Advertisement
MIRROR FOCUS

ಹವಾಮಾನ ವೈಪರೀತ್ಯ | ಪ್ರಕೃತಿಯ ಮೇಲಿರುವ ಎಲ್ಲಾ ಜೀವ ಜಂತುಗಳ ಮೇಲೆ ಹೊಡೆತ | ಬಿಸಿಲ ಬೇಗೆಗೆ ಪ್ರಾಣಿ-ಪಕ್ಷಿ-ಜಲಚರಗಳೂ ಸಂಕಷ್ಟ |

Share

ಈ ಬಾರಿಯ ಹವಾಮಾನ ವೈಪರೀತ್ಯ (Climate change) ಹಾಗೂ ಬರಗಾಲ(Drought) ಕೇವಲ ಮನುಷ್ಯರಿಗೆ ಮಾತ್ರವಲ್ಲ. ಪ್ರಕೃತಿಯಲ್ಲಿ(Nature) ಬದುಕುವ ಪ್ರತಿ ಪ್ರಾಣಿ- ಪಕ್ಷಿಗಳು(Animal-Birds), ಜಲಚರಗಳು(Aquatic), ಕ್ರೀಮಿ ಕೀಟಗಳಿಗೂ(Insects) ಕಾಡುತ್ತಿದೆ. ದಿನದಿಂದ ದಿನಕ್ಕೆ ಬಿಸಿಲ ಧಗೆ(Heat) ಏರುತ್ತಿದೆ. ತಾಪಮಾನ(Temperature) 40 ಡಿಗ್ರಿ ದಾಟುತ್ತಿದೆ. ಕರಾವಳಿಯ ಅನೇಕ ಭಾಗಗಳಲ್ಲಿ ಕೆಂಪಿರುವೆ ಬಿಸಿಲ ತಾಪ ತಾಳಲಾರದೆ ಸಾಯುತ್ತಿರುವ ದೃಶ್ಯ ಕಂಡುಬರುತ್ತಿದೆ. ಈಗ ಬಿಸಿಲಿನ ತಾಪಮಾನ ಜಲಚರಕ್ಕೂ ಕಂಟಕವಾಗಿದೆ. ಅರಮನೆ ನಗರಿಯ(Palace city) ಕುಕ್ಕರಹಳ್ಳಿ ಕೆರೆಯಲ್ಲಿರುವ ಮೀನು(Fish) ಸಾಲು ಸಾಲಾಗಿ ಸಾವನ್ನಪ್ಪುತ್ತಿವೆ. ಸತ್ತು ನೀರಿನ ಮೇಲೆ ತೇಲಾಡುತ್ತಿರುವುದನ್ನು ಕಂಡು ಜನ ಆತಂಕ ವ್ಯಕ್ತಪಡಿಸಿದ್ದಾರೆ.

ಮೈಸೂರಿನಲ್ಲಿಯೂ(Mysore) ಗರಿಷ್ಠ ಉಷ್ಣಾಂಶ ದಾಖಲಾಗುತ್ತಿದ್ದು, ಬಿಸಿಲಿನ ಬೇಗೆಯಿಂದ ಜಲಚರಗಳು ತತ್ತರಿಸುತ್ತಿವೆ. ಪ್ರತಿದಿನ ಹತ್ತಾರು ಮೀನುಗಳು ಸಾವನ್ನಪ್ಪುತ್ತಿದೆ. ಅವುಗಳ ಮೃತದೇಹಗಳು ಕೆರೆ ದಡಕ್ಕೆ ತೇಲಿಕೊಂಡು ಬರುತ್ತಿವೆ. ಕಳೆದ ಎರಡು ದಿನಗಳಿಂದ ಕುಕ್ಕರಹಳ್ಳಿಕೆರೆಯಲ್ಲಿ ಮೃತಪಡುತ್ತಿರುವ ಮೀನುಗಳ ಸಂಖ್ಯೆ ಹೆಚ್ಚಾಗುತ್ತಿದೆ.…….ಮುಂದೆ ಓದಿ…..

ಭಾನುವಾರ ಮುಂಜಾನೆ ಕುಕ್ಕರಹಳ್ಳಿಕೆರೆಗೆ ಬಂದ ವಾಯುವಿಹಾರಿಗಳಿಗೆ ಕೆರೆಯಲ್ಲಿ ಸತ್ತು ತೇಲುತ್ತಿರುವ ಮೀನುಗಳು ಕಂಡಿವೆ. ಅಲ್ಲದೆ, ಸತ್ತ ಮೀನುಗಳು ಕೊಳೆಯಲಾರಂಭಿಸಿದ್ದು, ಕೆರೆ ಪರಿಸರ ಹದಗೆಡುತ್ತಿದೆ ಎಂದು ʼಕನ್ನಡಪ್ರಭʼ ವರದಿ ಮಾಡಿದೆ. ಇನ್ನು ಮೃತ ಮೀನುಗಳನ್ನು ತೋಟಗಾರಿಕಾ ವಿಭಾಗದ ಸಿಬ್ಬಂದಿಗಳು ತೆರವುಗೊಳಸಿದ್ದಾರೆ. ಆದರೆ, ಈ ಬಾರಿಯ ರಣ ಬಿಸಿಲು ಜಲಚರಗಳ ಜೀವಕ್ಕೂ ಕಂಟಕವಾಗುತ್ತಿರುವುದು ಆತಂಕ ಮೂಡಿಸಿದೆ.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಹವಾಮಾನ ವರದಿ | 10-07-2026 | ಕರ್ನಾಟಕದಲ್ಲಿ ಮುಂಗಾರಿಗೆ ತಾತ್ಕಾಲಿಕ ವಿರಾಮ..! ಕರಾವಳಿಯಲ್ಲಿ ಅಲ್ಲಲ್ಲಿ ಸಾಧಾರಣ ಮಳೆ, ಒಳನಾಡಿನಲ್ಲಿ ಬಿಸಿಲು ಹೆಚ್ಚಳ

ಕರ್ನಾಟಕದಲ್ಲಿ ಮುಂಗಾರು ತಾತ್ಕಾಲಿಕ ವಿರಾಮ ಪಡೆದಿದ್ದು, ಕರಾವಳಿ ಹಾಗೂ ಮಲೆನಾಡಿನ ಕೆಲವೆಡೆ ಮಾತ್ರ…

16 hours ago

ನೆಟ್‌ವರ್ಕ್ ಇಲ್ಲದಿದ್ದರೂ ಕರೆ ಮಾಡಬಹುದು…! ₹1.34 ಲಕ್ಷಕ್ಕೆ BSNL ಸ್ಯಾಟಲೈಟ್ ಫೋನ್ ಬಿಡುಗಡೆ

ಮೊಬೈಲ್ ನೆಟ್‌ವರ್ಕ್ ಇಲ್ಲದ ಪ್ರದೇಶಗಳಲ್ಲಿಯೂ ಸಂಪರ್ಕಕ್ಕಾಗಿ BSNL ₹1.34 ಲಕ್ಷದ ಸ್ಯಾಟಲೈಟ್ ಫೋನ್…

21 hours ago

ಗುಟ್ಕಾ ಪ್ರಕರಣಗಳಲ್ಲಿ ಎಂಸಿಒಸಿಎ ಜಾರಿ ಪ್ರಶ್ನಿಸಿದ ಬಾಂಬೆ ಹೈಕೋರ್ಟ್ – ರಾಜ್ಯ ಸರ್ಕಾರದಿಂದ ಸ್ಪಷ್ಟನೆ ಕೋರಿದ ಕೋರ್ಟ್

ಗುಟ್ಕಾ ಪ್ರಕರಣಗಳಲ್ಲಿ ಎಂಸಿಒಸಿಎ ಜಾರಿಗೆ ಸಂಬಂಧಿಸಿದ ಎಫ್‌ಡಿಎ ಕ್ರಮವನ್ನು ಬಾಂಬೆ ಹೈಕೋರ್ಟ್ ಪ್ರಶ್ನಿಸಿದೆ.…

1 day ago

ಗುಟ್ಕಾ ಜಾಲಕ್ಕೆ ಮಹಾರಾಷ್ಟ್ರದ ಭಾರೀ ಹೊಡೆತ..! 700ಕ್ಕೂ ಹೆಚ್ಚು ಎಫ್‌ಐಆರ್‌ ದಾಖಲು – ಕಳಪೆ ಅಡಿಕೆ ಸಾಗಾಟವೂ ಈ ವ್ಯಾಪ್ತಿಯಲ್ಲಿ..!

ಮಹಾರಾಷ್ಟ್ರದಲ್ಲಿ ಗುಟ್ಕಾ ಜಾಲದ ವಿರುದ್ಧ ಎಂಸಿಒಸಿಎ ಅಡಿ ಕಠಿಣ ಕ್ರಮಕ್ಕೆ ರಾಜ್ಯ ಸರ್ಕಾರ…

1 day ago

ಮಂಗಳೂರಿನಲ್ಲಿ ಉದ್ಯೋಗ ಮೇಳ – ಜುಲೈ 14ರಂದು ನೇರ ಸಂದರ್ಶನ – ಬ್ಯಾಂಕ್‌ನಿಂದ ಟೆಕ್ನಿಕಲ್‌ ಹುದ್ದೆಗಳವರೆಗೆ ಅವಕಾಶ

ಜುಲೈ 14ರಂದು ಮಂಗಳೂರಿನಲ್ಲಿ ವಿವಿಧ ಖಾಸಗಿ ಸಂಸ್ಥೆಗಳ ನೇಮಕಾತಿಗಾಗಿ ನೇರ ಸಂದರ್ಶನ ನಡೆಯಲಿದೆ.…

1 day ago

ಆಘಾತಕಾರಿ ವರದಿ- ಮೇ-ಜೂನ್‌ನಲ್ಲಿ ಭಾರತದ 10 ಮಕ್ಕಳಲ್ಲಿ 7 ಮಂದಿ ಶಾಲೆ ತಪ್ಪಿಸಿದರು..!

ಮೇ-ಜೂನ್ ತಿಂಗಳಲ್ಲಿ ತೀವ್ರ ಬಿಸಿಲಿನ ಕಾರಣದಿಂದ ಭಾರತದ ಸುಮಾರು 70% ಮಕ್ಕಳು ಶಾಲೆ…

2 days ago