ಅಡಿಕೆ ವ್ಯಾಪಾರಕ್ಕಾಗಿ ನಕಲಿ ಬಿಲ್ ತಯಾರಿಸಿ ಸುಮಾರು 9.5 ಕೋಟಿ ರೂಪಾಯಿ ತೆರಿಗೆ ವಂಚಿಸಿದ ಪ್ರಕರಣ ಬೆಳಕಿಗೆ ಬಂದಿದೆ. ಈ ಪ್ರಕರಣಕ್ಕೆ ಸಂಬಂಧಿಸಿ ಇಬ್ಬರನ್ನು ಬಂಧಿಸಲಾಗಿದೆ. ಬಂಧಿತರ ಕೇರಳ ಮೂಲದವರಾಗಿದ್ದಾರೆ.
ಕೇರಳ ಮತ್ತು ಕರ್ನಾಟಕದ ಜಿಎಸ್ಟಿ ಗುಪ್ತಚರ ಘಟಕದ ಅಧಿಕಾರಿಗಳು ಈ ನಕಲಿ ಸಾಗಾಟವನ್ನು ಪತ್ತೆ ಮಾಡಿದ್ದಾರೆ. ಅಡಿಕೆ ವ್ಯಾಪಾರಕ್ಕಾಗಿ ನಕಲಿ ಇನ್ವಾಯ್ಸ್ಗಳನ್ನು ತಯಾರಿಸಿ ಅಡಿಕೆ ಸಾಗಾಟ ಮಾಡುತ್ತಿದ್ದರು. ಅಂತರ್ ರಾಜ್ಯ ತೆರಿಗೆ ವಂಚನೆ ಪ್ರಕರಣಕ್ಕೆ ಸಂಬಂಧಿಸಿ ಅಶ್ರಫ್ (48) ಮತ್ತು ಶೌಕತ್ (54) ಎಂಬವರನ್ನು ಬಂಧಿಸಲಾಗಿದೆ. ಇವರಿಬ್ಬರೂ ಕೇರಳ ಮೂಲದವರು. ಕೇರಳ ಮತ್ತು ಕರ್ನಾಟಕದ ವಿವಿಧ ಸ್ಥಳಗಳಲ್ಲಿ ಶೋಧ ನಡೆಸಿದ ನಂತರ ಕಣ್ಣೂರು ಮತ್ತು ಆಲಪ್ಪುಳದಿಂದ ಅವರನ್ನು ಬಂಧಿಸಲಾಗಿದೆ. ಈಗಿನ ಮಾಹಿತಿ ಪ್ರಕಾರ, ಸುಮಾರು 9.5 ಕೋಟಿಗಳಷ್ಟು ತೆರಿಗೆ ವಂಚನೆಯನ್ನು ಇದುವರೆಗೆ ಮಾಡಲಾಗಿದೆ ಎಂದು ಜಿಎಸ್ಟಿ ಇಲಾಖೆ ತಿಳಿಸಿದೆ.
ರಾಜ್ಯದಲ್ಲಿ ಮುಂದಿನ ಎರಡು ದಿನ ಮಳೆಯ ಪ್ರಮಾಣ ಕಡಿಮೆ ಇರಲಿದ್ದು, ಏಪ್ರಿಲ್ 25ರಿಂದ…
ರಾಜ್ಯದ ಕರಾವಳಿ ಮತ್ತು ಮಲೆನಾಡಿನಲ್ಲಿ ಮಳೆ ಮುಂದುವರಿಯಲಿದ್ದು, ಉತ್ತರ ಒಳನಾಡಿನಲ್ಲಿ ಏಪ್ರಿಲ್ 25ರವರೆಗೆ…
ವಿದ್ಯುತ್ ದರ ಏರಿಕೆ ಮತ್ತು ಹಿಂಬದಿ ಬಿಲ್ಲಿಂಗ್ ಕ್ರಮದಿಂದ ಸಣ್ಣ ಮತ್ತು ಮಧ್ಯಮ…
ಮುಳಬಾಗಿಲಿನ ಹೋಟೆಲ್ ಮೇಲೆ ದಾಳಿ ನಡೆಸಿ 30 ಲೀಟರ್ ಅವಧಿ ಮೀರಿದ ತುಪ್ಪ…
ತೊಗರಿ ಬೆಳೆಗಾರರ ಹಿತಕ್ಕಾಗಿ ಖರೀದಿ ಅವಧಿಯನ್ನು ಮೇ 15ರವರೆಗೆ ವಿಸ್ತರಿಸಲಾಗಿದೆ. ಇದರಿಂದ ರೈತರಿಗೆ…
ವಿಜಯಪುರದಲ್ಲಿ ಬಿಸಿಲಿನ ತೀವ್ರತೆ ಹೆಚ್ಚಳ ಹಿನ್ನೆಲೆ ಜಿಲ್ಲಾಸ್ಪತ್ರೆಯಲ್ಲಿ 10 ಬೆಡ್ ವಿಶೇಷ ವಾರ್ಡ್…