ಬಿಸಿಲೋ.. ಬಿಸಿಲು…ಮಳೆ ಬರಲಿ.. ಮಳೆ…ಎನ್ನುತ್ತಿರುವಾಗಲೇ ಕರಾವಳಿ ಜಿಲ್ಲೆಯಲ್ಲೂ ಸತತವಾಗಿ ತಾಪಮಾನ 40 ಡಿಗ್ರಿ..! |

April 10, 2024
5:16 PM
ಕರಾವಳಿ ಜಿಲ್ಲೆಯಲ್ಲೂ ತಾಪಮಾನ ಏರಿಕೆಯಾಗಿದೆ. ಬಹುತೇಕ ತಾಲೂಕುಗಳಲ್ಲಿ ಬುಧವಾರ ಮಧ್ಯಾಹ್ನದ ವೇಳೆ 40 ಡಿಗ್ರಿ ದಾಖಲಾಗಿದೆ.

ಅಯ್ಯೋ.. ವಿಪರೀತ ಬಿಸಿಲು ಒಮ್ಮೆ ಮಳೆಯಾಗಲಿ…. ಯಾವಾಗ ಬರುತ್ತಂತೆ ಮಳೆ… ಹೀಗೆಲ್ಲಾ ಮಾತನಾಡುತ್ತಿರಬೇಕಾದರೆ ಕಳೆದ 3 ದಿನಗಳಿಂದ ಸತತವಾಗಿ ಕರಾವಳಿ ಜಿಲ್ಲೆಯಲ್ಲೂ 40 ಡಿಗ್ರಿ ತಾಪಮಾನ ತಲಪಿದೆ.  ದ ಕ ಜಿಲ್ಲೆಯಲ್ಲಿ ಬುಧವಾರ ಬಹುತೇಕ ತಾಲೂಕುಗಳಲ್ಲಿ ತಾಪಮಾನ 40 ಡಿಗ್ರಿ ಕಂಡುಬಂದಿತ್ತು.

ಕಳೆದ ಒಂದು ವಾರದಿಂದ ಮಳೆಯ ನಿರೀಕ್ಷೆ ಇತ್ತು. ಹವಾಮಾನ ಮುನ್ಸೂಚನೆ ಪ್ರಕಾರ ಕರಾವಳಿ ಜಿಲ್ಲೆ ಅದರಲ್ಲೂ ಪಶ್ಚಿಮ ಘಟ್ಟದ ತಪ್ಪಲು ಪ್ರದೇಶಗಳಲ್ಲಿ ಎಂದಿನಂತೆ ಮಳೆಯ ನಿರೀಕ್ಷೆ ಇತ್ತು. ಆದರೆ ಎರಡು ದಿನದ ಹವಾಮಾನದ ಬದಲಾವಣೆಯ ಕಾರಣದಿಂದ ಮಳೆ ದೂರವಾಯ್ತು. ಈಗ ಕರಾವಳಿ ಜಿಲ್ಲೆಯ ಬಹುತೇಕ ತಾಲೂಕುಗಳಲ್ಲಿ ತಾಪಮಾನ 40 ಡಿಗ್ರಿ ದಾಖಲಾಗಿದೆ. ವಿಶೇಷ ಎಂದರೆ ಮಂಗಳೂರು ಸೇರಿದಂತೆ ಸಮುದ್ರ ತೀರದ ಪ್ರದೇಶಗಳಲ್ಲಿ ತಾಪಮಾನ ಕಡಿಮೆ ಇತ್ತು. ಪಶ್ಚಿಮ ಘಟ್ಟದ ತಪ್ಪಲು ಪ್ರದೇಶಗಳಲ್ಲಿ ತಾಪಮಾನ ವಿಪರೀತ ಏರಿಕೆಯಾಗಿದೆ. ಕಳೆದ ಎರಡು ವರ್ಷಗಳ ಹಿಂದಿನವರೆಗೂ ತಾಪಮಾನ 35-36 ಡಿಗ್ರಿ ದಾಖಲಾದರೆ ಮಳೆ ಖಚಿತವಾಗಿತ್ತು. ಅದಕ್ಕೂ ಹಿಂದೆ 33-35 ಡಿಗ್ರಿ ತಾಪಮಾನ ದಾಖಲಾದರೆ ಆ ದಿನ ಮಳೆ ನಿಶ್ಚಿತವಾಗಿತ್ತು. ಈಗ ಬದಲಾದ ಹವಾಮಾನದ ಕಾರಣದಿಂದ ವಿಪರೀತ ತಾಪಮಾನ ದಾಖಲಾಗುತ್ತಿದೆ. ಬೆಳಗ್ಗೆ 11 ಗಂಟೆಯ ವೇಳೆಗೇ 36 ಡಿಗ್ರಿ ತಾಪಮಾನ ದಾಖಲಾಗಿ ನಂತರ ಏರಿಕೆಯಾಗುತ್ತಾ ಸಾಗುತ್ತದೆ. ಇದೇ ವೇಳೆ ವಾತಾವರಣದ ಶುಷ್ಕತೆ ಕೂಡಾ ಕಡಿಮೆಯಾಗುತ್ತಿದೆ.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಮುಂದುವರಿದ ಮಳೆ ಅಬ್ಬರ : ಆಗಸ್ಟ್‌ 4ರಂದು ದ ಕ -ಉಡುಪಿ-ಕಾಸರಗೋಡು ಜಿಲ್ಲೆಯ ಕೆಲವು ಶಾಲೆ-ಕಾಲೇಜುಗಳಿಗೆ ರಜೆ ಘೋಷಣೆ
August 3, 2026
10:48 PM
by: ದ ರೂರಲ್ ಮಿರರ್.ಕಾಂ
ಯಡಕುಮೇರಿ ಹಳಿ ದುರಸ್ತಿ ಪೂರ್ಣ : ಮಂಗಳೂರು–ಬೆಂಗಳೂರು ರೈಲು ರೈಲು ಸಂಚಾರ ಪುನರಾರಂಭ
August 3, 2026
10:24 PM
by: ದ ರೂರಲ್ ಮಿರರ್.ಕಾಂ
ಜಾಗತಿಕ ತಾಪಮಾನ ಏರಿಕೆ ಎಚ್ಚರಿಕೆ – 1 ಡಿಗ್ರಿ ತಾಪಮಾನ ಹೆಚ್ಚಾದರೆ ಭಾರತದ ಭತ್ತದ ಇಳುವರಿ 6.6% ಕುಸಿಯುವ ಸಾಧ್ಯತೆ
August 3, 2026
9:25 PM
by: ದ ರೂರಲ್ ಮಿರರ್.ಕಾಂ
ಹಗಲು ನಿದ್ರೆ ಅನೇಕ ರೋಗಗಳಿಗೆ ಆಹ್ವಾನ ; ಔಷಧಿಗಿಂತ ಉತ್ತಮ ಜೀವನಶೈಲಿಯೇ ಪರಿಹಾರ: ರಾಘವೇಶ್ವರ ಶ್ರೀ
August 3, 2026
8:43 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror