ಪೆಟ್ರೋಲಿಯಂ ಸಂಸ್ಥೆಗಳ ನೋಂದಣಿ ಅಥವಾ ಲೈಸೆನ್ಸ್ ನವೀಕರಣದ ಹೆಸರಿನಲ್ಲಿ ಸುಳ್ಳು ಕರೆಗಳು ಬರುತ್ತಿರುವ ಕುರಿತು ಕಾರ್ಮಿಕ ಇಲಾಖೆ ಎಚ್ಚರಿಕೆ ನೀಡಿದೆ.
ಶಿವರಾಜ್ ಎಂಬ ಹೆಸರಿನ ವ್ಯಕ್ತಿ (ಮೊಬೈಲ್ ಸಂಖ್ಯೆ: 8150816922) ತಾನು ಕಾರ್ಮಿಕ ಇಲಾಖೆಯ ಇನ್ಸ್ಪೆಕ್ಟರ್ ಎಂದು ಹೇಳಿಕೊಂಡು, ಲೈಸೆನ್ಸ್ ನವೀಕರಣಕ್ಕಾಗಿ ರೂ.11,700ನ್ನು ಫೋನ್ಪೇ ಮೂಲಕ ಪಾವತಿಸಲು ಒತ್ತಾಯಿಸುತ್ತಿರುವುದು ಗಮನಕ್ಕೆ ಬಂದಿದೆ. ಹಣ ಪಾವತಿಸದಿದ್ದರೆ ಕಾನೂನು ಕ್ರಮ ಕೈಗೊಳ್ಳುವುದಾಗಿ ಬೆದರಿಕೆ ಹಾಕುತ್ತಿರುವುದಾಗಿ ಮಾಹಿತಿ ಲಭ್ಯವಾಗಿದೆ.
ಈ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ಅಂಗಡಿ–ವಾಣಿಜ್ಯ ಸಂಸ್ಥೆಗಳು ಹಾಗೂ ವಿಶೇಷವಾಗಿ ಪೆಟ್ರೋಲಿಯಂ ಸಂಸ್ಥೆಗಳ ಮಾಲೀಕರು ಇಂತಹ ಕರೆಗಳಿಗೆ ಯಾವುದೇ ರೀತಿಯ ಪ್ರತಿಕ್ರಿಯೆ ನೀಡಬಾರದು ಹಾಗೂ ಹಣ ಪಾವತಿಸಬಾರದು ಎಂದು ಕಾರ್ಮಿಕ ಇಲಾಖೆ ಮನವಿ ಮಾಡಿದೆ.
ಇಂತಹ ಸುಳ್ಳು ಕರೆಗಳು ಬಂದಲ್ಲಿ, ಸಂಬಂಧಿಸಿದ ದಾಖಲೆಗಳೊಂದಿಗೆ ತಕ್ಷಣವೇ ಸಮೀಪದ ಪೊಲೀಸ್ ಠಾಣೆಗೆ ದೂರು ನೀಡುವಂತೆ ಸೂಚಿಸಲಾಗಿದೆ. ಜೊತೆಗೆ, ಸಂಸ್ಥೆಗಳ ವಾಟ್ಸಪ್ ಗ್ರೂಪ್ಗಳ ಮೂಲಕ ಈ ಎಚ್ಚರಿಕೆ ಮಾಹಿತಿಯನ್ನು ಎಲ್ಲರಿಗೂ ಹಂಚಿಕೊಳ್ಳುವಂತೆ ಮನವಿ ಮಾಡಲಾಗಿದೆ. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿಗಾಗಿ ನಮ್ಮ “ದ ರೂರಲ್ ಮಿರರ್.ಕಾಂ”WhatsApp Channel ಗೆ ಇಲ್ಲಿ ಕ್ಲಿಕ್ ಮಾಡಿ
ಇಂತಹ ಸುಳ್ಳು ಕರೆಗಳಿಂದ ಉಂಟಾಗುವ ಯಾವುದೇ ಆರ್ಥಿಕ ನಷ್ಟಕ್ಕೆ ಇಲಾಖೆಯನ್ನು ಹೊಣೆಗಾರನಾಗಿಸಲು ಸಾಧ್ಯವಿಲ್ಲ ಎಂದು ಕಾರ್ಮಿಕ ಅಧಿಕಾರಿಗಳು ಪ್ರಕಟಣೆಯಲ್ಲಿ ಸ್ಪಷ್ಟಪಡಿಸಿದ್ದಾರೆ.
ಕರಾವಳಿ ಜಿಲ್ಲೆಗಳ ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಅಗತ್ಯ ಅನುದಾನವನ್ನು ಮುಂದಿನ ಬಜೆಟ್ನಲ್ಲಿ ನೀಡಬೇಕೆಂದು…
ಅಡಿಕೆ ಜಗಿಯುವುದು ಕೇವಲ ಸಾಂಪ್ರದಾಯಿಕ ಅಭ್ಯಾಸ ಮಾತ್ರವಲ್ಲ, ಅದು ಗಂಭೀರ ಆರೋಗ್ಯ ಅಪಾಯಗಳಿಗೆ…
ರಾಜ್ಯದಲ್ಲಿ ಹೆಚ್ಚುತ್ತಿರುವ ಮಾನವ–ವನ್ಯಜೀವಿ ಸಂಘರ್ಷ ಹಾಗೂ ಆನೆ ದಾಳಿಗೆ ಶಾಶ್ವತ ಪರಿಹಾರ ಕಂಡುಕೊಳ್ಳಲು…
ದಾವಣಗೆರೆ ಜಿಲ್ಲೆಯಲ್ಲಿ 5 ಮೆಕ್ಕೆಜೋಳ ಖರೀದಿ ಕೇಂದ್ರಗಳಿಂದ 3,412 ರೈತರು 87,258 ಕ್ವಿಂಟಲ್…
ಜಲಜೀವನ್ ಮಿಷನ್ ಯೋಜನೆಯ ಕಾಮಗಾರಿಗಳನ್ನು ಆದಷ್ಟು ಶೀಘ್ರ ಪೂರ್ಣಗೊಳಿಸುವಂತೆ ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್…
ಕರಾವಳಿ ಕರ್ನಾಟಕದ ಅಡಿಕೆ ತೋಟಗಳು ಕಾಡುಪ್ರಾಣಿಗಳ ಹಾವಳಿಯಿಂದ ಭಾರೀ ನಷ್ಟ ಅನುಭವಿಸುತ್ತಿವೆ. ಮಾನವ–ವನ್ಯಜೀವಿ…