ಬಿಸಿಲಿನ ಬೇಗೆ | ಬೆಂಗಳೂರಿನಲ್ಲಿ ಗರಿಷ್ಟ ತಾಪಮಾನ | ಕರಾವಳಿಯಲ್ಲೂ ತಲಪಿತು 39 ಡಿಗ್ರಿ…! | ಮಳೆಯಾಗಿಲ್ಲ ಇನ್ನೂ….|

April 7, 2024
10:39 PM
ಬಿಸಿಲಿನ ತಾಪಮಾನ ಹೆಚ್ಚಾಗುತ್ತಿದೆ. ಬೆಂಗಳೂರು ಮಾತ್ರವಲ್ಲ ಮಲೆನಾಡು-ಕರಾವಳಿಯಲ್ಲೂ ವಿಪರೀತ ಬಿಸಿಲು, ತಾಪಮಾನ ಏರಿಕೆಯಾಗುತ್ತಿದೆ.

ಬಿಸಿಲು  ಹೆಚ್ಚುತ್ತಿದೆ. ವಾತಾವರಣದ ಉಷ್ಣತೆಯೂ ಹೆಚ್ಚಾಗಿದೆ. ಕರಾವಳಿ ಜಿಲ್ಲೆಯಲ್ಲೂ ಶನಿವಾರ-ಭಾನುವಾರ ವಾತಾವರಣದ ಉಷ್ಣತೆ 39 ಡಿಗ್ರಿ ತಲಪಿದೆ. ಮಧ್ಯಾಹ್ನದ ವೇಳೆಗೆ ಕೆಲವು ಕಡೆ  ತಾಪಮಾನ ಮತ್ತಷ್ಟು ಏರಿಕೆಯಾಗಿದೆ. 15 ವರ್ಷಗಳಲ್ಲೇ ಎಪ್ರಿಲ್‌ನಲ್ಲಿ ಬೆಂಗಳೂರು ನಗರವು 3 ನೇ ಅತೀ ಹೆಚ್ಚು ತಾಪಮಾನ ದಾಖಲಿಸಿದೆ. ಬೆಂಗಳೂರು ತನ್ನ ಗರಿಷ್ಠ ತಾಪಮಾನ 37.2 ಡಿಗ್ರಿ ಸೆಲ್ಸಿಯಸ್ ಅನ್ನು ದಾಖಲಿಸಿತ್ತು. ಇದು ಎಂಟು ವರ್ಷಗಳಲ್ಲಿ ಗರಿಷ್ಠವಾಗಿದೆ. ಶನಿವಾರ ಬೆಂಗಳೂರಿನಲ್ಲಿ 37.6 ಡಿಗ್ರಿ ಸೆಲ್ಸಿಯಸ್ ದಾಖಲಾಗಿದೆ.

Advertisement

ಕಳೆದ ಒಂದೆರಡು ವರ್ಷಗಳಲ್ಲಿ ತಾಪಮಾನ ಏರಿಕೆ ಕಂಡುಬರುತ್ತಿದೆ. ಅತೀ ಹೆಚ್ಚು ತಾಪಮಾನ ದಾಖಲಾಗುತ್ತಿದೆ. ಕರಾವಳಿ, ಮಲೆನಾಡು ಜಿಲ್ಲೆಗಳಲ್ಲಿ 35 ಡಿಗ್ರಿ ಸೆಲ್ಸಿಯಸ್ ದಾಖಲಿಸಿದ ತಕ್ಷಣವೇ ಮಳೆಯಾಗುತ್ತದೆ ಎನ್ನುವ ಮಾತುಗಳು ಇತ್ತು. ಆದರೆ ಈಗ ತಾಮಾನ ಏರಿಕೆಯಾಗುತ್ತಿದ್ದರೂ ಮಳೆಯಾಗುತ್ತಿಲ್ಲ. ಕರಾವಳಿ ಜಿಲ್ಲೆಯಲ್ಲಿ ಶನಿವಾರದಂದು 39 ಡಿಗ್ರಿ ಸೆಲ್ಸಿಯಸ್ ದಾಖಲಾಗಿದ್ದರೆ ಭಾನುವಾರ 38 ಡಿಗ್ರಿ ಸೆಲ್ಸಿಯಸ್ ದಾಖಲಾಗಿದೆ. ತಾಪಮಾನ ಏರಿಕೆಯಾಗುತ್ತಲೇ ಇದೆ. ಮಳೆ ನಿರೀಕ್ಷೆ ಮಾತ್ರಾ ಇದೆಯಷ್ಟೆ.

ಇದೇ ವೇಳೆ ಬೆಂಗಳೂರು ನಗರವು ಪ್ರತಿದಿನ  ದಾಖಲೆಗಳನ್ನು ಮುರಿಯುತ್ತಿದೆ. ನಗರದ ನಿವಾಸಿಗಳು ತೀವ್ರವಾದ ಶಾಖದಲ್ಲಿ ತತ್ತರಿಸುತ್ತಿದ್ದಾರೆ. ಇತ್ತೀಚೆಗೆ, ಭಾರತದ ಸಿಲಿಕಾನ್ ಸಿಟಿ ತನ್ನ ಗರಿಷ್ಠ ತಾಪಮಾನ 37.2 ಡಿಗ್ರಿ ಸೆಲ್ಸಿಯಸ್  ದಾಖಲಿಸಿದೆ, ಇದು 2016 ರಲ್ಲಿ ದಾಖಲಾದ ತಾಪಮಾನಕ್ಕಿಂತಲೂ ಅಧಿಕವಾಗಿದೆ. ಶನಿವಾರ, ಬೆಂಗಳೂರು 37.6 ಡಿಗ್ರಿ ಸೆಲ್ಸಿಯಸ್ ಅನ್ನು ದಾಖಲಿಸಿದೆ, ಇದು ಭಾರತೀಯ ಹವಾಮಾನ ಇಲಾಖೆ ಪ್ರಕಾರ, ಇದು ಮೂರನೇ ಅತಿ ಹೆಚ್ಚು ಗರಿಷ್ಠ ತಾಪಮಾನವಾಗಿದೆ. ಕಳೆದ 15 ವರ್ಷಗಳ ಏಪ್ರಿಲ್‌ನಲ್ಲಿ. ಅಷ್ಟೇ ಅಲ್ಲ, ಕಳೆದ ಎಂಟು ವರ್ಷಗಳಲ್ಲೇ ಅತಿ ಹೆಚ್ಚು ತಾಪಮಾನ ಕೂಡ ದಾಖಲಾಗಿದೆ ಎಂದು ವರದಿಯಾಗಿದೆ.

ಹವಾಮಾನ ಇಲಾಖೆಯ  ಪ್ರಕಾರ, ಬೆಂಗಳೂರು ನಗರವು ಪ್ರಸ್ತುತ ಹೀಟ್‌ವೇವ್ ಅಲರ್ಟ್‌ನಲ್ಲಿಲ್ಲ. ತಾಪಮಾನವು 40 ಡಿಗ್ರಿ ಸೆಲ್ಸಿಯಸ್ ಅನ್ನು ದಾಟುವ ಸಾಧ್ಯತೆ ಇದೆ. ಬೆಂಗಳೂರಿನ ಹವಾಮಾನ ಮುನ್ಸೂಚನೆಯು ಮುಂಬರುವ ದಿನಗಳಲ್ಲಿ 36 ಡಿಗ್ರಿಯವರೆಗೆ ಇರಬಹುದು.ಕರ್ನಾಟಕದಲ್ಲಿ ಬೆರಳೆಣಿಕೆಯಷ್ಟು ಪ್ರದೇಶಗಳಲ್ಲಿ ಹೀಟ್‌ ವೇವ್‌ ಎಚ್ಚರಿಕೆಯನ್ನು ನೀಡಲಾಗಿದೆ.

ಮಲೆನಾಡು-ಕರಾವಳಿ ಭಾಗದಲ್ಲೂ ಈಚೆಗೆ ತಾಪಮಾನ ಏರಿಕೆಯಾಗುತ್ತಿದೆ. ಹೀಗಾಗಿ ಹಲವು ಕೃಷಿ ಸಮಸ್ಯೆಗೂ ಕಾರಣವಾಗುತ್ತಿದೆ.  ತಾಪಮಾನ ಏರಿಕೆ-ಬರಗಾಲವು ಕೃಷಿ ಕ್ಷೇತ್ರ ಹಾಗೂ ಗ್ರಾಮೀಣ ಭಾಗದಲ್ಲಿ ಸಂಕಷ್ಟಗಳನ್ನು ತಂದೊಡ್ಡಿದೆ. ಬೆಳೆ ನಾಶವಾಗುತ್ತಿದೆ. ಫಸಲಿನ ಮೇಲೆ ಪರಿಣಾಮ ಬೀರುತ್ತಿದೆ.

Advertisement
Advertisement

Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಹವಾಮಾನ ವರದಿ | 24-04-2026 | ಕರಾವಳಿ–ಮಲೆನಾಡು–ಒಳನಾಡಿನಲ್ಲಿ ಮಳೆ ಸೂಚನೆ
April 24, 2026
2:18 PM
by: ಸಾಯಿಶೇಖರ್ ಕರಿಕಳ
SSLC ಪಾಸ್ ಮಾಡಿದವರಿಗೆ ಸುವರ್ಣಾವಕಾಶ..! ಮಂಗಳೂರಿನ ಜಿಟಿಟಿಸಿಯಲ್ಲಿ 100% ಉದ್ಯೋಗಾಧಾರಿತ ಡಿಪ್ಲೊಮಾ
April 24, 2026
7:30 AM
by: ಮಿರರ್‌ ಡೆಸ್ಕ್
13 ಟನ್ ಅಕ್ರಮ ಅಡಿಕೆ ವಶ : ಕರಾವಳಿ ರಕ್ಷಣಾ ಪಡೆಯ ದಾಳಿ
April 24, 2026
7:24 AM
by: ಮಿರರ್‌ ಡೆಸ್ಕ್
ರಾಜ್ಯದಲ್ಲಿ ಬಿಸಿಲು ಬಿಸಿ ತೀವ್ರ : ಮೈಸೂರಿನಲ್ಲಿ ಸನ್ ಸ್ಟ್ರೋಕ್ ವಾರ್ಡ್ ಆರಂಭಿಸಿದ ಆಸ್ಪತ್ರೆ
April 23, 2026
3:10 PM
by: ಮಿರರ್‌ ಡೆಸ್ಕ್

You cannot copy content of this page - Copyright -The Rural Mirror