಳು ಮತ್ತು ರೋಗಗಳ ಹೆಚ್ಚಳ ಇವೆಲ್ಲವೂ ಕೃಷಿಯನ್ನು ಮತ್ತಷ್ಟು ಸಂಕಷ್ಟಕ್ಕೆ ತಳ್ಳುತ್ತಿವೆ.

ತಜ್ಞರ ಎಚ್ಚರಿಕೆ : ಈ ಸಮಸ್ಯೆ ಕೇವಲ ಹವಾಮಾನ ಬದಲಾವಣೆಯಲ್ಲ, ಕೃಷಿ ವ್ಯವಸ್ಥೆಯ ದುರ್ಬಲತೆಯನ್ನು ಹೆಚ್ಚಿಸುವುದಾಗಿದೆ ಎಂದು ತಜ್ಞರು ಹೇಳಿದ್ದಾರೆ. ಮುಂಚಿತ ಎಚ್ಚರಿಕೆ ವ್ಯವಸ್ಥೆಗಳು ಮತ್ತು ಹವಾಮಾನ ಸೇವೆಗಳ ಬಲಪಡಿಸುವುದು ಅತ್ಯಗತ್ಯ ಎಂದು ಅವರು ಸೂಚಿಸಿದ್ದಾರೆ.

ಪರಿಹಾರ ಕ್ರಮವಾಗಿ ಈಗಲೇ ಎಚ್ಚೆತ್ತುಕೊಳ್ಳಬೇಕಾದ ಅಗತ್ಯ ಇದೆ ಎಂದು ತಜ್ಞರು ಎಚ್ಚರಿಸಿದ್ದಾರೆ. ಇದಕ್ಕಾಗಿ ಶಾಖ ತಡೆದುಕೊಳ್ಳುವ ಬೆಳೆಗಳ ಅಭಿವೃದ್ಧಿ, ಜಾನುವಾರುಗಳ ಸುಧಾರಿತ ತಳಿಗಳು, ರೈತರಿಗೆ ವಿಮೆ ಮತ್ತು ಆರ್ಥಿಕ ನೆರವು ಮತ್ತು ಹವಾಮಾನ ಮಾಹಿತಿ ವ್ಯವಸ್ಥೆ ಬಲಪಡಿಸುವುದು ಅಗತ್ಯ ಇದೆ ಎಂದು ಸಲಹೆ ನೀಡಿದ್ದಾರೆ. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿಗಾಗಿ  ನಮ್ಮ “ದ ರೂರಲ್‌ ಮಿರರ್.ಕಾಂ”WhatsApp Channel  ಗೆ ಇಲ್ಲಿ ಕ್ಲಿಕ್‌ ಮಾಡಿ

Rising global temperatures are posing a serious threat to agriculture and livelihoods, with nearly 1 billion people at risk. A joint report by FAO and WMO highlights that extreme heat is reducing crop yields, stressing livestock, affecting fisheries, and lowering labor productivity. Urgent adaptation measures, including climate-resilient crops and farmer support systems, are needed.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

‘We the Leaders’ | ಬಿಜೆಪಿಗೆ ವಿದಾಯ ಹೇಳಿದ ಮಾಜಿ ಐಪಿಎಸ್ ಅಧಿಕಾರಿ, ‘ವಿ ದಿ ಲೀಡರ್ಸ್’ ಮೂಲಕ ಹೊಸ ಪಯಣ

ಬಿಜೆಪಿಗೆ ರಾಜೀನಾಮೆ ನೀಡಿರುವ ಅಣ್ಣಾಮಲೈ ‘ವಿ ದಿ ಲೀಡರ್ಸ್’ ಹೆಸರಿನ ಹೊಸ ರಾಜಕೀಯ…

51 minutes ago

ಹವಾಮಾನ ವರದಿ | 05-06-2026 | ರಾಜ್ಯದಲ್ಲಿ ಮುಂಗಾರು ಚುರುಕು: ಜೂನ್ 8ರಿಂದ ಕರಾವಳಿಯಲ್ಲಿ ಭಾರೀ ಮಳೆ ಸಾಧ್ಯತೆ, ಜೂನ್ 12 ರಿಂದ ದಕ್ಷಿಣ ಒಳನಾಡಲ್ಲೂ ಮಳೆ ಹೆಚ್ಚಳ

ರಾಜ್ಯದಲ್ಲಿ ಮುಂಗಾರು ಚಟುವಟಿಕೆಗಳು ಚುರುಕುಗೊಳ್ಳುತ್ತಿದ್ದು, ಜೂನ್ 8ರಿಂದ 13ರವರೆಗೆ ಕರಾವಳಿ ಭಾಗಗಳಲ್ಲಿ ಉತ್ತಮ…

5 hours ago

ಕೃಷಿ ಹೊಂಡಗಳಿಗೆ ಕಡ್ಡಾಯ ತಂತಿ ಬೇಲಿ ಅಳವಡಿಸಿ – ರೈತರಿಗೆ ಕೃಷಿ ಇಲಾಖೆ ಮನವಿ

ಕೃಷಿ ಭಾಗ್ಯ ಯೋಜನೆಯಡಿ ನಿರ್ಮಿಸಿರುವ ಕೃಷಿ ಹೊಂಡಗಳಿಗೆ ಕಡ್ಡಾಯವಾಗಿ ತಂತಿ ಬೇಲಿ ಮತ್ತು…

10 hours ago

ಕೇರಳಕ್ಕೆ ಮುಂಗಾರು ಅಧಿಕೃತ ಪ್ರವೇಶ | ಕರ್ನಾಟಕದಲ್ಲಿ ಭಾರೀ ಮಳೆಯ ಎಚ್ಚರಿಕೆ, ಮುಂದಿನ ವಾರವೂ ಮಳೆ ಚುರುಕು

ಕೇರಳಕ್ಕೆ ನೈಋತ್ಯ ಮುಂಗಾರು ಅಧಿಕೃತವಾಗಿ ಪ್ರವೇಶಿಸಿದ್ದು, ಕರಾವಳಿ ಕರ್ನಾಟಕ ಸೇರಿದಂತೆ ರಾಜ್ಯದ ಹಲವೆಡೆ…

10 hours ago

ಸಲ್ಫ್ಯೂರಿಕ್ ಆಸಿಡ್ ಕೊರತೆ – ಕಾಪರ್‌ಸಲ್ಪೇಟ್‌ ಮೇಲೂ ಹೊಡೆತ – ಕೃಷಿಕರು ಗಮನಿಸಬೇಕಾದ ವಿಷಯ…

ಜಾಗತಿಕ ಮಟ್ಟದಲ್ಲಿ ಸಲ್ಫ್ಯೂರಿಕ್ ಆಸಿಡ್ ಕೊರತೆಯಿಂದ ತಾಮ್ರ ಸೇರಿದಂತೆ ಲಿಥಿಯಂ, ನಿಕೆಲ್ ಮೊದಲಾದ…

18 hours ago

ಮ್ಯಾನ್ಮಾರ್ ಅಡಿಕೆ ಕಳ್ಳಸಾಗಣೆ ಜಾಲದ ಮೇಲೆ ಇಡಿ ಭಾರೀ ದಾಳಿ – ₹337 ಕೋಟಿ ನಕಲಿ ಇ-ವೇ ಬಿಲ್ ಜಾಲದ ತನಿಖೆ

ಮ್ಯಾನ್ಮಾರ್‌ನಿಂದ ಅಕ್ರಮವಾಗಿ ಅಡಿಕೆ ಸಾಗಣೆ ಮಾಡುತ್ತಿದ್ದ ಜಾಲದ ವಿರುದ್ಧ ಮಿಜೋರಾಂನ ಚಾಂಫೈ ಜಿಲ್ಲೆಯಲ್ಲಿ…

19 hours ago