ಅಯ್ಯೋ.. ವಿಪರೀತ ಬಿಸಿಲು ಒಮ್ಮೆ ಮಳೆಯಾಗಲಿ…. ಯಾವಾಗ ಬರುತ್ತಂತೆ ಮಳೆ… ಹೀಗೆಲ್ಲಾ ಮಾತನಾಡುತ್ತಿರಬೇಕಾದರೆ ಕಳೆದ 3 ದಿನಗಳಿಂದ ಸತತವಾಗಿ ಕರಾವಳಿ ಜಿಲ್ಲೆಯಲ್ಲೂ 40 ಡಿಗ್ರಿ ತಾಪಮಾನ ತಲಪಿದೆ. ದ ಕ ಜಿಲ್ಲೆಯಲ್ಲಿ ಬುಧವಾರ ಬಹುತೇಕ ತಾಲೂಕುಗಳಲ್ಲಿ ತಾಪಮಾನ 40 ಡಿಗ್ರಿ ಕಂಡುಬಂದಿತ್ತು.
ಕಳೆದ ಒಂದು ವಾರದಿಂದ ಮಳೆಯ ನಿರೀಕ್ಷೆ ಇತ್ತು. ಹವಾಮಾನ ಮುನ್ಸೂಚನೆ ಪ್ರಕಾರ ಕರಾವಳಿ ಜಿಲ್ಲೆ ಅದರಲ್ಲೂ ಪಶ್ಚಿಮ ಘಟ್ಟದ ತಪ್ಪಲು ಪ್ರದೇಶಗಳಲ್ಲಿ ಎಂದಿನಂತೆ ಮಳೆಯ ನಿರೀಕ್ಷೆ ಇತ್ತು. ಆದರೆ ಎರಡು ದಿನದ ಹವಾಮಾನದ ಬದಲಾವಣೆಯ ಕಾರಣದಿಂದ ಮಳೆ ದೂರವಾಯ್ತು. ಈಗ ಕರಾವಳಿ ಜಿಲ್ಲೆಯ ಬಹುತೇಕ ತಾಲೂಕುಗಳಲ್ಲಿ ತಾಪಮಾನ 40 ಡಿಗ್ರಿ ದಾಖಲಾಗಿದೆ. ವಿಶೇಷ ಎಂದರೆ ಮಂಗಳೂರು ಸೇರಿದಂತೆ ಸಮುದ್ರ ತೀರದ ಪ್ರದೇಶಗಳಲ್ಲಿ ತಾಪಮಾನ ಕಡಿಮೆ ಇತ್ತು. ಪಶ್ಚಿಮ ಘಟ್ಟದ ತಪ್ಪಲು ಪ್ರದೇಶಗಳಲ್ಲಿ ತಾಪಮಾನ ವಿಪರೀತ ಏರಿಕೆಯಾಗಿದೆ. ಕಳೆದ ಎರಡು ವರ್ಷಗಳ ಹಿಂದಿನವರೆಗೂ ತಾಪಮಾನ 35-36 ಡಿಗ್ರಿ ದಾಖಲಾದರೆ ಮಳೆ ಖಚಿತವಾಗಿತ್ತು. ಅದಕ್ಕೂ ಹಿಂದೆ 33-35 ಡಿಗ್ರಿ ತಾಪಮಾನ ದಾಖಲಾದರೆ ಆ ದಿನ ಮಳೆ ನಿಶ್ಚಿತವಾಗಿತ್ತು. ಈಗ ಬದಲಾದ ಹವಾಮಾನದ ಕಾರಣದಿಂದ ವಿಪರೀತ ತಾಪಮಾನ ದಾಖಲಾಗುತ್ತಿದೆ. ಬೆಳಗ್ಗೆ 11 ಗಂಟೆಯ ವೇಳೆಗೇ 36 ಡಿಗ್ರಿ ತಾಪಮಾನ ದಾಖಲಾಗಿ ನಂತರ ಏರಿಕೆಯಾಗುತ್ತಾ ಸಾಗುತ್ತದೆ. ಇದೇ ವೇಳೆ ವಾತಾವರಣದ ಶುಷ್ಕತೆ ಕೂಡಾ ಕಡಿಮೆಯಾಗುತ್ತಿದೆ.
ಮಂಗಳೂರಿನಲ್ಲಿ ನಿರ್ಮಾಣಗೊಳ್ಳುತ್ತಿರುವ ರಾಜೀವ ಗಾಂಧಿ ಆರೋಗ್ಯ ವಿಜ್ಞಾನ ವಿಶ್ವವಿದ್ಯಾನಿಲಯದ ಪ್ರಾದೇಶಿಕ ಕಚೇರಿ ಕಟ್ಟಡ…
ಕೋಲಾರ ಜಿಲ್ಲೆಯಲ್ಲಿ ಸರ್ಕಾರಿ ಜಮೀನುಗಳಲ್ಲಿ ರೈತರಿಗೆ ಮಂಜೂರಾಗಿರುವ ಜಮೀನುಗಳಿಗೆ ಪೋಡಿ ದುರಸ್ತಿ ಮಾಡಲಾಗುತ್ತಿದೆ.…
ಕರಾವಳಿ ಜಿಲ್ಲೆಗಳಲ್ಲಿ ವ್ಯಾಪಕವಾಗಿ ಮಳೆಯಾಗಿದೆ. ಉತ್ತರ ಹಾಗೂ ದಕ್ಷಿಣ ಒಳನಾಡಿನ ಕೆಲವೆಡೆ ಮಳೆಯಾಗಿದೆ.…
ಅಕ್ವಡಕ್ಟ್ ಇಂಜಿನಿಯರಿಂಗ್ ತಂತ್ರಜ್ಞಾನದ ಮೂಲಕ ಆರೋಗ್ಯ, ಸುರಕ್ಷತೆ, ಪರಿಸರ ಸ್ನೇಹಿ ಮಾದರಿಯಲ್ಲಿ ಎತ್ತಿನಹೊಳೆ…
ಉನ್ನತ ಶಿಕ್ಷಣದಲ್ಲಿ ಪರಿಸರ ಪಠ್ಯಕ್ರಮವಾಗಬೇಕಿದ್ದು, ಇದು ಅತ್ಯಂತ ಅವಶ್ಯಕವಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ…
ಕೋಲಾರದಲ್ಲಿ ಮಾವು ಬೆಳೆಗೆ ಬೆಲೆ ಇಲ್ಲದೆ ಕುಸಿತ ಕಂಡಿರುವ ಹಿನ್ನೆಲೆಯಲ್ಲಿ ಬೆಳೆಗಾರರು ತೀವ್ರ…