ಪೆಟ್ರೋಲಿಯಂ ಸಂಸ್ಥೆಗಳ ನೋಂದಣಿ ಅಥವಾ ಲೈಸೆನ್ಸ್ ನವೀಕರಣದ ಹೆಸರಿನಲ್ಲಿ ಸುಳ್ಳು ಕರೆಗಳು ಬರುತ್ತಿರುವ ಕುರಿತು ಕಾರ್ಮಿಕ ಇಲಾಖೆ ಎಚ್ಚರಿಕೆ ನೀಡಿದೆ.
ಶಿವರಾಜ್ ಎಂಬ ಹೆಸರಿನ ವ್ಯಕ್ತಿ (ಮೊಬೈಲ್ ಸಂಖ್ಯೆ: 8150816922) ತಾನು ಕಾರ್ಮಿಕ ಇಲಾಖೆಯ ಇನ್ಸ್ಪೆಕ್ಟರ್ ಎಂದು ಹೇಳಿಕೊಂಡು, ಲೈಸೆನ್ಸ್ ನವೀಕರಣಕ್ಕಾಗಿ ರೂ.11,700ನ್ನು ಫೋನ್ಪೇ ಮೂಲಕ ಪಾವತಿಸಲು ಒತ್ತಾಯಿಸುತ್ತಿರುವುದು ಗಮನಕ್ಕೆ ಬಂದಿದೆ. ಹಣ ಪಾವತಿಸದಿದ್ದರೆ ಕಾನೂನು ಕ್ರಮ ಕೈಗೊಳ್ಳುವುದಾಗಿ ಬೆದರಿಕೆ ಹಾಕುತ್ತಿರುವುದಾಗಿ ಮಾಹಿತಿ ಲಭ್ಯವಾಗಿದೆ.
ಈ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ಅಂಗಡಿ–ವಾಣಿಜ್ಯ ಸಂಸ್ಥೆಗಳು ಹಾಗೂ ವಿಶೇಷವಾಗಿ ಪೆಟ್ರೋಲಿಯಂ ಸಂಸ್ಥೆಗಳ ಮಾಲೀಕರು ಇಂತಹ ಕರೆಗಳಿಗೆ ಯಾವುದೇ ರೀತಿಯ ಪ್ರತಿಕ್ರಿಯೆ ನೀಡಬಾರದು ಹಾಗೂ ಹಣ ಪಾವತಿಸಬಾರದು ಎಂದು ಕಾರ್ಮಿಕ ಇಲಾಖೆ ಮನವಿ ಮಾಡಿದೆ.
ಇಂತಹ ಸುಳ್ಳು ಕರೆಗಳು ಬಂದಲ್ಲಿ, ಸಂಬಂಧಿಸಿದ ದಾಖಲೆಗಳೊಂದಿಗೆ ತಕ್ಷಣವೇ ಸಮೀಪದ ಪೊಲೀಸ್ ಠಾಣೆಗೆ ದೂರು ನೀಡುವಂತೆ ಸೂಚಿಸಲಾಗಿದೆ. ಜೊತೆಗೆ, ಸಂಸ್ಥೆಗಳ ವಾಟ್ಸಪ್ ಗ್ರೂಪ್ಗಳ ಮೂಲಕ ಈ ಎಚ್ಚರಿಕೆ ಮಾಹಿತಿಯನ್ನು ಎಲ್ಲರಿಗೂ ಹಂಚಿಕೊಳ್ಳುವಂತೆ ಮನವಿ ಮಾಡಲಾಗಿದೆ. ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿಗಾಗಿ ನಮ್ಮ “ದ ರೂರಲ್ ಮಿರರ್.ಕಾಂ”WhatsApp Channel ಗೆ ಇಲ್ಲಿ ಕ್ಲಿಕ್ ಮಾಡಿ
ಇಂತಹ ಸುಳ್ಳು ಕರೆಗಳಿಂದ ಉಂಟಾಗುವ ಯಾವುದೇ ಆರ್ಥಿಕ ನಷ್ಟಕ್ಕೆ ಇಲಾಖೆಯನ್ನು ಹೊಣೆಗಾರನಾಗಿಸಲು ಸಾಧ್ಯವಿಲ್ಲ ಎಂದು ಕಾರ್ಮಿಕ ಅಧಿಕಾರಿಗಳು ಪ್ರಕಟಣೆಯಲ್ಲಿ ಸ್ಪಷ್ಟಪಡಿಸಿದ್ದಾರೆ.
PM-Kisan ಯೋಜನೆಯ 24ನೇ ಕಂತಿನ ಹಣ ಪಡೆಯಲು ಅರ್ಹ ರೈತರು ಬಯೋಮೆಟ್ರಿಕ್ ಅಥವಾ…
ಮುಂಗಾರು ಹಂಗಾಮಿನ ಭತ್ತ ಸೇರಿದಂತೆ ಬೆಳೆಗಳಿಗೆ ಪ್ರಧಾನ ಮಂತ್ರಿ ಫಸಲ್ ಬಿಮಾ ಯೋಜನೆಯಡಿ…
ಕರಾವಳಿ ಕರ್ನಾಟಕದಲ್ಲಿ ಆ.23ರಿಂದ 25ರವರೆಗೆ ಮಳೆಯ ಪ್ರಮಾಣ ಸ್ವಲ್ಪ ಹೆಚ್ಚಾಗುವ ಸಾಧ್ಯತೆಯಿದ್ದು, ಆ.26ರವರೆಗೂ…
ಆಗಸ್ಟ್ 24ರಿಂದ ಒಬ್ಬ ವ್ಯಕ್ತಿಯ ಹೆಸರಿನಲ್ಲಿ 9 ಮೊಬೈಲ್ ಸಂಪರ್ಕಗಳ ಮಿತಿಯನ್ನು ಮೀರಿ…
ಭಾರತದ ತೆಂಗು ವಲಯ ಈಗ ಕಾಯಿ ಮಾರಾಟದಿಂದ ಮೌಲ್ಯವರ್ಧಿತ ಉತ್ಪನ್ನಗಳ ಜಾಗತಿಕ ಮಾರುಕಟ್ಟೆಯತ್ತ…
ಜಾಗತಿಕ ತಾಪಮಾನ ಏರಿಕೆಯಿಂದ ಭಾರತದ ಮಳೆಗಾಲದಲ್ಲೂ ಹೆಚ್ಚಿನ ತೇವಾಂಶದೊಂದಿಗೆ ಅಪಾಯಕಾರಿ ಬಿಸಿ ಒತ್ತಡ…