ಅಯ್ಯೋ.. ವಿಪರೀತ ಬಿಸಿಲು ಒಮ್ಮೆ ಮಳೆಯಾಗಲಿ…. ಯಾವಾಗ ಬರುತ್ತಂತೆ ಮಳೆ… ಹೀಗೆಲ್ಲಾ ಮಾತನಾಡುತ್ತಿರಬೇಕಾದರೆ ಕಳೆದ 3 ದಿನಗಳಿಂದ ಸತತವಾಗಿ ಕರಾವಳಿ ಜಿಲ್ಲೆಯಲ್ಲೂ 40 ಡಿಗ್ರಿ ತಾಪಮಾನ ತಲಪಿದೆ. ದ ಕ ಜಿಲ್ಲೆಯಲ್ಲಿ ಬುಧವಾರ ಬಹುತೇಕ ತಾಲೂಕುಗಳಲ್ಲಿ ತಾಪಮಾನ 40 ಡಿಗ್ರಿ ಕಂಡುಬಂದಿತ್ತು.
ಕಳೆದ ಒಂದು ವಾರದಿಂದ ಮಳೆಯ ನಿರೀಕ್ಷೆ ಇತ್ತು. ಹವಾಮಾನ ಮುನ್ಸೂಚನೆ ಪ್ರಕಾರ ಕರಾವಳಿ ಜಿಲ್ಲೆ ಅದರಲ್ಲೂ ಪಶ್ಚಿಮ ಘಟ್ಟದ ತಪ್ಪಲು ಪ್ರದೇಶಗಳಲ್ಲಿ ಎಂದಿನಂತೆ ಮಳೆಯ ನಿರೀಕ್ಷೆ ಇತ್ತು. ಆದರೆ ಎರಡು ದಿನದ ಹವಾಮಾನದ ಬದಲಾವಣೆಯ ಕಾರಣದಿಂದ ಮಳೆ ದೂರವಾಯ್ತು. ಈಗ ಕರಾವಳಿ ಜಿಲ್ಲೆಯ ಬಹುತೇಕ ತಾಲೂಕುಗಳಲ್ಲಿ ತಾಪಮಾನ 40 ಡಿಗ್ರಿ ದಾಖಲಾಗಿದೆ. ವಿಶೇಷ ಎಂದರೆ ಮಂಗಳೂರು ಸೇರಿದಂತೆ ಸಮುದ್ರ ತೀರದ ಪ್ರದೇಶಗಳಲ್ಲಿ ತಾಪಮಾನ ಕಡಿಮೆ ಇತ್ತು. ಪಶ್ಚಿಮ ಘಟ್ಟದ ತಪ್ಪಲು ಪ್ರದೇಶಗಳಲ್ಲಿ ತಾಪಮಾನ ವಿಪರೀತ ಏರಿಕೆಯಾಗಿದೆ. ಕಳೆದ ಎರಡು ವರ್ಷಗಳ ಹಿಂದಿನವರೆಗೂ ತಾಪಮಾನ 35-36 ಡಿಗ್ರಿ ದಾಖಲಾದರೆ ಮಳೆ ಖಚಿತವಾಗಿತ್ತು. ಅದಕ್ಕೂ ಹಿಂದೆ 33-35 ಡಿಗ್ರಿ ತಾಪಮಾನ ದಾಖಲಾದರೆ ಆ ದಿನ ಮಳೆ ನಿಶ್ಚಿತವಾಗಿತ್ತು. ಈಗ ಬದಲಾದ ಹವಾಮಾನದ ಕಾರಣದಿಂದ ವಿಪರೀತ ತಾಪಮಾನ ದಾಖಲಾಗುತ್ತಿದೆ. ಬೆಳಗ್ಗೆ 11 ಗಂಟೆಯ ವೇಳೆಗೇ 36 ಡಿಗ್ರಿ ತಾಪಮಾನ ದಾಖಲಾಗಿ ನಂತರ ಏರಿಕೆಯಾಗುತ್ತಾ ಸಾಗುತ್ತದೆ. ಇದೇ ವೇಳೆ ವಾತಾವರಣದ ಶುಷ್ಕತೆ ಕೂಡಾ ಕಡಿಮೆಯಾಗುತ್ತಿದೆ.
ಕಡಿಮೆ ಸಂಪನ್ಮೂಲ ಬಳಸಿ ಹೆಚ್ಚು ಉತ್ಪಾದನೆ ಪಡೆಯಲು ಸ್ಮಾರ್ಟ್ ಸಂಪನ್ಮೂಲ ನಿರ್ವಹಣೆ ಅಗತ್ಯವಾಗಿದೆ.…
ತೀವ್ರ ಬರ ಮತ್ತು ಉಷ್ಣಾಂಶದಿಂದ ಇಂಗ್ಲೆಂಡ್ನಲ್ಲಿ ಕೃಷಿ ಉತ್ಪಾದನೆ ಕುಸಿದಿದ್ದು, ಆಹಾರ ಕೊರತೆ…
ಕರಾವಳಿ ಜಿಲ್ಲೆಗಳಲ್ಲಿ ಸಣ್ಣ ಅವಧಿಯ ಸಾಮಾನ್ಯ ಮಳೆ ಮಾತ್ರ; ಮಲೆನಾಡಿನಲ್ಲಿ ಮಳೆ ಕಡಿಮೆಯಾಗುವ…
ಆಹಾರ ಸಂಸ್ಕರಣಾ ವಲಯದಲ್ಲಿ ಒಡಿಶಾ ₹43,437 ಕೋಟಿ ಮೌಲ್ಯದ ಹೂಡಿಕೆ ಪ್ರಸ್ತಾವನೆಗಳನ್ನು ಆಕರ್ಷಿಸಿದ್ದು,…
ಕರ್ನಾಟಕದಲ್ಲಿ 69.60 ಲಕ್ಷ ಹೆಕ್ಟೇರ್ ಭೂಮಿ ಭೂಸವಕಳಿ ವ್ಯಾಪ್ತಿಯಲ್ಲಿದೆ ಎಂದು ಕೇಂದ್ರ ಸರ್ಕಾರದ…
ಮಂಗಳೂರಿನಲ್ಲಿ ನಡೆದ ರಾಷ್ಟ್ರೀಯ 11 ವರ್ಷದೊಳಗಿನ ಮುಕ್ತ ಹಾಗೂ ಬಾಲಕಿಯರ ಚೆಸ್ ಚಾಂಪಿಯನ್ಶಿಪ್–2026ಕ್ಕೆ…