ಬಿಸಿಲೋ.. ಬಿಸಿಲು…ಮಳೆ ಬರಲಿ.. ಮಳೆ…ಎನ್ನುತ್ತಿರುವಾಗಲೇ ಕರಾವಳಿ ಜಿಲ್ಲೆಯಲ್ಲೂ ಸತತವಾಗಿ ತಾಪಮಾನ 40 ಡಿಗ್ರಿ..! |

April 10, 2024
5:16 PM
ಕರಾವಳಿ ಜಿಲ್ಲೆಯಲ್ಲೂ ತಾಪಮಾನ ಏರಿಕೆಯಾಗಿದೆ. ಬಹುತೇಕ ತಾಲೂಕುಗಳಲ್ಲಿ ಬುಧವಾರ ಮಧ್ಯಾಹ್ನದ ವೇಳೆ 40 ಡಿಗ್ರಿ ದಾಖಲಾಗಿದೆ.

ಅಯ್ಯೋ.. ವಿಪರೀತ ಬಿಸಿಲು ಒಮ್ಮೆ ಮಳೆಯಾಗಲಿ…. ಯಾವಾಗ ಬರುತ್ತಂತೆ ಮಳೆ… ಹೀಗೆಲ್ಲಾ ಮಾತನಾಡುತ್ತಿರಬೇಕಾದರೆ ಕಳೆದ 3 ದಿನಗಳಿಂದ ಸತತವಾಗಿ ಕರಾವಳಿ ಜಿಲ್ಲೆಯಲ್ಲೂ 40 ಡಿಗ್ರಿ ತಾಪಮಾನ ತಲಪಿದೆ.  ದ ಕ ಜಿಲ್ಲೆಯಲ್ಲಿ ಬುಧವಾರ ಬಹುತೇಕ ತಾಲೂಕುಗಳಲ್ಲಿ ತಾಪಮಾನ 40 ಡಿಗ್ರಿ ಕಂಡುಬಂದಿತ್ತು.

Advertisement

ಕಳೆದ ಒಂದು ವಾರದಿಂದ ಮಳೆಯ ನಿರೀಕ್ಷೆ ಇತ್ತು. ಹವಾಮಾನ ಮುನ್ಸೂಚನೆ ಪ್ರಕಾರ ಕರಾವಳಿ ಜಿಲ್ಲೆ ಅದರಲ್ಲೂ ಪಶ್ಚಿಮ ಘಟ್ಟದ ತಪ್ಪಲು ಪ್ರದೇಶಗಳಲ್ಲಿ ಎಂದಿನಂತೆ ಮಳೆಯ ನಿರೀಕ್ಷೆ ಇತ್ತು. ಆದರೆ ಎರಡು ದಿನದ ಹವಾಮಾನದ ಬದಲಾವಣೆಯ ಕಾರಣದಿಂದ ಮಳೆ ದೂರವಾಯ್ತು. ಈಗ ಕರಾವಳಿ ಜಿಲ್ಲೆಯ ಬಹುತೇಕ ತಾಲೂಕುಗಳಲ್ಲಿ ತಾಪಮಾನ 40 ಡಿಗ್ರಿ ದಾಖಲಾಗಿದೆ. ವಿಶೇಷ ಎಂದರೆ ಮಂಗಳೂರು ಸೇರಿದಂತೆ ಸಮುದ್ರ ತೀರದ ಪ್ರದೇಶಗಳಲ್ಲಿ ತಾಪಮಾನ ಕಡಿಮೆ ಇತ್ತು. ಪಶ್ಚಿಮ ಘಟ್ಟದ ತಪ್ಪಲು ಪ್ರದೇಶಗಳಲ್ಲಿ ತಾಪಮಾನ ವಿಪರೀತ ಏರಿಕೆಯಾಗಿದೆ. ಕಳೆದ ಎರಡು ವರ್ಷಗಳ ಹಿಂದಿನವರೆಗೂ ತಾಪಮಾನ 35-36 ಡಿಗ್ರಿ ದಾಖಲಾದರೆ ಮಳೆ ಖಚಿತವಾಗಿತ್ತು. ಅದಕ್ಕೂ ಹಿಂದೆ 33-35 ಡಿಗ್ರಿ ತಾಪಮಾನ ದಾಖಲಾದರೆ ಆ ದಿನ ಮಳೆ ನಿಶ್ಚಿತವಾಗಿತ್ತು. ಈಗ ಬದಲಾದ ಹವಾಮಾನದ ಕಾರಣದಿಂದ ವಿಪರೀತ ತಾಪಮಾನ ದಾಖಲಾಗುತ್ತಿದೆ. ಬೆಳಗ್ಗೆ 11 ಗಂಟೆಯ ವೇಳೆಗೇ 36 ಡಿಗ್ರಿ ತಾಪಮಾನ ದಾಖಲಾಗಿ ನಂತರ ಏರಿಕೆಯಾಗುತ್ತಾ ಸಾಗುತ್ತದೆ. ಇದೇ ವೇಳೆ ವಾತಾವರಣದ ಶುಷ್ಕತೆ ಕೂಡಾ ಕಡಿಮೆಯಾಗುತ್ತಿದೆ.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಹವಾಮಾನ ವರದಿ | 17-06-2025 | ಮಳೆ ತೀವ್ರತೆ ಕಡಿಮೆ ನಿರೀಕ್ಷೆ | ಜೂ.18 ರಿಂದ ಸಾಮಾನ್ಯ ಮಳೆ ಸಾಧ್ಯತೆ
June 17, 2025
11:58 AM
by: ಸಾಯಿಶೇಖರ್ ಕರಿಕಳ
ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಭಾರೀ ಮಳೆ | ಇದುವರೆಗಿನ ಹಾನಿ ಎಷ್ಟು..?
June 17, 2025
11:24 AM
by: The Rural Mirror ಸುದ್ದಿಜಾಲ
ಮುಂದುವರಿದ ಮಳೆ | ಕೊಡಗು ಕರಾವಳಿ ಜಿಲ್ಲೆಯಲ್ಲಿ ಉತ್ತಮ ಮಳೆ | ಇಂದೂ ಹಲವು ಕಡೆ ರೆಡ್ ಅಲರ್ಟ್ |
June 17, 2025
6:53 AM
by: ದ ರೂರಲ್ ಮಿರರ್.ಕಾಂ
ಆತ್ಮನಿರ್ಭರ ಯೋಜನೆಯಿಂದ ಸ್ವಾವಲಂಬಿ ಬದುಕು | ಸಾವಯವ ಕೃಷಿಯಲ್ಲಿ ಕಬ್ಬು ಬೆಳೆದು ಯಶಸ್ವಿ
June 16, 2025
11:03 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror

Join Our Group