Advertisement
ಸುದ್ದಿಗಳು

ವಿಕಲಚೇತನರಿಗೆ ಸರ್ಕಾರದಿಂದ ಲಭ್ಯವಿರುವ ಸೌಲಭ್ಯಗಳು

Share

ಕರ್ನಾಟಕ ಸರ್ಕಾರದ ವಿಕಲಚೇತನರು ಮತ್ತು ಹಿರಿಯ ನಾಗರಿಕ ಸಬಲೀಕರಣ ಇಲಾಖೆಯು “ಸಾಧನೆ” ಯೋಜನೆಯ ಮೂಲಕ ವಿಕಲಚೇತನ ವಿದ್ಯಾರ್ಥಿಗಳನ್ನು ಬೆಂಬಲಿಸುವ ದೃಷ್ಟಿಯಿಂದ ಅವರ ಶಿಕ್ಷಣಕ್ಕೆ ಅಗತ್ಯ ಬೆಂಬಲ ನೀಡುವುದರ ಜೊತೆಗೆ ಸಮಗ್ರ ಶಿಕ್ಷಣ ಚೌಕಟ್ಟಿನಡಿ ಕಾರ್ಯನಿರ್ವಹಿಸುವ ಈ ಉಪಕ್ರಮವು ದೃಷ್ಟಿ, ಶ್ರವಣ ಮತ್ತು ದೈಹಿಕ ವಿಕಲತೆಗಳಿರುವ ವಿದ್ಯಾರ್ಥಿಗಳಿಗೆ ವಿಶೇಷ ಸೌಲಭ್ಯಗಳನ್ನು ಒದಗಿಸುತ್ತದೆ.

ಯಾವೆಲ್ಲ ಸೌಲಭ್ಯಗಳು:

  • ಶುಲ್ಕ ಮರುಪಾವತಿ: SSLC ನಂತರದ ಕೋರ್ಸ್ ಗಳಲ್ಲಿ ಪ್ರವೇಶ ಶುಲ್ಕ, ಟ್ಯೂಷನ್ ಫೀಸ್, ಪ್ರಯೋಗಾಲಯ ಮತ್ತು ಲೈಬ್ರರಿ ಶುಲ್ಕಗಳನ್ನು ಸಂಪೂರ್ಣ ಮರುಪಾವತಿ ಮಾಡಲಾಗುತ್ತದೆ.
  • ಆಧುನಿಕ ಸಾಧನಗಳು: ಟಾಕಿಂಗ್ ಲ್ಯಾಪ್ ಟಾಪ್ ಗಳು, ಬ್ರೈಲ್ ಕಿಟ್ ಗಳು, ಶ್ರವಣ ಸಾಧನಗಳು ಮತ್ತು ಕೃತಕ ಅಂಗಗಳು ಉಚಿತವಾಗಿ ವಿತರಣೆ. ಕೇಂದ್ರ ಸಹಯೋಗದೊಂದಿಗೆ ಇದು ವಿಸ್ತರಣೆಗೊಂಡಿದೆ.
  • ಮೂಲಸೌಕರ್ಯ: ವಿಶೇಷ ಶಾಲೆಗಳಲ್ಲಿ ಶಿಕ್ಷಕರ ವೇತನ ಮತ್ತು ಸೌಲಭ್ಯಗಳ ಅಭಿವೃದ್ಧಿ.
  • ಇತರೆ, ಸೌಲಭ್ಯಗಳು: ಉಚಿತ ಬಸ್ ಪಾಸ್, ಪ್ರತಿಭಾ ಪುರಸ್ಕಾರ ಮತ್ತು ಪುನರ್ವಸತಿ ಸಾಧನಗಳು.
  • ವಿದ್ಯಾರ್ಥಿ ವೇತನ: 1ನೇ ತರಗತಿಯಿಂದ ಸ್ನಾತಕೋತ್ತರ ಮಟ್ಟದವರೆಗೆ ವಾರ್ಷಿಕ ಹಣಕಾಸು ನೆರವು. ಮೆರಿಟ್ ಆಧಾರದಲ್ಲಿ ಹೆಚ್ಚಿನ ಮೊತ್ತ ಸಿಗುತ್ತದೆ.

ಬೇಕಾಗುವ ದಾಖಲೆಗಳು:
• ವಿಕಲಚೇತನ ಗುರುತಿನ ಚೀಟಿ
• ಆಧಾರ್ ಕಾರ್ಡ್
• ಜಾತಿ ಮತ್ತು ಆದಾಯ ಪ್ರಮಾಣಪತ್ರ
• ಬ್ಯಾಂಕ್ ಪಾಸ್ ಬುಕ್ ಪ್ರತಿ
• ಶೈಕ್ಷಣಿಕ ಪ್ರಮಾಣಪತ್ರಗಳು ಮತ್ತು ಹಿಂದಿನ ಅಂಕಪಟ್ಟಿ
• ಪಾಸ್ ಪೋರ್ ಸೈಜ್ ಫೋಟೋ
• ಕುಟುಂಬದ ಸಂಖ್ಯೆ ಅಥವಾ ಕಾಲೇಜು ನೋಂದಣಿ ಸಂಖ್ಯೆ
ಅರ್ಜಿ ಸಲ್ಲಿಸುವ ವಿಧಾನ:
• ಅಧಿಕೃತ ವೆಬ್ ಸೈಟ್ ನಲ್ಲಿ ಇಲಾಖೆಯ ಸೇವೆಗಳ ವಿಭಾಗ ಇದರಲ್ಲಿ ವಿಕಲಚೇತನರ ಸಬಲೀಕರಣ ಇಲಾಖೆ ಆಯ್ಕೆಮಾಡಿ. ಅಗತ್ಯ ದಾಖಲೆಗಳಲ್ಲಿ ಅಪ್ ಲೋಡ್ ಮಾಡುವುದು.  ಅರ್ಜಿಯ ಕೊನೆಯ ದಿನಾಂಕ: 31.112026

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ರೂರಲ್‌ ಮಿರರ್ ಸುದ್ದಿಜಾಲ

Published by
ರೂರಲ್‌ ಮಿರರ್ ಸುದ್ದಿಜಾಲ

Recent Posts

“ಕೃಷಿ ಕೂಳೆ ಸುಡುವುದು ಮುಗಿದುಹೋಯ್ತು…!” | ರೈತರಿಗೆ ಹೊಸ ಆದಾಯದ ದಾರಿ, ಕೂಳೆಯಿಂದ ಬಿಟುಮೆನ್ ತಯಾರಿ

ಕೃಷಿ ಕೂಳೆ ಈಗ ಮಾಲಿನ್ಯದ ಮೂಲವಲ್ಲ, ರೈತರಿಗೆ ಆದಾಯದ ಮೂಲವಾಗುತ್ತಿದೆ. ಬಯೋ-ಬಿಟುಮೆನ್ ತಂತ್ರಜ್ಞಾನ…

18 hours ago

“ಮಹಿಳೆಯರಿಗೆ ಶಕ್ತಿ ನೀಡಿದರೆ ಕೃಷಿ ಬಲವಾಗುತ್ತದೆ..!” | ವಿಶ್ವದ ಗಮನ ಸೆಳೆಯುತ್ತಿದೆ ಇನ್‌ಕ್ಲೂಸಿವ್‌ ಅಗ್ರಿಕಲ್ಚರ್‌ ಮಾದರಿ

ಮಹಿಳೆಯರನ್ನು ಕೃಷಿ ಮೌಲ್ಯ ಸರಪಳಿಯಲ್ಲಿ ಸೇರಿಸಿದರೆ ಆದಾಯ ಮತ್ತು ಉತ್ಪಾದನೆ ಹೆಚ್ಚುತ್ತದೆ. Inclusive…

18 hours ago

‘ಗ್ರೀನ್ ಕ್ರೈಮ್’ | ಹವಾಮಾನ ಸಂಕಷ್ಟವಲ್ಲ, ಇದು “ಪರಿಸರ ಅಪರಾಧ” | ಮನೋವಿಜ್ಞಾನಿಯ ಪುಸ್ತಕ ಜಗತ್ತಿಗೆ ಎಚ್ಚರಿಕೆ

ಪರಿಸರ ನಾಶವು ಕೇವಲ ಸಮಸ್ಯೆಯಲ್ಲ, ಅದು ಅಪರಾಧ ಎಂಬುದನ್ನು “ಗ್ರೀನ್ ಕ್ರೈಮ್” ಪುಸ್ತಕ…

18 hours ago

ಘಾನಾದಲ್ಲಿ ಮರ ಬೆಳೆ ವೈವಿಧ್ಯೀಕರಣ ಅಭಿಯಾನಕ್ಕೆ ಚಾಲನೆ | ಕೃಷಿ ಕ್ಷೇತ್ರದಲ್ಲಿ ಮಹತ್ವದ ಪರಿವರ್ತನೆ

ಘಾನಾದಲ್ಲಿ ಮರ ಬೆಳೆ ವೈವಿಧ್ಯೀಕರಣ ಯೋಜನೆ ಆರಂಭಗೊಂಡಿದ್ದು, ರೈತರ ಆದಾಯ ಹೆಚ್ಚಿಸಲು ಮತ್ತು…

1 day ago

ಹವಾಮಾನ ವರದಿ | 30-03-2026 | ಇವತ್ತಿನ ಮಳೆ ಎಲ್ಲಿ…? ಎಷ್ಟು ದಿನ ಇದೆ ಮಳೆ…?

ಕರ್ನಾಟಕದ ವಿವಿಧ ಭಾಗಗಳಲ್ಲಿ ಮತ್ತೆ ಮಳೆಯ ಚಟುವಟಿಕೆ ಹೆಚ್ಚಾಗಿದ್ದು, ಕರಾವಳಿ, ಮಲೆನಾಡು ಹಾಗೂ…

2 days ago

ರಾಜ್ಯದ ಹಲವೆಡೆ ಮಳೆ ; ಬೆಂಗಳೂರಿನಲ್ಲಿ ಹಗುರ ಮಳೆ ಸಾಧ್ಯತೆ

ರಾಜ್ಯದ ಹಲವೆಡೆ ಮಳೆಯಾಗಿದ್ದು, ಬೆಂಗಳೂರಿನಲ್ಲಿ ಮುಂದಿನ 24 ಗಂಟೆಗಳಲ್ಲಿ ಹಗುರ ಮಳೆಯ ಸಾಧ್ಯತೆ…

2 days ago