Advertisement
MIRROR FOCUS

ಹವಾಮಾನ ವೈಪರೀತ್ಯ | ಪ್ರಕೃತಿಯ ಮೇಲಿರುವ ಎಲ್ಲಾ ಜೀವ ಜಂತುಗಳ ಮೇಲೆ ಹೊಡೆತ | ಬಿಸಿಲ ಬೇಗೆಗೆ ಪ್ರಾಣಿ-ಪಕ್ಷಿ-ಜಲಚರಗಳೂ ಸಂಕಷ್ಟ |

Share

ಈ ಬಾರಿಯ ಹವಾಮಾನ ವೈಪರೀತ್ಯ (Climate change) ಹಾಗೂ ಬರಗಾಲ(Drought) ಕೇವಲ ಮನುಷ್ಯರಿಗೆ ಮಾತ್ರವಲ್ಲ. ಪ್ರಕೃತಿಯಲ್ಲಿ(Nature) ಬದುಕುವ ಪ್ರತಿ ಪ್ರಾಣಿ- ಪಕ್ಷಿಗಳು(Animal-Birds), ಜಲಚರಗಳು(Aquatic), ಕ್ರೀಮಿ ಕೀಟಗಳಿಗೂ(Insects) ಕಾಡುತ್ತಿದೆ. ದಿನದಿಂದ ದಿನಕ್ಕೆ ಬಿಸಿಲ ಧಗೆ(Heat) ಏರುತ್ತಿದೆ. ತಾಪಮಾನ(Temperature) 40 ಡಿಗ್ರಿ ದಾಟುತ್ತಿದೆ. ಕರಾವಳಿಯ ಅನೇಕ ಭಾಗಗಳಲ್ಲಿ ಕೆಂಪಿರುವೆ ಬಿಸಿಲ ತಾಪ ತಾಳಲಾರದೆ ಸಾಯುತ್ತಿರುವ ದೃಶ್ಯ ಕಂಡುಬರುತ್ತಿದೆ. ಈಗ ಬಿಸಿಲಿನ ತಾಪಮಾನ ಜಲಚರಕ್ಕೂ ಕಂಟಕವಾಗಿದೆ. ಅರಮನೆ ನಗರಿಯ(Palace city) ಕುಕ್ಕರಹಳ್ಳಿ ಕೆರೆಯಲ್ಲಿರುವ ಮೀನು(Fish) ಸಾಲು ಸಾಲಾಗಿ ಸಾವನ್ನಪ್ಪುತ್ತಿವೆ. ಸತ್ತು ನೀರಿನ ಮೇಲೆ ತೇಲಾಡುತ್ತಿರುವುದನ್ನು ಕಂಡು ಜನ ಆತಂಕ ವ್ಯಕ್ತಪಡಿಸಿದ್ದಾರೆ.

Advertisement
Advertisement

ಮೈಸೂರಿನಲ್ಲಿಯೂ(Mysore) ಗರಿಷ್ಠ ಉಷ್ಣಾಂಶ ದಾಖಲಾಗುತ್ತಿದ್ದು, ಬಿಸಿಲಿನ ಬೇಗೆಯಿಂದ ಜಲಚರಗಳು ತತ್ತರಿಸುತ್ತಿವೆ. ಪ್ರತಿದಿನ ಹತ್ತಾರು ಮೀನುಗಳು ಸಾವನ್ನಪ್ಪುತ್ತಿದೆ. ಅವುಗಳ ಮೃತದೇಹಗಳು ಕೆರೆ ದಡಕ್ಕೆ ತೇಲಿಕೊಂಡು ಬರುತ್ತಿವೆ. ಕಳೆದ ಎರಡು ದಿನಗಳಿಂದ ಕುಕ್ಕರಹಳ್ಳಿಕೆರೆಯಲ್ಲಿ ಮೃತಪಡುತ್ತಿರುವ ಮೀನುಗಳ ಸಂಖ್ಯೆ ಹೆಚ್ಚಾಗುತ್ತಿದೆ.…….ಮುಂದೆ ಓದಿ…..

ಭಾನುವಾರ ಮುಂಜಾನೆ ಕುಕ್ಕರಹಳ್ಳಿಕೆರೆಗೆ ಬಂದ ವಾಯುವಿಹಾರಿಗಳಿಗೆ ಕೆರೆಯಲ್ಲಿ ಸತ್ತು ತೇಲುತ್ತಿರುವ ಮೀನುಗಳು ಕಂಡಿವೆ. ಅಲ್ಲದೆ, ಸತ್ತ ಮೀನುಗಳು ಕೊಳೆಯಲಾರಂಭಿಸಿದ್ದು, ಕೆರೆ ಪರಿಸರ ಹದಗೆಡುತ್ತಿದೆ ಎಂದು ʼಕನ್ನಡಪ್ರಭʼ ವರದಿ ಮಾಡಿದೆ. ಇನ್ನು ಮೃತ ಮೀನುಗಳನ್ನು ತೋಟಗಾರಿಕಾ ವಿಭಾಗದ ಸಿಬ್ಬಂದಿಗಳು ತೆರವುಗೊಳಸಿದ್ದಾರೆ. ಆದರೆ, ಈ ಬಾರಿಯ ರಣ ಬಿಸಿಲು ಜಲಚರಗಳ ಜೀವಕ್ಕೂ ಕಂಟಕವಾಗುತ್ತಿರುವುದು ಆತಂಕ ಮೂಡಿಸಿದೆ.

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಅಡಿಕೆಯ ಬಗ್ಗೆ ಹೊಸ ಅಧ್ಯಯನ | ಕ್ಯಾನ್ಸರ್‌ ಅಷ್ಟೇ ಅಲ್ಲ… ಹೃದಯ ರೋಗ ಮತ್ತು ಮೆಟಾಬಾಲಿಕ್ ಸಮಸ್ಯೆಯೂ ಇದೆ…!

ಅಡಿಕೆ ಜಗಿಯುವುದು ಕೇವಲ ಸಾಂಪ್ರದಾಯಿಕ ಅಭ್ಯಾಸ ಮಾತ್ರವಲ್ಲ,  ಅದು ಗಂಭೀರ ಆರೋಗ್ಯ ಅಪಾಯಗಳಿಗೆ…

11 hours ago

ರಾಜ್ಯದಲ್ಲಿ ಹೆಚ್ಚುತ್ತಿರುವ ಮಾನವ–ವನ್ಯಜೀವಿ ಸಂಘರ್ಷ | ಶಾಶ್ವತ ಪರಿಹಾರಕ್ಕೆ ಕೇಂದ್ರದ ಗಮನ ಸೆಳೆದು ಕುಮಾರಸ್ವಾಮಿ ಮನವಿ

ರಾಜ್ಯದಲ್ಲಿ ಹೆಚ್ಚುತ್ತಿರುವ ಮಾನವ–ವನ್ಯಜೀವಿ ಸಂಘರ್ಷ ಹಾಗೂ ಆನೆ ದಾಳಿಗೆ ಶಾಶ್ವತ ಪರಿಹಾರ ಕಂಡುಕೊಳ್ಳಲು…

12 hours ago

ಮೆಕ್ಕೆಜೋಳ ಖರೀದಿ ಕೇಂದ್ರಗಳಿಂದ 3,412 ರೈತರಿಗೆ ಲಾಭ

ದಾವಣಗೆರೆ ಜಿಲ್ಲೆಯಲ್ಲಿ 5 ಮೆಕ್ಕೆಜೋಳ ಖರೀದಿ ಕೇಂದ್ರಗಳಿಂದ 3,412 ರೈತರು 87,258 ಕ್ವಿಂಟಲ್…

12 hours ago

ಜಲಜೀವನ್ ಮಿಷನ್ ವೇಗಕ್ಕೆ ಕಟ್ಟುನಿಟ್ಟಿನ ಗಡಿ : ಉಳಿದ ಕಾಮಗಾರಿಗಳು ತ್ವರಿತ ಪೂರ್ಣಗೊಳಿಸಿ

ಜಲಜೀವನ್‌ ಮಿಷನ್ ಯೋಜನೆಯ ಕಾಮಗಾರಿಗಳನ್ನು ಆದಷ್ಟು ಶೀಘ್ರ ಪೂರ್ಣಗೊಳಿಸುವಂತೆ ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್…

12 hours ago

ಕೃಷಿಯ ಮೌನ ಆಕ್ರಂದನ | ಕಾಡಂಚಿನ ಅಡಿಕೆ ತೋಟಗಳ ಅಳಲು

ಕರಾವಳಿ ಕರ್ನಾಟಕದ ಅಡಿಕೆ ತೋಟಗಳು ಕಾಡುಪ್ರಾಣಿಗಳ ಹಾವಳಿಯಿಂದ ಭಾರೀ ನಷ್ಟ ಅನುಭವಿಸುತ್ತಿವೆ. ಮಾನವ–ವನ್ಯಜೀವಿ…

12 hours ago

ಜಾಗತಿಕ ಒತ್ತಡ – ಗ್ರಾಮೀಣ ಜೀವನೋಪಾಯ | ಅಡಿಕೆ ಕುರಿತ ನಿಜವಾದ ಚರ್ಚೆ ಈಗ ಆರಂಭವಾಗಬೇಕು

ಭಾರತವು ಜಗತ್ತಿನ ಅತಿದೊಡ್ಡ ಅಡಿಕೆ ಉತ್ಪಾದಕ ರಾಷ್ಟ್ರವಾಗಿದ್ದು, ಜಾಗತಿಕ ಉತ್ಪಾದನೆಯ ಸುಮಾರು 63…

13 hours ago