Advertisement
ಸುದ್ದಿಗಳು

ಗ್ಯಾರಂಟಿ ಫಲಾನುಭವಿಗಳಿಗೆ ವಿಳಂಬವಿಲ್ಲದೆ ಸೌಲಭ್ಯ ತಲುಪಿಸಿ

Share

ರಾಜ್ಯ ಸರ್ಕಾರದ ಪಂಚಗ್ಯಾರಂಟಿ ಯೋಜನೆಗಳ ಅನುಷ್ಟಾನವನ್ನು ಸಮರ್ಪಕವಾಗಿ ಮಾಡಬೇಕು. ಅರ್ಹ ಫಲಾನುಭವಿಗಳಿಗೆ  ಯೋಜನೆಗಳ ಸೌಲಭ್ಯ ತಲುಪಿಸಲು ವಿಳಂಬ ಮಾಡಬಾರದು. ಈ ನಿಟ್ಟಿನಲ್ಲಿ ಸಂಬಂಧಪಟ್ಟ ಅಧಿಕಾರಿಗಳು ಸೂಕ್ತ ಕ್ರಮವಹಿಸಬೇಕು ಎಂದು  ದಕ್ಷಿಣ ಕನ್ನಡ ಜಿಲ್ಲಾ ಮಟ್ಟದ  ಗ್ಯಾರಂಟಿ  ಯೋಜನೆಗಳ  ಅನುಷ್ಟಾನ ಸಮಿತಿ ಅಧ್ಯಕ್ಷ   ಭರತ್ ಮುಂಡೋಡಿ ಹೇಳಿದ್ದಾರೆ.

ಅವರು ಬುಧವಾರ  ದ.ಕ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ನಡೆದ ಜಿಲ್ಲಾ ಮಟ್ಟದ  ಗ್ಯಾರಂಟಿ  ಯೋಜನೆಗಳ  ಅನುಷ್ಟಾನದ ಪ್ರಗತಿ ಪರಿಶೀಲನೆ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.  ಫಲಾನುಭವಿಗಳಿಗೆ ಸೌಲಭ್ಯಗಳನ್ನು ನಿಗದಿತ ಸಮಯದಲ್ಲಿಯೇ ತಲುಪಿಸಬೇಕು. ಯೋಜನೆಗಳ  ಸದುಪಯೋಗವನ್ನು ಎಲ್ಲಾ ಅರ್ಹ ಫಲಾನುಭವಿಗಳಿಗೆ ಮುಟ್ಟಿಸಲು ಅಧಿಕಾರಿಗಳು ಕ್ರಮವಹಿಸಬೇಕು ಎಂದು  ಸೂಚಿಸಿದರು. ತಾಲೂಕು ವ್ಯಾಪ್ತಿಗೆ ಒಳಪಡುವ ಜನರಿಗೆ ಯೋಜನೆಗಳ ಸೌಲಭ್ಯ  ದೊರಕುತ್ತಿದೆಯೇ ಎಂಬ ಮಾಹಿತಿ ಪಡೆದು, ಸೌಲಭ್ಯಗಳು ಸಿಗದೇ  ಇದ್ದಲ್ಲಿ  ಸಂಬಂಧಿಸಿದ ಅಧಿಕಾರಿಗಳ ಗಮನಕ್ಕೆ  ತರಬೇಕು ಎಂದು ಅವರು ಸೂಚಿಸಿದರು.

ಗೃಹಲಕ್ಷ್ಮಿ ಯೋಜನೆಯಡಿ ಒಟ್ಟು ಪಡಿತರ ಚೀಟಿ ಹೊಂದಿರುವ ಫಲಾನುಭವಿಗಳ ಪೈಕಿ ಆಗಸ್ಟ್  16 ರಿಂದ  ಸೆಪ್ಟೆಂಬರ್ 8  ರವರೆಗೆ ಒಟ್ಟು 184 ಫಲಾನುಭವಿಗಳು ನೋಂದಾಯಿಸಿಕೊಂಡಿದ್ದು, ಒಟ್ಟಾರೆಯಾಗಿ 3,79,452 ಫಲಾನುಭವಿಗಳು ಯೋಜನೆಗೆ ನೋಂದಾಯಿಸಿಕೊಂಡಿರುತ್ತಾರೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕರು  ಸಭೆಗೆ ಮಾಹಿತಿ ನೀಡಿದರು.

ಎಲ್ಲಾ ನ್ಯಾಯಬೆಲೆ ಅಂಗಡಿಗಳಿಗೆ “ಅನ್ನ ಭಾಗ್ಯ” ಯೋಜನೆಯ ಬ್ಯಾನರ್‍ಗಳನ್ನು ಸರಬರಾಜು ಮಾಡಬೇಕು. ಎಲ್ಲಾ ಕಡೆಗಳಲ್ಲಿ ಬ್ಯಾನರ್‍ಗಳನ್ನು ಅಳವಡಿಸಿರುವುದಿಲ್ಲ ಎಂದು ಮುಲ್ಕಿ ತಾಲೂಕು ಮಟ್ಟದ ಗ್ಯಾರಂಟಿ ಯೋಜನೆಯ ಅನುಷ್ಟಾನ ಪ್ರಾಧಿಕಾರದ ಅಧ್ಯಕ್ಷರು ತಿಳಿಸಿದಾಗ, ಸರ್ಕಾರದಿಂದ ಬ್ಯಾನರ್‍ಗಳನ್ನು ನೀಡಲಾದ ಬಗ್ಗೆ ಪರಿಶೀಲನೆ ನಡೆಸುವಂತೆ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಉಪ ನಿರ್ದೇಶಕರಿಗೆ  ಸಭಾಧ್ಯಕ್ಷರು ಸೂಚಿಸಿದರು.

ಕೌಶಲ್ಯ ತರಬೇತಿ  ಕಾರ್ಯಕ್ರಮಗಳನ್ನು ಮಾಡುವುದರಿಂದ   ಯುವಜನತೆಯ ಮುಂದಿನ ಭವಿಷ್ಯಕ್ಕೆ ಅನುಕೂಲವಾಗುತ್ತದೆ.  ಹಾಗೆಯೇ  ಉದ್ಯೋಗ ಇಲಾಖೆ ಹಾಗೂ ಜಿಲ್ಲಾ ಹಾಗೂ  ಗ್ಯಾರಂಟಿ  ಯೋಜನೆಗಳ  ಅನುಷ್ಟಾನ ಸಮಿತಿ ವತಿಯಿಂದ ಜಿಲ್ಲೆಯಲ್ಲಿ  ಉದ್ಯೋಗ ಮೇಳ  ಮಾಡಲು  ಸೂಚಿಸಿದರು.

ಸಭೆಯಲ್ಲಿ  ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ  ನರ್ವಾಡೆ ವಿನಾಯಕ ಕಾರ್ಭಾರಿ,   ಜಿಲ್ಲಾ ಪಂಚಾಯತ್ ಮುಖ್ಯ  ಯೋಜನಾಧಿಕಾರಿ ಸಂಧ್ಯಾ  ಕೆ.ಎಸ್,  ಜಿಲ್ಲಾ ಹಾಗೂ ತಾಲೂಕು ಮಟ್ಟದ  ಗ್ಯಾರಂಟಿ  ಯೋಜನೆಗಳ  ಅನುಷ್ಟಾನ ಪ್ರಾಧಿಕಾರದ ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರು ಉಪಸ್ಥಿತರಿದ್ದರು. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿಗಾಗಿ  ನಮ್ಮ “ದ ರೂರಲ್‌ ಮಿರರ್.ಕಾಂ”WhatsApp Channel  ಗೆ ಇಲ್ಲಿ ಕ್ಲಿಕ್‌ ಮಾಡಿ..

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಮುಂದುವರಿದ ಮಳೆ ಅಬ್ಬರ : ಆಗಸ್ಟ್‌ 4ರಂದು ದ ಕ -ಉಡುಪಿ-ಕಾಸರಗೋಡು ಜಿಲ್ಲೆಯ ಕೆಲವು ಶಾಲೆ-ಕಾಲೇಜುಗಳಿಗೆ ರಜೆ ಘೋಷಣೆ

ಭಾರಿ ಮಳೆಯ ಹಿನ್ನೆಲೆಯಲ್ಲಿ ಆಗಸ್ಟ್‌ 4ರಂದು ದಕ್ಷಿಣ ಕನ್ನಡ, ಉಡುಪಿ ಹಾಗೂ ಕಾಸರಗೋಡು…

6 hours ago

ಯಡಕುಮೇರಿ ಹಳಿ ದುರಸ್ತಿ ಪೂರ್ಣ : ಮಂಗಳೂರು–ಬೆಂಗಳೂರು ರೈಲು ರೈಲು ಸಂಚಾರ ಪುನರಾರಂಭ

ಯಡಕುಮೇರಿ ಭೂಕುಸಿತ ಪ್ರದೇಶದಲ್ಲಿ ಮಣ್ಣು ತೆರವು ಹಾಗೂ ಹಳಿ ದುರಸ್ತಿ ಕಾಮಗಾರಿ ಪೂರ್ಣಗೊಂಡಿದ್ದು,…

6 hours ago

ಹಗಲು ನಿದ್ರೆ ಅನೇಕ ರೋಗಗಳಿಗೆ ಆಹ್ವಾನ ; ಔಷಧಿಗಿಂತ ಉತ್ತಮ ಜೀವನಶೈಲಿಯೇ ಪರಿಹಾರ: ರಾಘವೇಶ್ವರ ಶ್ರೀ

ಹಗಲು ನಿದ್ರೆ ಅನೇಕ ಆರೋಗ್ಯ ಸಮಸ್ಯೆಗಳಿಗೆ ಕಾರಣವಾಗಬಹುದು ಎಂದು ರಾಘವೇಶ್ವರ ಶ್ರೀ ಎಚ್ಚರಿಸಿದ್ದಾರೆ.…

8 hours ago

ಕೇರಳದಲ್ಲಿ ಭಾರಿ ಮಳೆ ಆರ್ಭಟ : ಮಲಪ್ಪುರಂನಲ್ಲಿ ಸರಣಿ ಭೂಕುಸಿತ , ಸಂಚಾರ ಸಂಪೂರ್ಣ ಸ್ಥಗಿತ

ಕೇರಳದ ಮಲಪ್ಪುರಂ ಜಿಲ್ಲೆಯಲ್ಲಿ ಭಾರಿ ಮಳೆಯಿಂದ ರಾಜ್ಯ ಹೆದ್ದಾರಿಯಲ್ಲಿ ಭೂಕುಸಿತ ಸಂಭವಿಸಿ ವಾಹನ…

11 hours ago