Advertisement
MIRROR FOCUS

ಬಿಸಿಲಿನ ಬೇಗೆ | ಬೆಂಗಳೂರಿನಲ್ಲಿ ಗರಿಷ್ಟ ತಾಪಮಾನ | ಕರಾವಳಿಯಲ್ಲೂ ತಲಪಿತು 39 ಡಿಗ್ರಿ…! | ಮಳೆಯಾಗಿಲ್ಲ ಇನ್ನೂ….|

Share

ಬಿಸಿಲು  ಹೆಚ್ಚುತ್ತಿದೆ. ವಾತಾವರಣದ ಉಷ್ಣತೆಯೂ ಹೆಚ್ಚಾಗಿದೆ. ಕರಾವಳಿ ಜಿಲ್ಲೆಯಲ್ಲೂ ಶನಿವಾರ-ಭಾನುವಾರ ವಾತಾವರಣದ ಉಷ್ಣತೆ 39 ಡಿಗ್ರಿ ತಲಪಿದೆ. ಮಧ್ಯಾಹ್ನದ ವೇಳೆಗೆ ಕೆಲವು ಕಡೆ  ತಾಪಮಾನ ಮತ್ತಷ್ಟು ಏರಿಕೆಯಾಗಿದೆ. 15 ವರ್ಷಗಳಲ್ಲೇ ಎಪ್ರಿಲ್‌ನಲ್ಲಿ ಬೆಂಗಳೂರು ನಗರವು 3 ನೇ ಅತೀ ಹೆಚ್ಚು ತಾಪಮಾನ ದಾಖಲಿಸಿದೆ. ಬೆಂಗಳೂರು ತನ್ನ ಗರಿಷ್ಠ ತಾಪಮಾನ 37.2 ಡಿಗ್ರಿ ಸೆಲ್ಸಿಯಸ್ ಅನ್ನು ದಾಖಲಿಸಿತ್ತು. ಇದು ಎಂಟು ವರ್ಷಗಳಲ್ಲಿ ಗರಿಷ್ಠವಾಗಿದೆ. ಶನಿವಾರ ಬೆಂಗಳೂರಿನಲ್ಲಿ 37.6 ಡಿಗ್ರಿ ಸೆಲ್ಸಿಯಸ್ ದಾಖಲಾಗಿದೆ.

ಕಳೆದ ಒಂದೆರಡು ವರ್ಷಗಳಲ್ಲಿ ತಾಪಮಾನ ಏರಿಕೆ ಕಂಡುಬರುತ್ತಿದೆ. ಅತೀ ಹೆಚ್ಚು ತಾಪಮಾನ ದಾಖಲಾಗುತ್ತಿದೆ. ಕರಾವಳಿ, ಮಲೆನಾಡು ಜಿಲ್ಲೆಗಳಲ್ಲಿ 35 ಡಿಗ್ರಿ ಸೆಲ್ಸಿಯಸ್ ದಾಖಲಿಸಿದ ತಕ್ಷಣವೇ ಮಳೆಯಾಗುತ್ತದೆ ಎನ್ನುವ ಮಾತುಗಳು ಇತ್ತು. ಆದರೆ ಈಗ ತಾಮಾನ ಏರಿಕೆಯಾಗುತ್ತಿದ್ದರೂ ಮಳೆಯಾಗುತ್ತಿಲ್ಲ. ಕರಾವಳಿ ಜಿಲ್ಲೆಯಲ್ಲಿ ಶನಿವಾರದಂದು 39 ಡಿಗ್ರಿ ಸೆಲ್ಸಿಯಸ್ ದಾಖಲಾಗಿದ್ದರೆ ಭಾನುವಾರ 38 ಡಿಗ್ರಿ ಸೆಲ್ಸಿಯಸ್ ದಾಖಲಾಗಿದೆ. ತಾಪಮಾನ ಏರಿಕೆಯಾಗುತ್ತಲೇ ಇದೆ. ಮಳೆ ನಿರೀಕ್ಷೆ ಮಾತ್ರಾ ಇದೆಯಷ್ಟೆ.

ಇದೇ ವೇಳೆ ಬೆಂಗಳೂರು ನಗರವು ಪ್ರತಿದಿನ  ದಾಖಲೆಗಳನ್ನು ಮುರಿಯುತ್ತಿದೆ. ನಗರದ ನಿವಾಸಿಗಳು ತೀವ್ರವಾದ ಶಾಖದಲ್ಲಿ ತತ್ತರಿಸುತ್ತಿದ್ದಾರೆ. ಇತ್ತೀಚೆಗೆ, ಭಾರತದ ಸಿಲಿಕಾನ್ ಸಿಟಿ ತನ್ನ ಗರಿಷ್ಠ ತಾಪಮಾನ 37.2 ಡಿಗ್ರಿ ಸೆಲ್ಸಿಯಸ್  ದಾಖಲಿಸಿದೆ, ಇದು 2016 ರಲ್ಲಿ ದಾಖಲಾದ ತಾಪಮಾನಕ್ಕಿಂತಲೂ ಅಧಿಕವಾಗಿದೆ. ಶನಿವಾರ, ಬೆಂಗಳೂರು 37.6 ಡಿಗ್ರಿ ಸೆಲ್ಸಿಯಸ್ ಅನ್ನು ದಾಖಲಿಸಿದೆ, ಇದು ಭಾರತೀಯ ಹವಾಮಾನ ಇಲಾಖೆ ಪ್ರಕಾರ, ಇದು ಮೂರನೇ ಅತಿ ಹೆಚ್ಚು ಗರಿಷ್ಠ ತಾಪಮಾನವಾಗಿದೆ. ಕಳೆದ 15 ವರ್ಷಗಳ ಏಪ್ರಿಲ್‌ನಲ್ಲಿ. ಅಷ್ಟೇ ಅಲ್ಲ, ಕಳೆದ ಎಂಟು ವರ್ಷಗಳಲ್ಲೇ ಅತಿ ಹೆಚ್ಚು ತಾಪಮಾನ ಕೂಡ ದಾಖಲಾಗಿದೆ ಎಂದು ವರದಿಯಾಗಿದೆ.

ಹವಾಮಾನ ಇಲಾಖೆಯ  ಪ್ರಕಾರ, ಬೆಂಗಳೂರು ನಗರವು ಪ್ರಸ್ತುತ ಹೀಟ್‌ವೇವ್ ಅಲರ್ಟ್‌ನಲ್ಲಿಲ್ಲ. ತಾಪಮಾನವು 40 ಡಿಗ್ರಿ ಸೆಲ್ಸಿಯಸ್ ಅನ್ನು ದಾಟುವ ಸಾಧ್ಯತೆ ಇದೆ. ಬೆಂಗಳೂರಿನ ಹವಾಮಾನ ಮುನ್ಸೂಚನೆಯು ಮುಂಬರುವ ದಿನಗಳಲ್ಲಿ 36 ಡಿಗ್ರಿಯವರೆಗೆ ಇರಬಹುದು.ಕರ್ನಾಟಕದಲ್ಲಿ ಬೆರಳೆಣಿಕೆಯಷ್ಟು ಪ್ರದೇಶಗಳಲ್ಲಿ ಹೀಟ್‌ ವೇವ್‌ ಎಚ್ಚರಿಕೆಯನ್ನು ನೀಡಲಾಗಿದೆ.

ಮಲೆನಾಡು-ಕರಾವಳಿ ಭಾಗದಲ್ಲೂ ಈಚೆಗೆ ತಾಪಮಾನ ಏರಿಕೆಯಾಗುತ್ತಿದೆ. ಹೀಗಾಗಿ ಹಲವು ಕೃಷಿ ಸಮಸ್ಯೆಗೂ ಕಾರಣವಾಗುತ್ತಿದೆ.  ತಾಪಮಾನ ಏರಿಕೆ-ಬರಗಾಲವು ಕೃಷಿ ಕ್ಷೇತ್ರ ಹಾಗೂ ಗ್ರಾಮೀಣ ಭಾಗದಲ್ಲಿ ಸಂಕಷ್ಟಗಳನ್ನು ತಂದೊಡ್ಡಿದೆ. ಬೆಳೆ ನಾಶವಾಗುತ್ತಿದೆ. ಫಸಲಿನ ಮೇಲೆ ಪರಿಣಾಮ ಬೀರುತ್ತಿದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 02-08-2026 | ಕರಾವಳಿಯಲ್ಲಿ ಮಳೆ ಇಳಿಮುಖ ..? ರಾಜ್ಯದಲ್ಲಿ ಮುಂಗಾರು ಸ್ಥಿತಿ ಏನು..?

ರಾಜ್ಯದ ಕರಾವಳಿ ಮತ್ತು ಮಲೆನಾಡಿನಲ್ಲಿ ಮಳೆಯ ತೀವ್ರತೆ ಇಳಿಮುಖವಾಗಲಿದ್ದು, ಆಗಸ್ಟ್‌ 3ರಿಂದ ತೋಟದ…

29 minutes ago

ಭಾರೀ ಮಳೆಯ ಎಚ್ಚರಿಕೆ : 24 ಗಂಟೆ ಸನ್ನದ್ಧವಾಗಿರಲು ಡಿಸಿ ಸೂಚನೆ, ಭೂಕುಸಿತ ಪ್ರದೇಶಗಳ ಮೇಲೆ ಕಟ್ಟೆಚ್ಚರ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರೀ ಮಳೆಯ ಮುನ್ಸೂಚನೆ ಹಿನ್ನೆಲೆಯಲ್ಲಿ ಎಲ್ಲಾ ಇಲಾಖೆಗಳನ್ನು 24…

12 hours ago

ಹುಬ್ಬಳ್ಳಿಯಲ್ಲಿ ಹಲಸು ಮೇಳಕ್ಕೆ ಚಾಲನೆ – 50ಕ್ಕೂ ಹೆಚ್ಚು ಮಳಿಗೆಗಳು, ಹಲಸಿನ ಬಿರಿಯಾನಿಯಿಂದ ಕಬಾಬ್‌ವರೆಗೆ ಸವಿಯುವ ಅವಕಾಶ

ಹುಬ್ಬಳ್ಳಿಯಲ್ಲಿ ಆರಂಭವಾದ ಮೂರು ದಿನಗಳ ಹಲಸು ಮೇಳಕ್ಕೆ ಜನರಿಂದ ಉತ್ತಮ ಸ್ಪಂದನೆ ವ್ಯಕ್ತವಾಗಿದೆ.…

12 hours ago

ರಾಜ್ಯಾದ್ಯಂತ ಆರ್ಭಟಿಸುತ್ತಿರುವ ವರುಣ – ಭದ್ರಾ-ನೇತ್ರಾವತಿ ಅಪಾಯದ ಮಟ್ಟ ಮೀರಿ ಪ್ರವಾಹ

ಕರಾವಳಿ ಹಾಗೂ ಮಲೆನಾಡಿನಲ್ಲಿ ಭಾರಿ ಮಳೆ ಮುಂದುವರಿದಿದ್ದು, ಭದ್ರಾ ಹಾಗೂ ನೇತ್ರಾವತಿ, ಕುಮಾರಧಾರಾ…

13 hours ago

ಶಿರಾಡಿ ಘಾಟ್‌ನಲ್ಲಿ ಭೂಕುಸಿತ – ರೈಲು ಸಂಚಾರಕ್ಕೆ ತಾತ್ಕಾಲಿಕ ಅಡ್ಡಿ

ಶಿರಾಡಿ ಘಾಟ್‌ನ ಎಡಕುಮರಿ–ಶಿರಿಬಾಗಿಲು ನಡುವೆ ಭೂಕುಸಿತದಿಂದ ರೈಲು ಸಂಚಾರಕ್ಕೆ ಅಡಚಣೆ ಉಂಟಾಗಿದೆ. ಪರಿಹಾರ…

13 hours ago

ಮೊಬೈಲ್ ನೋಡುತ್ತಾ ಊಟ ಮಾಡಬೇಡಿ, ಶಿಸ್ತಿನ ಜೀವನವೇ ಆರೋಗ್ಯದ ರಹಸ್ಯ – ರಾಘವೇಶ್ವರ ಶ್ರೀ

ಆಹಾರ, ನಿದ್ರೆ ಮತ್ತು ಬ್ರಹ್ಮಚರ್ಯ ಸಮತೋಲನದಲ್ಲಿದ್ದಾಗ ಮಾತ್ರ ಆರೋಗ್ಯ ಹಾಗೂ ಆಧ್ಯಾತ್ಮಿಕ ಪ್ರಗತಿ…

24 hours ago