ಅಯ್ಯೋ.. ವಿಪರೀತ ಬಿಸಿಲು ಒಮ್ಮೆ ಮಳೆಯಾಗಲಿ…. ಯಾವಾಗ ಬರುತ್ತಂತೆ ಮಳೆ… ಹೀಗೆಲ್ಲಾ ಮಾತನಾಡುತ್ತಿರಬೇಕಾದರೆ ಕಳೆದ 3 ದಿನಗಳಿಂದ ಸತತವಾಗಿ ಕರಾವಳಿ ಜಿಲ್ಲೆಯಲ್ಲೂ 40 ಡಿಗ್ರಿ ತಾಪಮಾನ ತಲಪಿದೆ. ದ ಕ ಜಿಲ್ಲೆಯಲ್ಲಿ ಬುಧವಾರ ಬಹುತೇಕ ತಾಲೂಕುಗಳಲ್ಲಿ ತಾಪಮಾನ 40 ಡಿಗ್ರಿ ಕಂಡುಬಂದಿತ್ತು.
ಕಳೆದ ಒಂದು ವಾರದಿಂದ ಮಳೆಯ ನಿರೀಕ್ಷೆ ಇತ್ತು. ಹವಾಮಾನ ಮುನ್ಸೂಚನೆ ಪ್ರಕಾರ ಕರಾವಳಿ ಜಿಲ್ಲೆ ಅದರಲ್ಲೂ ಪಶ್ಚಿಮ ಘಟ್ಟದ ತಪ್ಪಲು ಪ್ರದೇಶಗಳಲ್ಲಿ ಎಂದಿನಂತೆ ಮಳೆಯ ನಿರೀಕ್ಷೆ ಇತ್ತು. ಆದರೆ ಎರಡು ದಿನದ ಹವಾಮಾನದ ಬದಲಾವಣೆಯ ಕಾರಣದಿಂದ ಮಳೆ ದೂರವಾಯ್ತು. ಈಗ ಕರಾವಳಿ ಜಿಲ್ಲೆಯ ಬಹುತೇಕ ತಾಲೂಕುಗಳಲ್ಲಿ ತಾಪಮಾನ 40 ಡಿಗ್ರಿ ದಾಖಲಾಗಿದೆ. ವಿಶೇಷ ಎಂದರೆ ಮಂಗಳೂರು ಸೇರಿದಂತೆ ಸಮುದ್ರ ತೀರದ ಪ್ರದೇಶಗಳಲ್ಲಿ ತಾಪಮಾನ ಕಡಿಮೆ ಇತ್ತು. ಪಶ್ಚಿಮ ಘಟ್ಟದ ತಪ್ಪಲು ಪ್ರದೇಶಗಳಲ್ಲಿ ತಾಪಮಾನ ವಿಪರೀತ ಏರಿಕೆಯಾಗಿದೆ. ಕಳೆದ ಎರಡು ವರ್ಷಗಳ ಹಿಂದಿನವರೆಗೂ ತಾಪಮಾನ 35-36 ಡಿಗ್ರಿ ದಾಖಲಾದರೆ ಮಳೆ ಖಚಿತವಾಗಿತ್ತು. ಅದಕ್ಕೂ ಹಿಂದೆ 33-35 ಡಿಗ್ರಿ ತಾಪಮಾನ ದಾಖಲಾದರೆ ಆ ದಿನ ಮಳೆ ನಿಶ್ಚಿತವಾಗಿತ್ತು. ಈಗ ಬದಲಾದ ಹವಾಮಾನದ ಕಾರಣದಿಂದ ವಿಪರೀತ ತಾಪಮಾನ ದಾಖಲಾಗುತ್ತಿದೆ. ಬೆಳಗ್ಗೆ 11 ಗಂಟೆಯ ವೇಳೆಗೇ 36 ಡಿಗ್ರಿ ತಾಪಮಾನ ದಾಖಲಾಗಿ ನಂತರ ಏರಿಕೆಯಾಗುತ್ತಾ ಸಾಗುತ್ತದೆ. ಇದೇ ವೇಳೆ ವಾತಾವರಣದ ಶುಷ್ಕತೆ ಕೂಡಾ ಕಡಿಮೆಯಾಗುತ್ತಿದೆ.
ತೆಂಗು–ಅಡಿಕೆ ತೋಟಗಳ ನಡುವೆ ಅರಿಶಿಣ, ಏಲಕ್ಕಿ, ಮೆಣಸು ಬೆಳೆದು ತುಮಕೂರು ಜಿಲ್ಲೆಯ ರೈತರು…
ಮುಂಗಾರು ಮಳೆಯ ಕೊರತೆ ಎದುರಿಸುತ್ತಿರುವ ರಾಜ್ಯದ ಹಲವು ಭಾಗಗಳಲ್ಲಿ ಮಳೆ ಹೆಚ್ಚಿಸಲು ಸರ್ಕಾರ…
ಕಸ್ತೂರಿ ರಂಗನ್ ವರದಿ ಜಾರಿಗೆ ಕರ್ನಾಟಕ ಸರ್ಕಾರ ಅವಕಾಶ ನೀಡುವುದಿಲ್ಲ ಎಂದು ಶಿಕ್ಷಣ…
ಭಾರತದ 126 ಪ್ರಮುಖ ನಗರಗಳ ಹವಾಮಾನ ಸಿದ್ಧತೆಯನ್ನು ಅಳೆಯಲಾಗಿದ್ದರೂ, 2021ರ ಮೌಲ್ಯಮಾಪನದಲ್ಲಿ ರಾಷ್ಟ್ರೀಯ…
ಭಾರತದ ಕಾಫಿ ರಫ್ತು ಗಳಿಕೆ 2021-22ರ ಸುಮಾರು 1 ಶತಕೋಟಿ ಡಾಲರ್ನಿಂದ 2025-26ರಲ್ಲಿ…
ಮೀನಿನ ಮುಳ್ಳು ಮತ್ತು ಹುರುಪೆಯನ್ನು ವೈಜ್ಞಾನಿಕವಾಗಿ ಸಂಸ್ಕರಿಸಿ ಹಲ್ಲುಗಳ ಪುನರ್ ನಿರ್ಮಾಣ ಹಾಗೂ…