Advertisement
ಹವಾಮಾನ

ಬಿಸಿಲೋ.. ಬಿಸಿಲು…ಮಳೆ ಬರಲಿ.. ಮಳೆ…ಎನ್ನುತ್ತಿರುವಾಗಲೇ ಕರಾವಳಿ ಜಿಲ್ಲೆಯಲ್ಲೂ ಸತತವಾಗಿ ತಾಪಮಾನ 40 ಡಿಗ್ರಿ..! |

Share

ಅಯ್ಯೋ.. ವಿಪರೀತ ಬಿಸಿಲು ಒಮ್ಮೆ ಮಳೆಯಾಗಲಿ…. ಯಾವಾಗ ಬರುತ್ತಂತೆ ಮಳೆ… ಹೀಗೆಲ್ಲಾ ಮಾತನಾಡುತ್ತಿರಬೇಕಾದರೆ ಕಳೆದ 3 ದಿನಗಳಿಂದ ಸತತವಾಗಿ ಕರಾವಳಿ ಜಿಲ್ಲೆಯಲ್ಲೂ 40 ಡಿಗ್ರಿ ತಾಪಮಾನ ತಲಪಿದೆ.  ದ ಕ ಜಿಲ್ಲೆಯಲ್ಲಿ ಬುಧವಾರ ಬಹುತೇಕ ತಾಲೂಕುಗಳಲ್ಲಿ ತಾಪಮಾನ 40 ಡಿಗ್ರಿ ಕಂಡುಬಂದಿತ್ತು.

ಕಳೆದ ಒಂದು ವಾರದಿಂದ ಮಳೆಯ ನಿರೀಕ್ಷೆ ಇತ್ತು. ಹವಾಮಾನ ಮುನ್ಸೂಚನೆ ಪ್ರಕಾರ ಕರಾವಳಿ ಜಿಲ್ಲೆ ಅದರಲ್ಲೂ ಪಶ್ಚಿಮ ಘಟ್ಟದ ತಪ್ಪಲು ಪ್ರದೇಶಗಳಲ್ಲಿ ಎಂದಿನಂತೆ ಮಳೆಯ ನಿರೀಕ್ಷೆ ಇತ್ತು. ಆದರೆ ಎರಡು ದಿನದ ಹವಾಮಾನದ ಬದಲಾವಣೆಯ ಕಾರಣದಿಂದ ಮಳೆ ದೂರವಾಯ್ತು. ಈಗ ಕರಾವಳಿ ಜಿಲ್ಲೆಯ ಬಹುತೇಕ ತಾಲೂಕುಗಳಲ್ಲಿ ತಾಪಮಾನ 40 ಡಿಗ್ರಿ ದಾಖಲಾಗಿದೆ. ವಿಶೇಷ ಎಂದರೆ ಮಂಗಳೂರು ಸೇರಿದಂತೆ ಸಮುದ್ರ ತೀರದ ಪ್ರದೇಶಗಳಲ್ಲಿ ತಾಪಮಾನ ಕಡಿಮೆ ಇತ್ತು. ಪಶ್ಚಿಮ ಘಟ್ಟದ ತಪ್ಪಲು ಪ್ರದೇಶಗಳಲ್ಲಿ ತಾಪಮಾನ ವಿಪರೀತ ಏರಿಕೆಯಾಗಿದೆ. ಕಳೆದ ಎರಡು ವರ್ಷಗಳ ಹಿಂದಿನವರೆಗೂ ತಾಪಮಾನ 35-36 ಡಿಗ್ರಿ ದಾಖಲಾದರೆ ಮಳೆ ಖಚಿತವಾಗಿತ್ತು. ಅದಕ್ಕೂ ಹಿಂದೆ 33-35 ಡಿಗ್ರಿ ತಾಪಮಾನ ದಾಖಲಾದರೆ ಆ ದಿನ ಮಳೆ ನಿಶ್ಚಿತವಾಗಿತ್ತು. ಈಗ ಬದಲಾದ ಹವಾಮಾನದ ಕಾರಣದಿಂದ ವಿಪರೀತ ತಾಪಮಾನ ದಾಖಲಾಗುತ್ತಿದೆ. ಬೆಳಗ್ಗೆ 11 ಗಂಟೆಯ ವೇಳೆಗೇ 36 ಡಿಗ್ರಿ ತಾಪಮಾನ ದಾಖಲಾಗಿ ನಂತರ ಏರಿಕೆಯಾಗುತ್ತಾ ಸಾಗುತ್ತದೆ. ಇದೇ ವೇಳೆ ವಾತಾವರಣದ ಶುಷ್ಕತೆ ಕೂಡಾ ಕಡಿಮೆಯಾಗುತ್ತಿದೆ.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

“ಮೇ 26ಕ್ಕೇ ಮುಂಗಾರು ಎಂಟ್ರಿ!” ಕರ್ನಾಟಕದಲ್ಲಿ ಭಾರೀ ಮಳೆ ಅಲರ್ಟ್‌, ಮೀನುಗಾರರಿಗೆ ಎಚ್ಚರಿಕೆ

ನೈರುತ್ಯ ಮುಂಗಾರು ಮೇ 26ರಂದು ಕೇರಳ ಪ್ರವೇಶಿಸುವ ಸಾಧ್ಯತೆ ಇದೆ ಎಂದು IMD…

7 hours ago

ಕರ್ನಾಟಕಕ್ಕೆ ಭಾರೀ ಮಳೆ ಅಲರ್ಟ್‌ | ಬೆಂಗಳೂರಿನಲ್ಲಿ ಮಳೆ ಸಂಕಷ್ಟ, ಜಿಲ್ಲೆಗಳಲ್ಲಿ ಬೆಳೆಗಳು ಕೊಚ್ಚಿ ಹೋದವು…!

ರಾಜ್ಯದ ಹಲವು ಜಿಲ್ಲೆಗಳಲ್ಲಿ ಮುಂಗಾರು ಪೂರ್ವ ಮಳೆ ಅಬ್ಬರಿಸಿದ್ದು, ಬೆಂಗಳೂರಿನಲ್ಲಿ ಜಲಾವೃತ ಪರಿಸ್ಥಿತಿ…

9 hours ago

ಅಡಿಕೆ ಮಾರುಕಟ್ಟೆ ಏಕೆ ನಿಂತಿತು..? ಸವಾಲು ಮತ್ತು ರೈತರ ಭವಿಷ್ಯದ ಪ್ರಶ್ನೆಗಳು ಏನು…?

ಅಡಿಕೆ ಇಳುವರಿ ಕಡಿಮೆಯಿದ್ದರೂ ನಿರೀಕ್ಷಿತ ಮಟ್ಟದಲ್ಲಿ ಧಾರಣೆ ಏರಿಕೆಯಾಗದಿರುವುದು ರೈತರಲ್ಲಿ ಆತಂಕ ಮೂಡಿಸಿದೆ.…

19 hours ago

ಗೋಮಯದಿಂದ ಗ್ರೀನ್‌ ಎನರ್ಜಿ | ದೆಹಲಿಯಲ್ಲಿ 300 ಟನ್ ಜೈವಿಕ ಅನಿಲ ಘಟಕ – ಯಮುನಾ ಮಾಲಿನ್ಯ ತಡೆಗೆ ಮೆಗಾ ಪ್ಲಾನ್‌

ದೆಹಲಿಯ ಗಾಜಿಪುರದಲ್ಲಿ ದಿನಕ್ಕೆ 300 ಟನ್ ಸಾಮರ್ಥ್ಯದ ಜೈವಿಕ ಅನಿಲ ಘಟಕ ಸ್ಥಾಪನೆಗೆ…

19 hours ago

ಇಂಡೋ ಫಾಲಿ, ಬರ್ಮಾ ಗೋಟಾ ಹಾವಳಿ : ಮಂಗಳೂರು ಚಾಲಿ ಅಡಿಕೆ ಮಾರುಕಟ್ಟೆಗೆ ನಿಜವಾಗಿಯೂ ಎಷ್ಟು ಹೊಡೆತ?

ಇಂಡೋ ಫಾಲಿ ಮತ್ತು ಬರ್ಮಾ ಗೋಟಾ ಅಡಿಕೆ ಆಮದು ಹೆಚ್ಚಾದರೂ ಮಂಗಳೂರು ಚಾಲಿ…

1 day ago