Advertisement
MIRROR FOCUS

ಬಿಸಿಲಿನ ಬೇಗೆ | ಬೆಂಗಳೂರಿನಲ್ಲಿ ಗರಿಷ್ಟ ತಾಪಮಾನ | ಕರಾವಳಿಯಲ್ಲೂ ತಲಪಿತು 39 ಡಿಗ್ರಿ…! | ಮಳೆಯಾಗಿಲ್ಲ ಇನ್ನೂ….|

Share

ಬಿಸಿಲು  ಹೆಚ್ಚುತ್ತಿದೆ. ವಾತಾವರಣದ ಉಷ್ಣತೆಯೂ ಹೆಚ್ಚಾಗಿದೆ. ಕರಾವಳಿ ಜಿಲ್ಲೆಯಲ್ಲೂ ಶನಿವಾರ-ಭಾನುವಾರ ವಾತಾವರಣದ ಉಷ್ಣತೆ 39 ಡಿಗ್ರಿ ತಲಪಿದೆ. ಮಧ್ಯಾಹ್ನದ ವೇಳೆಗೆ ಕೆಲವು ಕಡೆ  ತಾಪಮಾನ ಮತ್ತಷ್ಟು ಏರಿಕೆಯಾಗಿದೆ. 15 ವರ್ಷಗಳಲ್ಲೇ ಎಪ್ರಿಲ್‌ನಲ್ಲಿ ಬೆಂಗಳೂರು ನಗರವು 3 ನೇ ಅತೀ ಹೆಚ್ಚು ತಾಪಮಾನ ದಾಖಲಿಸಿದೆ. ಬೆಂಗಳೂರು ತನ್ನ ಗರಿಷ್ಠ ತಾಪಮಾನ 37.2 ಡಿಗ್ರಿ ಸೆಲ್ಸಿಯಸ್ ಅನ್ನು ದಾಖಲಿಸಿತ್ತು. ಇದು ಎಂಟು ವರ್ಷಗಳಲ್ಲಿ ಗರಿಷ್ಠವಾಗಿದೆ. ಶನಿವಾರ ಬೆಂಗಳೂರಿನಲ್ಲಿ 37.6 ಡಿಗ್ರಿ ಸೆಲ್ಸಿಯಸ್ ದಾಖಲಾಗಿದೆ.

ಕಳೆದ ಒಂದೆರಡು ವರ್ಷಗಳಲ್ಲಿ ತಾಪಮಾನ ಏರಿಕೆ ಕಂಡುಬರುತ್ತಿದೆ. ಅತೀ ಹೆಚ್ಚು ತಾಪಮಾನ ದಾಖಲಾಗುತ್ತಿದೆ. ಕರಾವಳಿ, ಮಲೆನಾಡು ಜಿಲ್ಲೆಗಳಲ್ಲಿ 35 ಡಿಗ್ರಿ ಸೆಲ್ಸಿಯಸ್ ದಾಖಲಿಸಿದ ತಕ್ಷಣವೇ ಮಳೆಯಾಗುತ್ತದೆ ಎನ್ನುವ ಮಾತುಗಳು ಇತ್ತು. ಆದರೆ ಈಗ ತಾಮಾನ ಏರಿಕೆಯಾಗುತ್ತಿದ್ದರೂ ಮಳೆಯಾಗುತ್ತಿಲ್ಲ. ಕರಾವಳಿ ಜಿಲ್ಲೆಯಲ್ಲಿ ಶನಿವಾರದಂದು 39 ಡಿಗ್ರಿ ಸೆಲ್ಸಿಯಸ್ ದಾಖಲಾಗಿದ್ದರೆ ಭಾನುವಾರ 38 ಡಿಗ್ರಿ ಸೆಲ್ಸಿಯಸ್ ದಾಖಲಾಗಿದೆ. ತಾಪಮಾನ ಏರಿಕೆಯಾಗುತ್ತಲೇ ಇದೆ. ಮಳೆ ನಿರೀಕ್ಷೆ ಮಾತ್ರಾ ಇದೆಯಷ್ಟೆ.

ಇದೇ ವೇಳೆ ಬೆಂಗಳೂರು ನಗರವು ಪ್ರತಿದಿನ  ದಾಖಲೆಗಳನ್ನು ಮುರಿಯುತ್ತಿದೆ. ನಗರದ ನಿವಾಸಿಗಳು ತೀವ್ರವಾದ ಶಾಖದಲ್ಲಿ ತತ್ತರಿಸುತ್ತಿದ್ದಾರೆ. ಇತ್ತೀಚೆಗೆ, ಭಾರತದ ಸಿಲಿಕಾನ್ ಸಿಟಿ ತನ್ನ ಗರಿಷ್ಠ ತಾಪಮಾನ 37.2 ಡಿಗ್ರಿ ಸೆಲ್ಸಿಯಸ್  ದಾಖಲಿಸಿದೆ, ಇದು 2016 ರಲ್ಲಿ ದಾಖಲಾದ ತಾಪಮಾನಕ್ಕಿಂತಲೂ ಅಧಿಕವಾಗಿದೆ. ಶನಿವಾರ, ಬೆಂಗಳೂರು 37.6 ಡಿಗ್ರಿ ಸೆಲ್ಸಿಯಸ್ ಅನ್ನು ದಾಖಲಿಸಿದೆ, ಇದು ಭಾರತೀಯ ಹವಾಮಾನ ಇಲಾಖೆ ಪ್ರಕಾರ, ಇದು ಮೂರನೇ ಅತಿ ಹೆಚ್ಚು ಗರಿಷ್ಠ ತಾಪಮಾನವಾಗಿದೆ. ಕಳೆದ 15 ವರ್ಷಗಳ ಏಪ್ರಿಲ್‌ನಲ್ಲಿ. ಅಷ್ಟೇ ಅಲ್ಲ, ಕಳೆದ ಎಂಟು ವರ್ಷಗಳಲ್ಲೇ ಅತಿ ಹೆಚ್ಚು ತಾಪಮಾನ ಕೂಡ ದಾಖಲಾಗಿದೆ ಎಂದು ವರದಿಯಾಗಿದೆ.

ಹವಾಮಾನ ಇಲಾಖೆಯ  ಪ್ರಕಾರ, ಬೆಂಗಳೂರು ನಗರವು ಪ್ರಸ್ತುತ ಹೀಟ್‌ವೇವ್ ಅಲರ್ಟ್‌ನಲ್ಲಿಲ್ಲ. ತಾಪಮಾನವು 40 ಡಿಗ್ರಿ ಸೆಲ್ಸಿಯಸ್ ಅನ್ನು ದಾಟುವ ಸಾಧ್ಯತೆ ಇದೆ. ಬೆಂಗಳೂರಿನ ಹವಾಮಾನ ಮುನ್ಸೂಚನೆಯು ಮುಂಬರುವ ದಿನಗಳಲ್ಲಿ 36 ಡಿಗ್ರಿಯವರೆಗೆ ಇರಬಹುದು.ಕರ್ನಾಟಕದಲ್ಲಿ ಬೆರಳೆಣಿಕೆಯಷ್ಟು ಪ್ರದೇಶಗಳಲ್ಲಿ ಹೀಟ್‌ ವೇವ್‌ ಎಚ್ಚರಿಕೆಯನ್ನು ನೀಡಲಾಗಿದೆ.

ಮಲೆನಾಡು-ಕರಾವಳಿ ಭಾಗದಲ್ಲೂ ಈಚೆಗೆ ತಾಪಮಾನ ಏರಿಕೆಯಾಗುತ್ತಿದೆ. ಹೀಗಾಗಿ ಹಲವು ಕೃಷಿ ಸಮಸ್ಯೆಗೂ ಕಾರಣವಾಗುತ್ತಿದೆ.  ತಾಪಮಾನ ಏರಿಕೆ-ಬರಗಾಲವು ಕೃಷಿ ಕ್ಷೇತ್ರ ಹಾಗೂ ಗ್ರಾಮೀಣ ಭಾಗದಲ್ಲಿ ಸಂಕಷ್ಟಗಳನ್ನು ತಂದೊಡ್ಡಿದೆ. ಬೆಳೆ ನಾಶವಾಗುತ್ತಿದೆ. ಫಸಲಿನ ಮೇಲೆ ಪರಿಣಾಮ ಬೀರುತ್ತಿದೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 22-08-2026 | ಕರಾವಳಿಯಲ್ಲಿ ಮಳೆ ಇಳಿಕೆ, 26ರಿಂದ ಮತ್ತಷ್ಟು ದುರ್ಬಲವಾಗುವ ಸಾಧ್ಯತೆ

ಕರ್ನಾಟಕದಲ್ಲಿ ಆಗಸ್ಟ್ 23ರಿಂದ 25ರವರೆಗೆ ಹಲವೆಡೆ ಅಲ್ಲಲ್ಲಿ ಸಾಮಾನ್ಯ ಮಳೆಯಷ್ಟೇ ನಿರೀಕ್ಷಿಸಲಾಗಿದ್ದು, ಕರಾವಳಿ…

7 hours ago

ಸೆಪ್ಟೆಂಬರ್‌ನಲ್ಲಿ ಪಿಎಂ ಕಿಸಾನ್ ಹಣ ಬರಬೇಕೇ? ರೈತರು ಈಗಲೇ e-KYC ಪೂರ್ಣಗೊಳಿಸಿ

PM-Kisan ಯೋಜನೆಯ 24ನೇ ಕಂತಿನ ಹಣ ಪಡೆಯಲು ಅರ್ಹ ರೈತರು ಬಯೋಮೆಟ್ರಿಕ್ ಅಥವಾ…

15 hours ago

ಬೆಳೆ ವಿಮೆಗೆ ರೈತರಿಗೆ ಮತ್ತೊಂದು ಅವಕಾಶ : ಆಗಸ್ಟ್ 31ರವರೆಗೆ ನೋಂದಣಿ ಅವಧಿ ವಿಸ್ತರಣೆ

ಮುಂಗಾರು ಹಂಗಾಮಿನ ಭತ್ತ ಸೇರಿದಂತೆ ಬೆಳೆಗಳಿಗೆ ಪ್ರಧಾನ ಮಂತ್ರಿ ಫಸಲ್ ಬಿಮಾ ಯೋಜನೆಯಡಿ…

1 day ago

ಹವಾಮಾನ ವರದಿ | 21-08-2026 | ಕರಾವಳಿಯಲ್ಲಿ ಆ.23–25 ರಂದು ಮಳೆ ಹೆಚ್ಚಳ ಸಾಧ್ಯತೆ – ಆ.26ರವರೆಗೆ ಮೋಡ–ಮಳೆ

ಕರಾವಳಿ ಕರ್ನಾಟಕದಲ್ಲಿ ಆ.23ರಿಂದ 25ರವರೆಗೆ ಮಳೆಯ ಪ್ರಮಾಣ ಸ್ವಲ್ಪ ಹೆಚ್ಚಾಗುವ ಸಾಧ್ಯತೆಯಿದ್ದು, ಆ.26ರವರೆಗೂ…

1 day ago

ನಿಮ್ಮ ಹೆಸರಲ್ಲಿ 9 ಸಿಮ್‌ಗಳಿವೆಯೇ? ಆಗಸ್ಟ್ 24ರಿಂದ ಹೊಸ ನಿಯಮ – ಹೆಚ್ಚುವರಿ ನಂಬರ್‌ಗೆ ಬ್ರೇಕ್

ಆಗಸ್ಟ್ 24ರಿಂದ ಒಬ್ಬ ವ್ಯಕ್ತಿಯ ಹೆಸರಿನಲ್ಲಿ 9 ಮೊಬೈಲ್ ಸಂಪರ್ಕಗಳ ಮಿತಿಯನ್ನು ಮೀರಿ…

2 days ago

ತೆಂಗಿನ ಮರದಿಂದ 3 ಕೋಟಿ ಜನರಿಗೆ ಬದುಕು…!, ಈಗ ₹7,038 ಕೋಟಿ ರಫ್ತು!

ಭಾರತದ ತೆಂಗು ವಲಯ ಈಗ ಕಾಯಿ ಮಾರಾಟದಿಂದ ಮೌಲ್ಯವರ್ಧಿತ ಉತ್ಪನ್ನಗಳ ಜಾಗತಿಕ ಮಾರುಕಟ್ಟೆಯತ್ತ…

2 days ago