#Arecanut | ಅಡಿಕೆ ವ್ಯಾಪಾರಕ್ಕಾಗಿ ನಕಲಿ ಬಿಲ್‌ | 9.5 ಕೋಟಿ ರೂಪಾಯಿ ತೆರಿಗೆ ವಂಚನೆ ಪ್ರಕರಣ |

July 28, 2023
10:01 PM
ಅಡಿಕೆ ಸಾಗಾಟದಲ್ಲಿ ನಕಲಿ ಬಿಲ್‌ ತಯಾರಿಸಿ ತೆರಿಗೆ ವಂಚಿಸುವ ಪ್ರಕರಣವನ್ನು ಜಿಎಸ್‌ಟಿ ಅಧಿಕಾರಿಗಳು ಪತ್ತೆ ಮಾಡಿದ್ದಾರೆ. ಸುಮಾರು 9.5 ಕೋಟಿ ರೂಪಾಯಿ ತೆರಿಗೆ ವಂಚಿಸಿದ ಬಗ್ಗೆ ಮಾಹಿತಿ ಲಭ್ಯವಾಗಿದೆ.

ಅಡಿಕೆ ವ್ಯಾಪಾರಕ್ಕಾಗಿ ನಕಲಿ ಬಿಲ್‌ ತಯಾರಿಸಿ ಸುಮಾರು 9.5 ಕೋಟಿ ರೂಪಾಯಿ ತೆರಿಗೆ ವಂಚಿಸಿದ ಪ್ರಕರಣ ಬೆಳಕಿಗೆ ಬಂದಿದೆ. ಈ ಪ್ರಕರಣಕ್ಕೆ ಸಂಬಂಧಿಸಿ ಇಬ್ಬರನ್ನು ಬಂಧಿಸಲಾಗಿದೆ. ಬಂಧಿತರ ಕೇರಳ ಮೂಲದವರಾಗಿದ್ದಾರೆ.

Advertisement
Advertisement

ಕೇರಳ ಮತ್ತು ಕರ್ನಾಟಕದ ಜಿಎಸ್‌ಟಿ ಗುಪ್ತಚರ ಘಟಕದ ಅಧಿಕಾರಿಗಳು ಈ ನಕಲಿ ಸಾಗಾಟವನ್ನು ಪತ್ತೆ ಮಾಡಿದ್ದಾರೆ.  ಅಡಿಕೆ ವ್ಯಾಪಾರಕ್ಕಾಗಿ ನಕಲಿ ಇನ್‌ವಾಯ್ಸ್‌ಗಳನ್ನು ತಯಾರಿಸಿ ಅಡಿಕೆ ಸಾಗಾಟ ಮಾಡುತ್ತಿದ್ದರು. ಅಂತರ್‌ ರಾಜ್ಯ ತೆರಿಗೆ ವಂಚನೆ ಪ್ರಕರಣಕ್ಕೆ ಸಂಬಂಧಿಸಿ  ಅಶ್ರಫ್ (48) ಮತ್ತು ಶೌಕತ್ (54) ಎಂಬವರನ್ನು ಬಂಧಿಸಲಾಗಿದೆ. ಇವರಿಬ್ಬರೂ ಕೇರಳ ಮೂಲದವರು. ಕೇರಳ ಮತ್ತು ಕರ್ನಾಟಕದ ವಿವಿಧ ಸ್ಥಳಗಳಲ್ಲಿ ಶೋಧ ನಡೆಸಿದ ನಂತರ ಕಣ್ಣೂರು ಮತ್ತು ಆಲಪ್ಪುಳದಿಂದ ಅವರನ್ನು ಬಂಧಿಸಲಾಗಿದೆ. ಈಗಿನ ಮಾಹಿತಿ ಪ್ರಕಾರ, ಸುಮಾರು  9.5 ಕೋಟಿಗಳಷ್ಟು ತೆರಿಗೆ ವಂಚನೆಯನ್ನು ಇದುವರೆಗೆ ಮಾಡಲಾಗಿದೆ ಎಂದು  ಜಿಎಸ್‌ಟಿ ಇಲಾಖೆ ತಿಳಿಸಿದೆ.

 

Advertisement
Advertisement
Advertisement

Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಅಡಿಕೆ ಬಳಕೆಯ ನಿಯಂತ್ರಣಕ್ಕೆ ‘MPOWER’ ನೀತಿ ಅಗತ್ಯ : ವಿಶ್ವ ಆರೋಗ್ಯ ಸಂಸ್ಥೆ
January 30, 2026
6:18 PM
by: ವಿಶೇಷ ಪ್ರತಿನಿಧಿ
ಅರೆಕಾನಟ್ ಚಾಲೆಂಜ್ : ಅಡಿಕೆ ನಿಯಂತ್ರಣ ಕುರಿತು WHO ಉತ್ಸುಕತೆ – ಕ್ಲಿನಿಕಲ್ ಪರೀಕ್ಷೆಗಳ ಅಗತ್ಯಕ್ಕೆ ತಜ್ಞರ ಒತ್ತಾಯ
January 30, 2026
6:04 PM
by: ದ ರೂರಲ್ ಮಿರರ್.ಕಾಂ
AI, ಡ್ರೋನ್ ಮತ್ತು ಸ್ವಯಂಚಾಲಿತ ಯಂತ್ರಗಳು | ಕಾರ್ಮಿಕ ಕೊರತೆಯ ನಡುವೆ ಕೃಷಿಗೆ ರೋಬೋಟ್ ಪರಿಹಾರ
January 30, 2026
8:10 AM
by: ದ ರೂರಲ್ ಮಿರರ್.ಕಾಂ
“ಕ್ಯಾನ್ಸರ್ ಮ್ಯಾಪಿಂಗ್” – ರೋಗ ತಡೆಯುವ ಮೊದಲ ಹೆಜ್ಜೆ
January 30, 2026
8:05 AM
by: ಮಿರರ್‌ ಡೆಸ್ಕ್

You cannot copy content of this page - Copyright -The Rural Mirror