ಅಡಿಕೆ ವ್ಯಾಪಾರಕ್ಕಾಗಿ ನಕಲಿ ಬಿಲ್ ತಯಾರಿಸಿ ಸುಮಾರು 9.5 ಕೋಟಿ ರೂಪಾಯಿ ತೆರಿಗೆ ವಂಚಿಸಿದ ಪ್ರಕರಣ ಬೆಳಕಿಗೆ ಬಂದಿದೆ. ಈ ಪ್ರಕರಣಕ್ಕೆ ಸಂಬಂಧಿಸಿ ಇಬ್ಬರನ್ನು ಬಂಧಿಸಲಾಗಿದೆ. ಬಂಧಿತರ ಕೇರಳ ಮೂಲದವರಾಗಿದ್ದಾರೆ.
ಕೇರಳ ಮತ್ತು ಕರ್ನಾಟಕದ ಜಿಎಸ್ಟಿ ಗುಪ್ತಚರ ಘಟಕದ ಅಧಿಕಾರಿಗಳು ಈ ನಕಲಿ ಸಾಗಾಟವನ್ನು ಪತ್ತೆ ಮಾಡಿದ್ದಾರೆ. ಅಡಿಕೆ ವ್ಯಾಪಾರಕ್ಕಾಗಿ ನಕಲಿ ಇನ್ವಾಯ್ಸ್ಗಳನ್ನು ತಯಾರಿಸಿ ಅಡಿಕೆ ಸಾಗಾಟ ಮಾಡುತ್ತಿದ್ದರು. ಅಂತರ್ ರಾಜ್ಯ ತೆರಿಗೆ ವಂಚನೆ ಪ್ರಕರಣಕ್ಕೆ ಸಂಬಂಧಿಸಿ ಅಶ್ರಫ್ (48) ಮತ್ತು ಶೌಕತ್ (54) ಎಂಬವರನ್ನು ಬಂಧಿಸಲಾಗಿದೆ. ಇವರಿಬ್ಬರೂ ಕೇರಳ ಮೂಲದವರು. ಕೇರಳ ಮತ್ತು ಕರ್ನಾಟಕದ ವಿವಿಧ ಸ್ಥಳಗಳಲ್ಲಿ ಶೋಧ ನಡೆಸಿದ ನಂತರ ಕಣ್ಣೂರು ಮತ್ತು ಆಲಪ್ಪುಳದಿಂದ ಅವರನ್ನು ಬಂಧಿಸಲಾಗಿದೆ. ಈಗಿನ ಮಾಹಿತಿ ಪ್ರಕಾರ, ಸುಮಾರು 9.5 ಕೋಟಿಗಳಷ್ಟು ತೆರಿಗೆ ವಂಚನೆಯನ್ನು ಇದುವರೆಗೆ ಮಾಡಲಾಗಿದೆ ಎಂದು ಜಿಎಸ್ಟಿ ಇಲಾಖೆ ತಿಳಿಸಿದೆ.
ನಾಗಾಲ್ಯಾಂಡ್ನಲ್ಲಿ ರಬ್ಬರ್ ಕೃಷಿ ಸುಮಾರು 29,794 ಹೆಕ್ಟೇರ್ಗೆ ವಿಸ್ತರಿಸಿರುವ ಬೆನ್ನಲ್ಲೇ ಜಾರ್ಖಂಡ್ನಲ್ಲಿ ಸೂಕ್ತ…
ದಾವಣಗೆರೆ ಜಿಲ್ಲೆಯಲ್ಲಿ 15 ದಿನಗಳಿಂದ ಮಳೆ ಕೊರತೆಯಾಗಿದ್ದು, ಮುಂದಿನ ಕೆಲ ದಿನಗಳಲ್ಲೂ ಮಳೆಯಾಗದಿದ್ದರೆ…
ಸೆ.8ರಿಂದ ಮಲೆನಾಡು ಹಾಗೂ ದಕ್ಷಿಣ ಒಳನಾಡಿನಲ್ಲಿ ಮತ್ತೆ ಮಳೆ ಚಟುವಟಿಕೆ ಹೆಚ್ಚಾಗುವ ಸಾಧ್ಯತೆಯಿದೆ.…
ಬೇರೊಬ್ಬರ ಬದುಕಿನೊಂದಿಗೆ ನಿರಂತರ ಹೋಲಿಕೆ ನಮ್ಮ ನೆಮ್ಮದಿ ಮತ್ತು ಆತ್ಮವಿಶ್ವಾಸವನ್ನು ಕಸಿದುಕೊಳ್ಳಬಹುದು. ಮತ್ತೊಬ್ಬರ…
ಶಿಕ್ಷಕರ ದಿನಾಚರಣೆ ಶಿಕ್ಷಕರನ್ನು ಸನ್ಮಾನಿಸುವ ದಿನ ಮಾತ್ರವಲ್ಲ, ಶಿಕ್ಷಕತ್ವ ಮತ್ತು ಶಿಕ್ಷಣದ ನಿಜವಾದ…
ಮುಂಗಾರು ಮಳೆ ಕೊರತೆ ಹಿನ್ನೆಲೆಯಲ್ಲಿ ಕರ್ನಾಟಕದಲ್ಲಿ ₹28.52 ಕೋಟಿ ವೆಚ್ಚದ 60 ದಿನಗಳ…