Advertisement
ಸುದ್ದಿಗಳು

ಮಾಡೆಲಿಂಗ್ ಜಗತ್ತಿಗೆ ಪ್ರಪ್ರಥಮ ಬಾರಿಗೆ ಸ್ಥಳೀಯ ಸುಂದರಿಯರನ್ನು ನೂತನ ರೂಪದರ್ಶಿಗಳಾಗಿ ಪರಿಚಯಿಸುವ – ಫೇಸಸ್ ಆಫ್ ಮುಳಿಯ

Share

ಮುಳಿಯ ಚಿನ್ನಾಭರಣ ಮಳಿಗೆ ಕಳೆದ 80 ವರ್ಷಗಳಿಂದ ನಂಬಿಕೆಯ ಆಭರಣ ಮಳಿಗೆಯಾಗಿರುತ್ತದೆ.
ಹಾಗೆಯೇ ಸ್ಥಳೀಯರಿಗೆ ಅವಕಾಶಕ್ಕಾಗಿ ಗಾನರಥ ಗಾಯನ ಸ್ಪರ್ಧೆ, ಕೃಷಿಯನ್ನುಉದ್ಯಮವಾಗಿ ನೋಡಬೇಕು ಅನ್ನುವ ಕೃಷಿಕೋದ್ಯಮ ಸೆಮಿನಾರ್, ಕಾಡುಬೆಳೆಸಲು ಲಕ್ಷಕ್ಕೂ ಮಿಕ್ಕಿ ಸೀಡ್ ಬಾಲ್ ಎಸೆತ, ದೇಶದಲ್ಲೇ ಮೊದಲ ಬಾರಿ ಸ್ವಚ್ಛ ಪುತ್ತೂರು ಕಾರ್ಯಕ್ರಮ ಹೀಗೆ ಸದಾ ಹಲವು ಹೊಸತನವನ್ನು ಪರಿಚಯಿಸುವ ಕೆಲಸ ಮಾಡಿಕೊಂಡು ಬಂದಿದೆ. ಈ ಹೊಸತನಕ್ಕೆ ಈಗ ಇನ್ನೊಂದು ಆಯಾಮವೇ ಫೇಸಸ್ ಆಫ್ ಮುಳಿಯ.…..ಮುಂದೆ ಓದಿ….

ನಮ್ಮ ಶಾಖೆಗಳಿರುವ ಕೊಡಗು ಪುತ್ತೂರು ಬೆಳ್ತಂಗಡಿ ಬೆಂಗಳೂರು ಸುತ್ತ ಇರುವ ಮಾಡೆಲಿಂಗ್ ಆಸಕ್ತ ರೂಪಸಿಯರನ್ನು ಆಯ್ಕೆ ಮಾಡಿ , ಅವರಿಗೆ ನಮ್ಮ ವೈವಿಧ್ಯಮಯ ಆಭರಣಗಳನ್ನು ತೊಡಿಸಿ ವೃತ್ತಿಪರ ಫೋಟೋಗಳನ್ನು ಮತ್ತು ವಿಡಿಯೋಗಳನ್ನು ಶೂಟಿಂಗ್ ಮಾಡಿ ಅದರಲ್ಲಿ ಉತ್ತಮವಾದದ್ದನ್ನು ಮತ್ತೆ ಪುನಃ ಆಯ್ಕೆ ಮಾಡಿ ಮುಳಿಯ ಮಾಡೆಲ್ ಗಳಾಗಿ ಪರಿಚಯಿಸುವ ಮೂಲಕ ಮಾಡೇಲಿಂಗ್ ಉದ್ಯಮದಲ್ಲಿ ಅವರನ್ನು ಬೆಳೆಸುವುದು ಉದ್ದೇಶವಾಗಿದೆ.

Advertisement

ಈ ವಿನೂತನ ಕಾರ್ಯಕ್ರಮದಲ್ಲಿ 800 ಕೂ ಅಧಿಕ ಯುವಕ- ಯುವತಿಯರು ಅರ್ಜಿ ಸಲ್ಲಿಸಿದ್ದರು. ಅದರಲ್ಲಿ 150 ಜನರನ್ನು ನಾವು ಈಗಾಗಲೇ ಆಯ್ಕೆ ಮಾಡಿ ಅವರ ಪ್ರೊಫೈಲ್ ಶೂಟ್ ಮಾಡಿ ಆಗಿರುತ್ತದೆ. ಇವು ನಮ್ಮ ಯೂಟ್ಯೂಬ್ ಚಾನೆಲ್ ಗಳಲ್ಲಿ ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂಗಳಲ್ಲಿ ಈಗಾಗಲೇ ಜನ ಮೆಚ್ಚುಗೆ ಪಡೆದಿದೆ.ಇವರಲ್ಲಿ ಹಲವಾರು ರೂಪದರ್ಶಿಗಳು ನಮ್ಮ ಸೋಶಿಯಲ್ ಮೀಡಿಯಾ ಖಾತೆಯಲ್ಲಿ ರೀಲ್ ಗಳ ಮೂಲಕ ಜನಪ್ರಿಯರಾಗಿ ಲೈಕ್ ಗಳನ್ನು ಪಡೆದಿದ್ದಾರೆ.

ಫೇಸಸ್ ಆಫ್ ಮುಳಿಯ ಬಗ್ಗೆ ಮಾತನಾಡಿದ ಮಾನಸ ಮಾಡೆಲ್ ” ಇದು ನನ್ನಗೆ ಮಾಡೆಲಿಂಗ್ ಕ್ಷೇತ್ರಕ್ಕೆ ಹೆಜ್ಜೆ ಇಡುವಲ್ಲಿ ತುಂಬಾ ಸಹಾಯಕಾರಿಯಾಗಿದೆ” ಎನ್ನುತ್ತಾರೆ.

Advertisement

“ಮುಳಿಯದವರ ಈ ಕಾರ್ಯಕ್ರಮ ನನಗೆ ಮಾಡೆಲಿಂಗ್ ಮಾಡುವ ಕಾನ್ಫಿಡೆಂಟ್ ನೀಡಿದೆ” ಎನ್ನುತ್ತಾರೆ ಇನ್ನೋರ್ವ ರೂಪದರ್ಶಿ ಮಹಾಲಸ ಪೈ.

“ನನ್ನ ಮಗಳು ಫೇಸಸ್ ಆಫ್ ಮುಳಿಯ ಚಿನ್ನಾಭರಣಗಳೊಂದಿಗೆ ತುಂಬಾ ಚೆನ್ನಾಗಿ ಕಾಣುತ್ತಾಳೆ” ಎನ್ನುತ್ತಾರೆ ಆಮೇಚೂರ್ ಮಾಡೆಲ್ ಅಮ್ಮ ಶ್ರೀಮತಿ, ಅನುರಾಧ ಪುತ್ತೂರು.

Advertisement

ಫೇಸಸ್ ಆಫ್ ಮುಳಿಯ ಒಂದು ವಿನೂತನ ಪ್ರಯೋಗವಾಗಿದ್ದು ಮಹಿಳೆಯರ ಸೌಂದರ್ಯ ಪ್ರಜ್ಞೆಯನ್ನು ಆಭರಣಗಳೊಂದಿಗೆ ಸಂಭ್ರಮಿಸುವ ಉದ್ದೇಶದಾಗಿದೆ. ಇದು ಈಗಾಗಲೇ ಜನಪ್ರಿಯವೂ ಆಗಿದೆ. ಇಲ್ಲಿ ಆಯ್ಕೆಯಾದ 15- 20 ಮಾಡೆಲ್ ಗಳನ್ನ ಸಿನಿಮಾ ಪತ್ರಿಕೆಗಳ ಮೂಲಕ ,ನಮ್ಮ ಜಾಹೀರಾತು ಮೂಲಕ, ಮುಳಿಯ ಸೋಷಿಯಲ್ ಮೀಡಿಯಾ ಮೂಲಕ ಜಗತ್ತಿಗೆ ಪರಿಚಯಿಸಲಾಗುವುದು. ಇದರಿಂದಾಗಿ ಅವರ ಮುಂದಿನ ಮೋಡಲಿಂಗ್ ಅವಕಾಶ ಉಜ್ವಲ ಹೊಸ ಅವಕಾಶದ ಕಡೆಗೆ ಮುಂದುವರೆಯಲಿ ಎನ್ನುವುದೇ ನಮ್ಮ ಉದ್ದೇಶ ಇದರಲ್ಲಿ ಭಾಗವಹಿಸಿದ ಹೆಚ್ಚಿನವರ ಭಾವಚಿತ್ರಗಳು ಅತ್ಯುತ್ತಮವಾಗಿ ಮೂಡಿಬಂದಿದೆ .

ಮುಂದಿನ ಸಪ್ಟೆಂಬರ್ ಮತ್ತು ಅಕ್ಟೋಬರ್ ನಲ್ಲಿ ಮುಳಿಯ ಮಳಿಗೆಯಲ್ಲಿ ನಡೆಯುವ ಡೈಮಂಡ್ ಫೆಸ್ಟ್ ಮತ್ತು ಚಿನ್ನೋತ್ಸವ ಕಾರ್ಯಕ್ರಮದ ಸಂದರ್ಭದಲ್ಲಿ ಫೇಸಸ್ ಆಫ್ ಮುಳಿಯ ದಲ್ಲಿ ಆಯ್ಕೆಯಾದವರನ್ನು ಆಹ್ವಾನಿಸಿ ಫ್ಯಾಶನ್ ಶೋ ಮಾಡಲಾಗುವುದು.

Advertisement

“ಒಟ್ಟು 150 ಫೋಟೋಗಳಲ್ಲಿ 20 ಜನರನ್ನು ಆಯ್ಕೆ ಮಾಡಲಾಗುವುದು .ಈ ಆಯ್ಕೆಯನ್ನು ಮಾಡೆಲ್ ಕ್ಷೇತ್ರದ ನುರಿತ ಅನುಭವಿಗಳ ತಂಡವನ್ನು ರಚಿಸಿ ಅಂತಿಮವಾಗಿ ಆಯ್ಕೆ ಮಾಡಲಾಗುವುದು” ಎಂದು ಸಂಸ್ಥೆಯ ಪ್ರಕಟಣೆ ತಿಳಿಸಿದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹಲಸು ಈಗ ಕೇವಲ ಹಣ್ಣು ಅಲ್ಲ… ಸೂಪರ್ ಫುಡ್..!‌ ಹಲಸಿನ ಹಣ್ಣಿನ ಔಷಧೀಯ ಗುಣಗಳಿಗೆ ಕೇರಳದಲ್ಲಿ ಪ್ರಚಾರ ಅಭಿಯಾನ

ಒಂದು ಕಾಲದಲ್ಲಿ ಬಡವರ ಹಣ್ಣು ಎಂದೇ ಕರೆಯಲ್ಪಟ್ಟ ಹಲಸು ಈಗ ಆರೋಗ್ಯಕರ ಆಹಾರ…

20 hours ago

ಧರ್ಮಸ್ಥಳದಲ್ಲಿ ವಿಜಯೇಂದ್ರ ಪ್ರಾರ್ಥನೆ: “ರೈತರಿಗೆ ಉತ್ತಮ ಬೆಲೆ, ಬಿಜೆಪಿ ಸರ್ಕಾರ ಮತ್ತೆ ಅಧಿಕಾರಕ್ಕೆ ಬರಲಿ”

ಧರ್ಮಸ್ಥಳದಲ್ಲಿ ವಿಶೇಷ ಪೂಜೆ ಸಲ್ಲಿಸಿದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ, ರೈತರಿಗೆ ಉತ್ತಮ…

20 hours ago

ಅಡಿಕೆ ಕನಿಷ್ಠ ಆಮದು ಬೆಲೆ (MIP) ಪರಿಷ್ಕರಣೆ – ರೈತರ ಹಿತಾಸಕ್ತಿಗೆ ಕೇಂದ್ರ ಸರ್ಕಾರದ ತ್ವರಿತ ನೀತಿ ನಿರ್ಧಾರ ಅನಿವಾರ್ಯ

ಅಡಿಕೆ ಉತ್ಪಾದನಾ ವೆಚ್ಚ ಭಾರೀ ಏರಿಕೆಯಾಗಿರುವ ಹಿನ್ನೆಲೆಯಲ್ಲಿ ಕನಿಷ್ಠ ಆಮದು ಬೆಲೆ (MIP)ಯನ್ನು…

2 days ago

ಮುಂಗಾರು ಬೆಳೆ ವಿಮೆ ನೋಂದಣಿಗೆ ಆಗಸ್ಟ್‌ 14 ಕೊನೆಯ ದಿನ – ಭತ್ತ ಬೆಳೆಗಾರರು ತಪ್ಪದೇ ಹೆಸರು ನೋಂದಾಯಿಸಿ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮುಂಗಾರು ಭತ್ತದ ಬೆಳೆ ವಿಮೆ ನೋಂದಣಿ ಆರಂಭವಾಗಿದ್ದು, ಆಗಸ್ಟ್‌…

2 days ago

ಎಲ್ ನಿನೋ ಎಚ್ಚರಿಕೆ – ದೇಶದಲ್ಲಿ 43% ಮಳೆ ಕೊರತೆ, ಕರ್ನಾಟಕ ಸೇರಿ 12 ರಾಜ್ಯಗಳ 315 ಜಿಲ್ಲೆಗಳಿಗೆ ಕೇಂದ್ರದ ವಿಶೇಷ ಕೃಷಿ ಯೋಜನೆ

ದೇಶದಲ್ಲಿ 43% ಮಳೆ ಕೊರತೆ ದಾಖಲಾಗಿರುವ ಹಿನ್ನೆಲೆ ಎಲ್ ನಿನೋ ಪರಿಣಾಮ ಎದುರಿಸಲು…

2 days ago

ತೆಂಗು ಬೆಳೆಗೂ ಏರಿದ ಉತ್ಪಾದನಾ ವೆಚ್ಚ, ರೈತರು ಸಂಕಷ್ಟದಲ್ಲಿ – ತಮಿಳುನಾಡಿನಲ್ಲಿ ತೆಂಗು ಬೆಳೆಗಾರರಿಗೆ ಕಾರ್ಮಿಕರ ಕೊರತೆ

ತೆಂಗು ಬೆಳೆಗಾರರು ಕಾರ್ಮಿಕ ಕೊರತೆ ಮತ್ತು ಹೆಚ್ಚುತ್ತಿರುವ ಕೂಲಿ ವೆಚ್ಚದಿಂದ ಸಂಕಷ್ಟ ಎದುರಿಸುತ್ತಿದ್ದಾರೆ.…

2 days ago