ಅಯ್ಯೋ.. ವಿಪರೀತ ಬಿಸಿಲು ಒಮ್ಮೆ ಮಳೆಯಾಗಲಿ…. ಯಾವಾಗ ಬರುತ್ತಂತೆ ಮಳೆ… ಹೀಗೆಲ್ಲಾ ಮಾತನಾಡುತ್ತಿರಬೇಕಾದರೆ ಕಳೆದ 3 ದಿನಗಳಿಂದ ಸತತವಾಗಿ ಕರಾವಳಿ ಜಿಲ್ಲೆಯಲ್ಲೂ 40 ಡಿಗ್ರಿ ತಾಪಮಾನ ತಲಪಿದೆ. ದ ಕ ಜಿಲ್ಲೆಯಲ್ಲಿ ಬುಧವಾರ ಬಹುತೇಕ ತಾಲೂಕುಗಳಲ್ಲಿ ತಾಪಮಾನ 40 ಡಿಗ್ರಿ ಕಂಡುಬಂದಿತ್ತು.
ಕಳೆದ ಒಂದು ವಾರದಿಂದ ಮಳೆಯ ನಿರೀಕ್ಷೆ ಇತ್ತು. ಹವಾಮಾನ ಮುನ್ಸೂಚನೆ ಪ್ರಕಾರ ಕರಾವಳಿ ಜಿಲ್ಲೆ ಅದರಲ್ಲೂ ಪಶ್ಚಿಮ ಘಟ್ಟದ ತಪ್ಪಲು ಪ್ರದೇಶಗಳಲ್ಲಿ ಎಂದಿನಂತೆ ಮಳೆಯ ನಿರೀಕ್ಷೆ ಇತ್ತು. ಆದರೆ ಎರಡು ದಿನದ ಹವಾಮಾನದ ಬದಲಾವಣೆಯ ಕಾರಣದಿಂದ ಮಳೆ ದೂರವಾಯ್ತು. ಈಗ ಕರಾವಳಿ ಜಿಲ್ಲೆಯ ಬಹುತೇಕ ತಾಲೂಕುಗಳಲ್ಲಿ ತಾಪಮಾನ 40 ಡಿಗ್ರಿ ದಾಖಲಾಗಿದೆ. ವಿಶೇಷ ಎಂದರೆ ಮಂಗಳೂರು ಸೇರಿದಂತೆ ಸಮುದ್ರ ತೀರದ ಪ್ರದೇಶಗಳಲ್ಲಿ ತಾಪಮಾನ ಕಡಿಮೆ ಇತ್ತು. ಪಶ್ಚಿಮ ಘಟ್ಟದ ತಪ್ಪಲು ಪ್ರದೇಶಗಳಲ್ಲಿ ತಾಪಮಾನ ವಿಪರೀತ ಏರಿಕೆಯಾಗಿದೆ. ಕಳೆದ ಎರಡು ವರ್ಷಗಳ ಹಿಂದಿನವರೆಗೂ ತಾಪಮಾನ 35-36 ಡಿಗ್ರಿ ದಾಖಲಾದರೆ ಮಳೆ ಖಚಿತವಾಗಿತ್ತು. ಅದಕ್ಕೂ ಹಿಂದೆ 33-35 ಡಿಗ್ರಿ ತಾಪಮಾನ ದಾಖಲಾದರೆ ಆ ದಿನ ಮಳೆ ನಿಶ್ಚಿತವಾಗಿತ್ತು. ಈಗ ಬದಲಾದ ಹವಾಮಾನದ ಕಾರಣದಿಂದ ವಿಪರೀತ ತಾಪಮಾನ ದಾಖಲಾಗುತ್ತಿದೆ. ಬೆಳಗ್ಗೆ 11 ಗಂಟೆಯ ವೇಳೆಗೇ 36 ಡಿಗ್ರಿ ತಾಪಮಾನ ದಾಖಲಾಗಿ ನಂತರ ಏರಿಕೆಯಾಗುತ್ತಾ ಸಾಗುತ್ತದೆ. ಇದೇ ವೇಳೆ ವಾತಾವರಣದ ಶುಷ್ಕತೆ ಕೂಡಾ ಕಡಿಮೆಯಾಗುತ್ತಿದೆ.
ದೇಶದಲ್ಲಿ ನೈಋತ್ಯ ಮುಂಗಾರು ಚುರುಕುಗೊಂಡಿದ್ದು ಕರ್ನಾಟಕ ಸೇರಿದಂತೆ ಹಲವು ರಾಜ್ಯಗಳಲ್ಲಿ ಭಾರೀ ಮಳೆಯಾಗುವ…
ರಾಜಸ್ಥಾನದಲ್ಲಿ ಕಳೆದ ಎರಡು ವರ್ಷಗಳಲ್ಲಿ ಕೀಟನಾಶಕ ಬಳಕೆಯಿಂದ 535 ರೈತರು ಮೃತಪಟ್ಟಿರುವುದು ಬಹಿರಂಗವಾಗಿದೆ.…
ಕೊಟ್ಟಿಯೂರು ದೇವಸ್ಥಾನದಲ್ಲಿ ‘ಬಾವಳಿಕೆಟ್ಟು’ ಆಚರಣೆಗೆ ಸಂಬಂಧಿಸಿದಂತೆ ಸಾಮಾಜಿಕ ಜಾಲತಾಣಗಳಲ್ಲಿ ಹೊಸ ವಿವಾದ ಹುಟ್ಟಿಕೊಂಡಿದೆ.…
ಕರ್ನಾಟಕದಲ್ಲಿ ಮುಂಗಾರು ಚಟುವಟಿಕೆಗಳು ಜೂ. 8ರಿಂದ ಮತ್ತಷ್ಟು ಚುರುಕುಗೊಳ್ಳುವ ಲಕ್ಷಣಗಳು ಕಂಡುಬಂದಿದ್ದು, ಕರಾವಳಿ…
ಜೋಯಿಡಾದಲ್ಲಿ ನಡೆದ ಹಲಸು ಉತ್ಸವದಲ್ಲಿ 50ಕ್ಕೂ ಹೆಚ್ಚು ಮೌಲ್ಯವರ್ಧಿತ ಹಲಸಿನ ಉತ್ಪನ್ನಗಳು ಪ್ರದರ್ಶನಗೊಂಡು…
ಕ್ಯಾಂಪ್ಕೋ ಸಂಸ್ಥಾಪಕ ವಾರಣಾಶಿ ಸುಬ್ರಾಯ ಭಟ್ ಅವರ ಜನ್ಮಕ್ಕೆ 99 ವರ್ಷಗಳು ಪೂರ್ಣಗೊಂಡಿದ್ದು,…