ಈ ಬಾರಿಯ ಹವಾಮಾನ ವೈಪರೀತ್ಯ (Climate change) ಹಾಗೂ ಬರಗಾಲ(Drought) ಕೇವಲ ಮನುಷ್ಯರಿಗೆ ಮಾತ್ರವಲ್ಲ. ಪ್ರಕೃತಿಯಲ್ಲಿ(Nature) ಬದುಕುವ ಪ್ರತಿ ಪ್ರಾಣಿ- ಪಕ್ಷಿಗಳು(Animal-Birds), ಜಲಚರಗಳು(Aquatic), ಕ್ರೀಮಿ ಕೀಟಗಳಿಗೂ(Insects) ಕಾಡುತ್ತಿದೆ. ದಿನದಿಂದ ದಿನಕ್ಕೆ ಬಿಸಿಲ ಧಗೆ(Heat) ಏರುತ್ತಿದೆ. ತಾಪಮಾನ(Temperature) 40 ಡಿಗ್ರಿ ದಾಟುತ್ತಿದೆ. ಕರಾವಳಿಯ ಅನೇಕ ಭಾಗಗಳಲ್ಲಿ ಕೆಂಪಿರುವೆ ಬಿಸಿಲ ತಾಪ ತಾಳಲಾರದೆ ಸಾಯುತ್ತಿರುವ ದೃಶ್ಯ ಕಂಡುಬರುತ್ತಿದೆ. ಈಗ ಬಿಸಿಲಿನ ತಾಪಮಾನ ಜಲಚರಕ್ಕೂ ಕಂಟಕವಾಗಿದೆ. ಅರಮನೆ ನಗರಿಯ(Palace city) ಕುಕ್ಕರಹಳ್ಳಿ ಕೆರೆಯಲ್ಲಿರುವ ಮೀನು(Fish) ಸಾಲು ಸಾಲಾಗಿ ಸಾವನ್ನಪ್ಪುತ್ತಿವೆ. ಸತ್ತು ನೀರಿನ ಮೇಲೆ ತೇಲಾಡುತ್ತಿರುವುದನ್ನು ಕಂಡು ಜನ ಆತಂಕ ವ್ಯಕ್ತಪಡಿಸಿದ್ದಾರೆ.
ಮೈಸೂರಿನಲ್ಲಿಯೂ(Mysore) ಗರಿಷ್ಠ ಉಷ್ಣಾಂಶ ದಾಖಲಾಗುತ್ತಿದ್ದು, ಬಿಸಿಲಿನ ಬೇಗೆಯಿಂದ ಜಲಚರಗಳು ತತ್ತರಿಸುತ್ತಿವೆ. ಪ್ರತಿದಿನ ಹತ್ತಾರು ಮೀನುಗಳು ಸಾವನ್ನಪ್ಪುತ್ತಿದೆ. ಅವುಗಳ ಮೃತದೇಹಗಳು ಕೆರೆ ದಡಕ್ಕೆ ತೇಲಿಕೊಂಡು ಬರುತ್ತಿವೆ. ಕಳೆದ ಎರಡು ದಿನಗಳಿಂದ ಕುಕ್ಕರಹಳ್ಳಿಕೆರೆಯಲ್ಲಿ ಮೃತಪಡುತ್ತಿರುವ ಮೀನುಗಳ ಸಂಖ್ಯೆ ಹೆಚ್ಚಾಗುತ್ತಿದೆ.…….ಮುಂದೆ ಓದಿ…..
ಭಾನುವಾರ ಮುಂಜಾನೆ ಕುಕ್ಕರಹಳ್ಳಿಕೆರೆಗೆ ಬಂದ ವಾಯುವಿಹಾರಿಗಳಿಗೆ ಕೆರೆಯಲ್ಲಿ ಸತ್ತು ತೇಲುತ್ತಿರುವ ಮೀನುಗಳು ಕಂಡಿವೆ. ಅಲ್ಲದೆ, ಸತ್ತ ಮೀನುಗಳು ಕೊಳೆಯಲಾರಂಭಿಸಿದ್ದು, ಕೆರೆ ಪರಿಸರ ಹದಗೆಡುತ್ತಿದೆ ಎಂದು ʼಕನ್ನಡಪ್ರಭʼ ವರದಿ ಮಾಡಿದೆ. ಇನ್ನು ಮೃತ ಮೀನುಗಳನ್ನು ತೋಟಗಾರಿಕಾ ವಿಭಾಗದ ಸಿಬ್ಬಂದಿಗಳು ತೆರವುಗೊಳಸಿದ್ದಾರೆ. ಆದರೆ, ಈ ಬಾರಿಯ ರಣ ಬಿಸಿಲು ಜಲಚರಗಳ ಜೀವಕ್ಕೂ ಕಂಟಕವಾಗುತ್ತಿರುವುದು ಆತಂಕ ಮೂಡಿಸಿದೆ.
ಭಾರತದಲ್ಲಿ ಹೆಚ್ಚುತ್ತಿರುವ ಅತಿವೃಷ್ಟಿ, ಬರ ಮತ್ತು ಉಷ್ಣ ಅಲೆಗಳಂತಹ ತೀವ್ರ ಹವಾಮಾನ ಘಟನೆಗಳಿಗೆ…
ಗಂಜಿಮಠದ 104 ಎಕರೆ ಪ್ಲಾಸ್ಟಿಕ್ ಪಾರ್ಕ್ ಯೋಜನೆಗೆ ಮತ್ತೆ ವೇಗ ಸಿಕ್ಕಿದ್ದು, ಸಂಸದ…
18-25 ವರ್ಷ ವಯಸ್ಸಿನ Gen Z ಯುವಕರನ್ನು ಸೆಳೆಯಲು ಬಿಜೆಪಿ ‘ತರುಣ ಮೋರ್ಚಾ’…
ವಿಯೆಟ್ನಾಂನಲ್ಲಿ ಅಡಿಕೆ ಬೆಲೆ ದಾಖಲೆಯ ಮಟ್ಟದಿಂದ ಭಾರೀ ಕುಸಿತ ಕಂಡಿದ್ದು, ಚೀನಾದ ಖರೀದಿ…
ಕರ್ನಾಟಕದಲ್ಲಿ ಮುಂಗಾರು ಇನ್ನೂ ಪೂರ್ಣ ಪ್ರಮಾಣದಲ್ಲಿ ಚುರುಕುಗೊಂಡಿಲ್ಲ. ಎಲ್ ನಿನೋ ಪ್ರಭಾವದಿಂದ ಮಳೆಯ…
2026ರ ಖಾರಿಫ್ ಹಂಗಾಮಿಗೆ ಸಿದ್ಧತೆ ಪರಿಶೀಲಿಸಿದ ಕೇಂದ್ರ ಕೃಷಿ ಸಚಿವ ಶಿವರಾಜ್ ಸಿಂಗ್…